ಆರೋಗ್ಯ

“ಅನ್ನ” ತಿನ್ನುವುದಕ್ಕೆ ಮುಂಚೆ ಸ್ವಲ್ಪ ಇದನ್ನು ಓದಿ! ಬೇರೆಯವರೆಗೂ ತಿಳಿಸಿ…..

438

ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ. “ಅನ್ನಂ ಪರಬ್ರಂಹ ಸ್ವರೂಪಮ್” ಎಂದು ದೊಡ್ಡವರು ಹೇಳಿದ್ದಾರೆ. ಆದರೆ ಧನದಾಸೆಯ ದುರುಳರು ನಮ್ಮ ಅನ್ನದ ರೂಪದಲ್ಲಿ ಈ ವಿಷವನ್ನುಣಿಸಲು ಪ್ರಯತ್ನಿಸುತ್ತಿರುವುದು ನಿಜವಾಗಿಯೂ ಆತಂಕಕಾರಿ.

ಈ ಅಕ್ಕಿ ನಿಜವಾದ ಅಕ್ಕಿಯನ್ನು ಎಷ್ಟು ಮಟ್ಟಿಗೆ ಚೆನ್ನಾಗಿ ಹೋಲುತ್ತದೆ ಎಂದರೆ, ಅಕ್ಕಿ ವ್ಯಾಪಾರಿಗಲಿಂದಲೂ ಕೂಡ ಕಂಡುಹಿಡಿಯಲು ಕಷ್ಟವಾಗಿದೆ. ಅಷ್ಟೇ ಅಲ್ಲ, ಇದು ಮಾಮೂಲಿ ಅನ್ನದಂತೆಯೇ ಬೆಂದು ಅರಳುತ್ತದೆ ಸಹಾ.

ಅಷ್ಟೇ ಅಲ್ಲದೇ ಇದರ ಸೇವನೆಯಿಂದ ಹಿರಿಯರ ಸಹಿತ ಮಕ್ಕಳ ಆರೋಗ್ಯಕ್ಕೂ ಮಾರಕವಾಗಬಹುದಾಗಿದ್ದು ಇದನ್ನು ಸೇವಿಸುವ ಮುನ್ನ ಇದು ನಿಜವಾದದ್ದೇ ಅಲ್ಲವೇ ಎಂದು ಪ್ರಮಾಣಿಸಿಕೊಳ್ಳುವುದೇ ಜಾಣತನದ ಕ್ರಮ. ನಿಜವಾದ ಅಕ್ಕಿಯಲ್ಲಿ ಪ್ರಮುಖವಾಗಿ ಪಿಷ್ಟವಿದ್ದರೆ ಪ್ಲಾಸ್ಕಿಕ್ ಅಕ್ಕಿಯಲ್ಲಿ ಥಾಲೇಟ್ (phthalate) ಎಂಬ ಅಂಶವಿರುತ್ತದೆ. ಇವು ಪಿಷ್ಟಕ್ಕೆ ಹೆಚ್ಚು ಕಡಿಮೆ ಸರಿಸಮನಾಗಿದ್ದು ಅಕ್ಕಿಯಂತೆಯೇ ಬೆಂದು ಅರಳುತ್ತದೆ.

ಆದರೆ ಹೊಟ್ಟೆಗೆ ಹೋದ ಬಳಿಕ ಇವು ಜೀರ್ಣಕ್ರಿಯೆಯನ್ನು ಅಡ್ಡಿಪಡಿಸುವುದು ಮಾತ್ರವಲ್ಲ, ಹಾರ್ಮೋನುಗಳನ್ನು ಏರುಪೇರುಗೊಳಿಸುವ ಮೂಲಕ ಸಂತಾನಶಕ್ತಿಯನ್ನೂ ಹೀರಿಬಿಡುತ್ತದೆ.

ಆದ್ದರಿಂದ ಈ ಅಕ್ಕಿಯನ್ನು ಗುರುತಿಸಿ ತಿನ್ನದೇ ಇರುವುದು ಹಾಗೂ ಸಂಬಂಧಪಟ್ಟವರಿಗೆ ಹಾಗೂ ಸುತ್ತಮುತ್ತಲಿನವರಿಗೆ ಸೂಚನೆ ನೀಡುವ ಮೂಲಕ ಎದುರಾಗಬಹುದಾದ ಅಪಾಯದಿಂದ ತಪ್ಪಿಸಬಹುದು.

ಹಾಗಾದರೆ ಇದನ್ನು ಕಂಡುಹಿಡಿಯುವುದಾದರು ಹೇಗೆ? ಇಲ್ಲಿವೆ ಕೆಲುವು ಸೂಚನೆಗಳು…. 

  • ಒಂದು ವೇಳೆ ಅನುಮಾನ ಬಂದರೆ  ಒಂದು ದೊಡ್ಡ ಚಮಚದಷ್ಟು ಅನುಮಾನವಿರುವ ಅಕ್ಕಿಯನ್ನು ತೆಗೆದುಕೊಂಡು ಬೆಂಕಿಕಡ್ಡಿ ಗೀರಿ ಬೆಂಕಿಯನ್ನು ನೇರವಾಗಿ ಅಕ್ಕಿಗೆ  ತಾಕುವಂತೆ ಮಾಡಿ.

  • ಒಂದು ವೇಳೆ ಪ್ಲಾಸ್ಟಿಕ್ ಸುಟ್ಟ ವಾಸನೆ ಬಂದರೆ ಇದರಲ್ಲಿ ಪ್ಲಾಸ್ಟಿಕ್ ಇದೆ ಎಂದು ಅರ್ಥ. ನಿಜವಾದ ಅಕ್ಕಿಯಾದರೆ ಜ್ವಾಲೆ ತಾಕಿದ ಭಾಗ ಸುಟ್ಟು ಬೇರೆಯೇ ವಾಸನೆ ಬರುತ್ತದೆ.

  • ಒಂದು ದೊಡ್ಡಚಮಚದಷ್ಟು ಅಕ್ಕಿಯನ್ನು ಒಂದು ಕಾವಲಿಯ ಮೇಲೆ ಇರಿಸಿ ಒಣಗಿರುವಂತೆಯೇ ಹುರಿಯಿರಿ. ನಿಜವಾದ ಅಕ್ಕಿಯಾದರೆ ಬಾಣಲಿ ತಾಕಿದ ಭಾಗ ಕಂದು ಬಣ್ಣ ತಳೆಯುತ್ತದೆ.

 

  •  ಪ್ಲಾಸ್ಟಿಕ್ ಅಕ್ಕಿಯಾದರೆ ಅಕ್ಕಿ ಕಾವಲಿಗೆ ಅಂಟಿದ ಭಾಗ ಕರಗಿ ಚಿಕ್ಕ ವೃತ್ತಾಕಾರದ ಪದರ ರೂಪುಗೊಳ್ಳುತ್ತದೆ. ಈ ಅಕ್ಕಿಯನ್ನು ಸರ್ವಥಾ ಸೇವಿಸಕೂಡದು.

  • ಒಂದು ದೊಡ್ಡಚಮಚದಷ್ಟು ಅಕ್ಕಿಯನ್ನು ಒಂದು ಲೋಟ ನೀರಿನಲ್ಲಿ ಹಾಕಿ ಕಲಕಿ. ನಿಜವಾದ ಅಕ್ಕಿ ನೀರಿನಲ್ಲಿ ಮುಳುಗುತ್ತದೆ ಹಾಗೂ ಅಡ್ಡಲಾಗಿರುತ್ತದೆ. ಪ್ಲಾಸ್ಟಿಕ್ ಅಕ್ಕಿಯಾದರೆ ನೀರಿನಲ್ಲಿ ತೇಲುತ್ತದೆ.

  • ಒಂದು ವೇಳೆ ತೇಲದೇ ಇದ್ದರೂ ಅಕ್ಕಿಯಂತೆ ತಕ್ಷಣವೇ ಮುಳುಗದೇ ತಿರುಗುತ್ತಿರುವ ನೀರಿನಲ್ಲಿ ಕೊಂಚ ಹೊತ್ತು ತಿರುಗುತ್ತಲೇ ಇರುತ್ತದೆ ಹಾಗೂ ಇನ್ನೂ ಒಂದು ವೇಳೆ ಆಳಕ್ಕಿಳಿದರೂ ಅಕ್ಕಿಯಂತೆ ಅಡ್ಡಲಾಗಿರದೇ ನೇರವಾಗಿ ನಿಲ್ಲುತ್ತದೆ.
  • ಒಂದು ಮುಷ್ಟಿಯಷ್ಟು ಅಕ್ಕಿಯನ್ನು ಕುದಿನೀರಿನಲ್ಲಿ ಹಾಕಿ ಅನ್ನ ಮಾಡಿ. ಕೊಂಚ ಹೊತ್ತಿನ ಬಳಿಕ ಪಾತ್ರೆಯಲ್ಲಿರುವ ನೀರಿನ ಮೇಲ್ಪದರವನ್ನು ಗಮನಿಸಿ.
  • ಇಲ್ಲಿ ದಪ್ಪನೆಯ ಬಿಳಿಯಾದ ಪದರವೊಂದು ರೂಪುಗೊಳ್ಳುತ್ತಿರುತ್ತದೆ. ಇದು ಪ್ಲಾಸ್ಟಿಕ್ ಕರಗಿ ಗಾಳಿಗೆ ಗಟ್ಟಿಯಾದ ಪದರವಾಗಿದೆ.
  •  ಕೆಲವು ಪ್ಲಾಸ್ಟಿಕ್ ಅಕ್ಕಿ ಮೇಲಿನ ಯಾವುದೇ ವಿಧಾನಕ್ಕೆ ತನ್ನ ಗುಟ್ಟು ಬಿಟ್ಟುಕೊಡುವುದಿಲ್ಲ. ಇದನ್ನು ಕಂಡುಕೊಳ್ಳಲು ಕೊಂಚ ಹೆಚ್ಚಿನ ಕಾಲಾವಕಾಶ ಬೇಕು. ಅನ್ನವನ್ನು ಬೇಯಿಸಿ ಎರಡು ದಿನಗಳ ಕಾಲ ಗಾಳಿಗೆ ತೆರೆದಿಡಿ.
  •  ನಿಜವಾದ ಅಕ್ಕಿಯಾದರೆ ಒಂದೇ ದಿನಕ್ಕೆ ಬೂಸು ಬರುತ್ತದೆ. ಎರಡನೆಯ ದಿನಕ್ಕೆ ಬೂಸು, ಶಿಲೀಂಧ್ರ ಎಲ್ಲವೂ ಬರಲೇಬೇಕು. ಆದರೆ ಪ್ಲಾಸ್ಟಿಕ್ ಅಕ್ಕಿಗೆ ಯಾವುದೇ ವಾಸನೆ ಬರುವುದಿಲ್ಲ.
  •  ಕೆಲವರು ನೀಡಿರುವ ಸಲಹೆಯ ಪ್ರಕಾರ ಒಂದು ಮುಷ್ಟಿಯಷ್ಟು ಬಿಸಿ ಅನ್ನವನ್ನು ಕೈಬೆರಳುಗಳಿಂದಲೇ ಉಂಡೆಕಟ್ಟಿ ಸತತವಾಗಿ ಒಂದು ಅಥವಾ ಎರಡು ನಿಮಿಷಗಳ ಕಾಲ ಚೆಂಡಿನ ಆಕೃತಿ ಬರಿಸಿ. ತಣ್ಣಗಾದ ಬಳಿಕ ಈ ಚೆಂಡನ್ನು ಮೇಜಿನ ಮೇಲೆ ಬಡಿಯಿರಿ.

  •  ಒಂದು ವೇಳೆ ಇದು ಪ್ಲಾಸ್ಟಿಕ್ ಅಕ್ಕಿಯಾಗಿದ್ದರೆ ಚೆಂಡಿನಂತೆಯೇ ಪುಟಿಯುತ್ತದೆ, ಒಡೆಯುವುದಿಲ್ಲ. ನಿಜವಾದ ಅಕ್ಕಿಯನ್ನು ಎಷ್ಟೇ ಉಂಡೆಗಟ್ಟಿದರೂ ಕೆಳಗೆ ಬಿದ್ದ ತಕ್ಷಣ ಒಡೆದು ಚೂರುಚೂರಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

    ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಆರೋಗ್ಯ

    ದಿನಕ್ಕೊಂದು ಬಾದಾಮಿ ತಿಂದ್ರೆ ಸ್ಮಾರ್ಟ್ ಆಗ್ತೀರಾ.!ಹೇಗೆ ಗೊತ್ತಾ.?ತಿಳಿಯಲು ಮುಂದೆ ಓದಿ ಮತ್ತು ಮರೆಯದೇ ಶೇರ್ ಮಾಡಿ…

    ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್‌ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…