News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಗುಲ ದರ್ಶನ

ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

1934

ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ.

ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ ರಸ್ತೆಯಲ್ಲಿ ಈ ಪ್ರದೇಶವಿದ್ದು , ಶಾಲ್ಮಲಾ ನದಿಯ ಒಟ್ಟು ಜಾಗವನ್ನು ಸಂರಕ್ಷಿತ ಪ್ರದೇಶವೆಂದು ಘೋಶಿಸಲಾಗಿದೆ. ದಾರಿಯುದ್ದಕ್ಕೂ ಪಕ್ಷಿಗಳ ಕಲರವ, ಮತ್ತೆ ಮತ್ತೆ ಸವಯಬೇಕೆನ್ನುವ ಕಾಡು ಹಣ್ಣುಗಳು,ಸುವಾಸಿತ ಹೂವುಗಳು ಜನರನ್ನು ಸೆಳೆಯುತ್ತದೆ.

ಶಿರಸಿಯಿಂದ ಬಾಡಿಗೆಗೆ ಜೀಪುಗಳನ್ನು ಪಡೆದು ಇಲ್ಲಿಗೆ ತೆರಳುವುದು ಬಲು ಸೂಕ್ತ. ಇನ್ನುಳಿದಂತೆ ನಿಮ್ಮ ಸ್ವಾಂತ ವಾಹನಗಳಿದ್ದರೆ ಸಾಕಷ್ಟು ಅನುಕೂಲ, ಏಕೆಂದರೆ ಇದರ ಸುತ್ತಮುತ್ತಲೂ ಸಾಕಷ್ಟು ಇತರೆ ನೈಸರ್ಗಿಕ ಆಕರ್ಷಣೆಗಳನ್ನು ಆನಂದದಿಂದ ನೋಡಬಹುದು.

ಇನ್ನುಳಿದಂತೆ, ಇಲ್ಲಿ ಯಾವುದೆ ರೀತಿಯ ಉಪಹಾರಗೃಹಗಳಿಲ್ಲ. ಕಾರಣ ನೀವು ಶಿರಸಿಯಿಂದಲೆ ಊಟದ ವ್ಯವಸ್ಥೆ ಮಾಡಿಕೊಂಡು ಬಂದಿದ್ದಲ್ಲಿ ಇಲ್ಲಿನ ಪ್ರಶಾಂತ ಹಾಗೂ ರಮಣೀಯ ಪರಿಸರದ ಮಧ್ಯೆ ಹಾಯಾಗಿ ವಿಶ್ರಾಂತಿ ತೆಗೆದುಕೊಳ್ಳುತ್ತ ಊಟ ಸವಿಯಬಹುದು. ಆದರೆ ದಯವಿಟ್ಟು ಈ ಸ್ಥಳದಲ್ಲಿ ಗಲೀಜು ಮಾಡದಂತೆ ನೋಡಿಕೊಂಡರೆ ಸಾಕು.

ಶಿರಸಿ ಪ್ರದೇಶದಲ್ಲಿ ಹಿಂದೆ 1678-1718 ರ ಸಮಯದಲ್ಲಿ ಆಳುತ್ತಿದ್ದ ಸದಾಶಿವರಾಯ ಅರಸನು ಈ ಶಿವಲಿಂಗಗಳ ನಿರ್ಮಾತೃ ಎನ್ನಲಾಗಿದೆ. ಶಿವನ ಪರಮ ಭಕ್ತನಾಗಿದ್ದ ಇತ ಇಲ್ಲಿ ಹರಿದಿರುವ ಶಲ್ಮಲಾ ನದಿಯ ತಟದ ಕಲ್ಲುಗಳ ಮೇಲೆ, ನೀರೊಳಗಿನ ಕಲ್ಲುಗಳ ಮೇಲೆ ಹೀಗೆ ಎಲ್ಲೆಂದರಲ್ಲಿ ಶಿವಲಿಂಗಗಳನ್ನು ಕೆತ್ತಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಸಿನಿಮಾ

    ‘ಒಂದು ಮೊಟ್ಟೆಯ ಕಥೆ’ಇದು ಕನ್ನಡದ ಸಿನಿಮಾ!ಈ ಸಿನಿಮಾ ಹೇಗಿದೆ ಗೊತ್ತಾ?ಈ ಲೇಖನಿ ಓದಿ…

    ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.

  • ಆರೋಗ್ಯ

    ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಸುದ್ದಿ

    ಹೆಬ್ಬಾವು ಕಚ್ಚಿ ಸತ್ತ ಮಹಿಳೆ ; ಸಾವಿನ ಬಳಿಕ ಮಹಿಳೆ ಮನೆಯಲ್ಲಿ 140 ಹಾವು ಪತ್ತೆ..!ಯಾಕೆ ಗೊತ್ತ?

    ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…