ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.