News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

5937

ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.


ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ

* ಉರಿ ನಿವಾರಕ

* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ

* ನರಮಂಡಲವನ್ನು ಸಧೃಡವಾಗಿಡುತ್ತದೆ.

 

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.

ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.

ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್‌ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಧ್ಯಾಭ್ಯಾಸ, ಸರ್ಕಾರದ ಯೋಜನೆಗಳು

    ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಕೆ ..!ತಿಳಿಯಲು ಈ ಲೇಖನ ಓದಿ..

    ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಸುದ್ದಿ

    ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

    ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸುದ್ದಿ

    ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

    ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…