News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಆರೋಗ್ಯ

ಅಶ್ವಗಂಧದ ರೋಗನಿರೋಧಕ ಶಕ್ತಿಯ ಉಪಯೋಗಗಳನ್ನು ತಿಳಿಯ ಬೇಕಾ …? ಹಾಗದ್ರೆ ಈ ಲೇಖನವನ್ನು ಓದಿ …

5014

ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.

ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.


ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿಯ ಕೊರತೆ ಉಂಟಾದರೆ ನೀವು ನೆನೆಸಿಕೊಳ್ಳಬೇಕಾದ ಮೊದಲ ಸಸ್ಯವೆಂದರೆ ಅಶ್ವಗಂಧ. ಅನೇಕ ಔಷಧೀಯ ಗುಣಗಳನ್ನು ಹೊಂದಿರುವ ಅಶ್ವಗಂಧದಲ್ಲಿ ಆರೋಗ್ಯಕ್ಕೆ ಹೇರಳವಾದ ಲಾಭವಿದೆ. ಕ್ಯಾನ್ಸರ್ ನಂತಹ ಅಪಾಯಕಾರಿ ರೋಗಗಳನ್ನು ತಡೆಯುವುದು ಅಶ್ವಗಂಧದಿಂದ ಸಾಧ್ಯವಾಗಲಿದೆ. ಅಶ್ವಗಂಧದಿಂದ ಆರೋಗ್ಯಕ್ಕೆ ಉಪಯೋಗ:

* ಬ್ಯಾಕ್ಟಿರಿಯಾ ವಿರುದ್ಧ ಹೋರಾಡಲು ಹೆಚ್ಚು ಪರಿಣಾಮಕಾರಿ

* ಉರಿ ನಿವಾರಕ

* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

* ನಿದ್ರಾಹೀನತೆ, ಕ್ಯಾನ್ಸರ್, ಸಂಧಿವಾತ, ಮಧುಮೇಹ ಹತೋಟಿಗೆ ತರುತ್ತದೆ

* ನರಮಂಡಲವನ್ನು ಸಧೃಡವಾಗಿಡುತ್ತದೆ.

 

ಈ ಗಿಡಮೂಲಕೆಯಿಂದ ಲೈಂಗಿಕ ನಿಶ್ಶಕ್ತಿ ಹೋಗುವುದು ಮಾತ್ರವಲ್ಲ, ಪುರುಷರು ದೈಹಿಕವಾಗಿಯೂ ಸದೃಢರಾಗುತ್ತಾರೆ. ಇದು ಪುರುಷರಲ್ಲಿ ಖಿನ್ನತೆಯನ್ನು ದೂರ ಮಾಡುತ್ತದೆ, ಜೀವನಾವಧಿಯನ್ನು ಹೆಚ್ಚಿಸುತ್ತದೆ ಮತ್ತು ಲೈಂಗಿಕ ಶಕ್ತಿ ಪುಟಿದೇಳುವಂತೆ ಮಾಡುತ್ತದೆ.

ಇದನ್ನು ಬಳಸುವುದರಿಂದ ಇದ್ದಕ್ಕಿದ್ದಂತೆ ಪುರುಷತ್ವ ವಾಪಸ್ ಬಂದು ಕೆನೆಯುವ ಕುದುರೆಯಂತಾಗುವುದಿಲ್ಲ. ನಿಯಮಿತವಾಗಿ ಬಳಸುತ್ತಿದ್ದರೆ, ಹಂತಹಂತವಾಗಿ ನಿಮಿರು ದೌರ್ಬಲ್ಯ ಕಡಿಮೆಯಾಗಿ ನಿಮಿರುವಿಕೆ ಹತೋಟಿಗೆ ಬರುತ್ತದೆ, ಕಾಮಕೇಳಿಯ ಉತ್ಸಾಹ ಇಮ್ಮಡಿಯಾಗುವಂತೆ ಮಾಡುತ್ತದೆ.

ವೀರ್ಯವಂತರಾಗಲು ಇದನ್ನು ಪರಿಣಾಮಕಾರಿಯಾಗಿ ಮತ್ತು ಹೆಚ್ಚಿನ ಲಾಭ ಪಡೆಯಲು ಬಳಸಿಕೊಳ್ಳುವುದು ಹೇಗೆ, ನಂತರ ಶಯನಗೃಹದಲ್ಲಿ ಸಂಗಾತಿಯೊಡನೆ ಸ್ವರ್ಗ ಸುಖ ಕಾಣುವುದು ಹೇಗೆ ಎಂಬ ಬಗ್ಗೆ ಸ್ಥೂಲವಾದ ವಿವರಗಳಿವೆ.

ಈ ಗಿಡದ ಬೇರಿಗೆ ಲೈಂಗಿಕ ದೌರ್ಬಲ್ಯ ನಿವಾರಿಸುವ ಅದ್ಬುತ ಸಾಮರ್ಥ್ಯವಿದೆ. ಹಾವು, ಚೇಳು ಕಚ್ಚಿದಾಗ ಇದರ ಬೇರನ್ನು ನಿಂಬೇ ರಸದೊಂದಿಗೆ ಹಚ್ಚಲು ಉಪಯೋಗಿಸುತ್ತಾರೆ. ಆಯುರ್ವೇದಪಂಡಿತರು ಸಂಸ್ಕೃತದಲ್ಲಿ ಇದಕ್ಕೆ ನೀಡಿದ ಹೆಸರು ವಾಜೀಗಂಧಾ, ಹಯಗಂಧಾ, ವರಾಹಕರ್ಣೀ ಇತ್ಯಾದಿ. ಈ ಸಸ್ಯದ ಬೇರಿನಿಂದ ಕುದುರೆ ಮೂತ್ರದಂತಹ ವಾಸನೆ ಹೊರಡುತ್ತದೆಯಾದ್ದರಿಂದ ಅಲ್ಲದೆ ಇದರ ಬೇರನ್ನು ಸ್ವಚ್ಚಗೊಳಿಸಿ ಪುಡಿ ಮಾಡಿ ಸೇವಿಸಿದರೆ ಅಶ್ವದಂತೆ ಶಕ್ತಿಬಲ-ಉತ್ಸಾಹ ಬರುತ್ತದೆಯಾದ್ದರಿಂದ ಇದಕ್ಕೆ ಅಶ್ವಗಂಧಾ ಎಂಬ ನಾಮವು ಬಂದಿದೆ. ಇಂಗ್ಲೀಷ್ ನಲ್ಲಿ ಇದಕ್ಕೆ ವಿಂಟರ್ಚೆರ್ರಿ ಎನ್ನುತ್ತಾರೆ.

ಸೊಲನೇಸೀ ಕುಟುಂಬಕ್ಕೆ ಸೇರಿದ, ಔಷಧೀಯ ಮಹತ್ತ್ವವುಳ್ಳ ಸಸ್ಯ (ಪಿಂಟರ್ ಚೆರ್ರಿ). ಕನ್ನಡದಲ್ಲಿ ಹಿರೇಮದ್ದಿನ ಗಿಡ ಎಂಬ ಹೆಸರೂ ಇದಕ್ಕಿದೆ. ಇದರ ವೈಜ್ಞಾನಿಕ ಹೆಸರು ವಿತಾಸಿಯ ಸಾಮ್ನಿಫೆರ. ಸು. 1 ಮೀ ಎತ್ತರಕ್ಕೆ ಬೆಳೆಯುವ ಮೂಲಿಕೆ. ಆಫ್ರಿಕ, ಮೆಡಿಟರೇನಿಯನ್ ಪ್ರದೇಶ ಹಾಗೂ ಭಾರತದಲ್ಲಿ ಸ್ವಾಭಾವಿಕವಾಗಿ ಬೆಳೆಯುತ್ತದೆ. ಅಶ್ವಗಂಧ ಬೆಳೆಯಿಂದ ದೊರೆಯುವ ಆಲ್ಕಲಾಯ್ಡ್‌ಗಳಲ್ಲಿ ಮಿಥಾನಿನ್ ಮತ್ತು ಸಾಮ್ನಿಫೆರಿನ್ ಸಸ್ಯಕ್ಷಾರ ಮುಖ್ಯವಾದುವು. ಆಯುರ್ವೇದ ಹಾಗೂ ಯುನಾನಿ ಔಷಧಿಗಳ ತಯಾರಿಕೆಯಲ್ಲಿ ಇದರ ಬೇರು, ತೊಗಟೆ, ಎಲೆ, ಹಣ್ಣು ಮತ್ತು ಬೀಜಗಳು ಅನೇಕ ರೋಗಗಳ ನಿವಾರಣೆಗೆ ಉಪಯುಕ್ತವಾಗಿವೆ.

ಅಶ್ವಗಂಧ ಕಫ ನಿವಾರಕ, ಶ್ವೇತ ಕುಷ್ಠ ನಿವಾರಕ, ಕ್ಷಯರೋಗ ನಿವಾರಕ ಮತ್ತು ವಾಯು ವಿಕಾರಗಳನ್ನು ಗುಣಪಡಿಸುವ ಕಾಮೋದ್ದೀಪಕ ಗುಣವುಳ್ಳ ಅಶ್ವಗಂಧದ ಪುಡಿಯನ್ನು ಲೈಂಗಿಕ ದೌರ್ಬಲ್ಯ ನಿವಾರಿಸುವ ಎಲ್ಲ ಔಷಧಿಗಳಲ್ಲಿ ಬಳಸುತ್ತಾರೆ. ಔಷಧಿಯಾಗಿದೆ. ಧಾತು ದೌರ್ಬಲ್ಯ, ಯೋನಿ ಶೂಲ, ಕೈಕಾಲುಗಳಲ್ಲಿನ ಸೆಳೆತ, ಆಮವಾತ, ಜ್ವರ, ದಾಹ, ಕೀಲುನೋವು, ಶ್ವಾಸರೋಗ, ಗರ್ಭಾಶಯ ದೌರ್ಬಲ್ಯ, ತಲೆನೋವು, ನಿದ್ರಾಹೀನತೆ, ಆಯಾಸ, ವೃದ್ಧಾಪ್ಯದ ದೌರ್ಬಲ್ಯ, ರೋಗ ಗುಣಮುಖವಾದ ನಂತರ ಬರುವ ದೌರ್ಬಲ್ಯ ಇತ್ಯಾದಿಗಳನ್ನು ಪರಿಣಾಮಕಾರಿಯಾಗಿ ಗುಣಪಡಿಸುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ. ಅಶ್ವಗಂಧ ನಮಗೆ ಪುಡಿ ಮತ್ತು ಬೇರು ಎರಡು ರೂಪದಲ್ಲೂ ದೊರೆಯುತ್ತದೆ. ಬೇರಿನ ರೂಪದ ಅಶ್ವಗಂಧಕ್ಕೆ ಬೆಲೆ ಕಡಿಮೆ. ಅದನ್ನು ಮನೆಯಲ್ಲಿ ಕುಟ್ಟಿ ಪುಡಿ ಮಾಡಿ ಬಟ್ಟೆಯಿಂದ ಸೋಸಿದಾಗ ನುಣುಪಾದ ಪುಡಿ ದೊರಕುತ್ತದೆ. ಅದನ್ನು ಒಂದು ಡಬ್ಬಿಯಲ್ಲಿ ಹಾಕಿಟ್ಟುಕೊಂಡು ನಿಯಮಿತವಾಗಿ ಸೇವಿಸಬೇಕು.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ