ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.

ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ
* ಉರಿ ನಿವಾರಕ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ
* ನರಮಂಡಲವನ್ನು ಸಧೃಡವಾಗಿಡುತ್ತದೆ.

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.
ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.
ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
![]()
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…