ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು …
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…