ಆಧ್ಯಾತ್ಮ

ಆಂಜನೇಯ ಸ್ವಾಮಿಯ ಮೊದಲ ಅವತಾರ, ವೃಶ ಕಪಿ ಅವತಾರದ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಮುಂದೆ ಓದಿ…

4773

ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ  ವೃಶ ಕಪಿ ಅವತಾರ.

ಈ ಅವತಾರದ ಬಗ್ಗೆ ಸ್ವತಹ ಶ್ರೀ ರಾಮನೇ ತನ್ನ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ. ಕಾರಣ ಶ್ರೀರಾಮನ ಅವತಾರದ ಸಮಯ ಭೂಲೋಕದಲ್ಲಿ ಮುಗಿದು, ತಮ್ಮ ವೈಕುಂಟ ಧಾಮಕ್ಕೆ ತೆರಳುವ ಸಮಯ ಸನಿಹಿತವಾಗಿರುತ್ತದೆ. ಇದನ್ನು ತನ್ನ ಪರಮ ಭಕ್ತ ಹನುಮಂತನಿಗೆ ಹೇಗೆ ತಿಳಿಸುವ ಯೋಚನೆಯಲ್ಲಿ ಶ್ರೀ ರಾಮನು ಹನುಮಂತನ ಅಸ್ಥಿತ್ವದ ಬಗ್ಗೆ ತಿಳಿಸಲು, ಹನುಮಂತನನ್ನು ಗೋದಾವರಿ ನದಿ ತೀರಕ್ಕೆ  ಕರೆದುಕೊಂಡು ಹೋಗುತ್ತಾನೆ.

ಆ ಸ್ಥಳಕ್ಕೆ ತಲುಪಿದ ನಂತರ ಹನುಮಂತನಿಗೆ ಒಂದು ವಿಚಿತ್ರವಾದ ಅಭಾಸವಾಗುತ್ತದೆ. ಅದೇನಂದರೆ ಈ ಜಾಗಕ್ಕೆ ಮುಂಚೆ ಬಂದು ಹೋಗಿರುವ ಹಾಗೆ ಹಾಗೂ ಪದೇ ಪದೇ ತನ್ನಂತಯೇ ಇರುವ ಒಂದು ಚಿತ್ರ ತನ್ನ ಮುಂದೆ ಹಾದು ಹೋಗುತ್ತಿರುತ್ತದೆ.  ಇದರಿಂದ ವಿಚಲಿತನಾದ ಹನುಮಂತನು ಇದರ ಬಗ್ಗೆ ರಾಮನಲ್ಲಿ ಕೇಳಲಾಗಿ, ಆಗ ಶ್ರೀ ರಾಮನು ಹನುಮಂತನಿಗೆ ನಿನಗೆ ಆಗುತ್ತಿರುವ ಅನುಭವವು ನಿಜವಾಗಿದೆ. ಇದರ ಇಂದೇ ಒಂದು ಕಥೆ ಇದೆ. ಅದೇ ವೃಶ ಕಪಿ ಮಹಾ ಶಕ್ತಿಯ ಅವತಾರದ ಕಥೆ.

ಅನೇಕ ಯುಗಗಳ ಹಿಂದೆ ದೈತ್ಯ ಹಿರನ್ಯಕನೆಂಬ ರಾಜನಿದ್ದು ಅವನಿಗೆ ಮಹಾ ಶನಿ ಎಂಬ ಮಗನಿರುತ್ತಾನೆ. ಅವನು ಸ್ವತಹ ತಪಸ್ವಿಯಾಗಿದ್ದರೂ ದೈತ್ಯನಾಗಿರುತ್ತಾನೆ. ತನ್ನ ಮಹಾ ಶಕ್ತಿಯಿಂದ ಮಾನವ ದಾನವರನ್ನು ಸೋಲಿಸಿ ಪಾತಾಳ ಲೋಕದ ರಾಜನಾಗಿರುತ್ತಾನೆ.

ಇಷ್ಟಕ್ಕೆ ತೃಪ್ತನಾಗದ ಮಹಾ ಶನಿಯು ದೇವಲೋಕದ ದಾಳಿ ಮಾಡಲು ಸ್ವರ್ಗದ ಕಡೆ ಒಬ್ಬನೇಹೋಗುತ್ತಾನೆ.

ಇದನ್ನು ತಡೆದ ದೇವತೆಗಳನ್ನು ಸೋಲಿಸಿ ಇಂದ್ರನನ್ನು ತನ್ನ ಜಡೆಗಳಿಂದ  ಬಂದಿಸಿ, ಪಾತಾಳ ಲೋಕದ ಕಾಲ ಕೋಟಿ ಎಂಬಲ್ಲಿ ಬಂದಿಸಿ ಇಡುತ್ತಾನೆ.

ನಂತರ ಕೆಲವು ಶರುತ್ತಗಳ ಮೇಲೆ ಬಿಡುಗಡೆ ಮಾಡುತ್ತಾನೆ. ಇಂದ್ರನನ್ನು ಬಿಡುಗಡೆ ಮಾಡಿದ್ರೂ, ಸಹ ಇಂದ್ರ ಮತ್ತು ಸ್ವರ್ಗಗಳು ದೈತ್ಯ ಮಹಾ ಶನಿಯ ಹಿಡಿತದಲ್ಲೇ ಇರುತ್ತದೆ. ಹೀಗಾಗಿ ಇಂದ್ರನಿಗೆ ಬಿಡುಗಡೆಯಾದ್ರು ಸ್ವತಂತ್ರವಿರುವುದಿಲ್ಲ.

ಹೀಗಾಗಿ ಇದರ ಬಗ್ಗೆ ಯೋಚಿಸಿದ ಇಂದ್ರನ ಪತ್ನಿ ಶಚಿ ದೇವಿಯು ಬ್ರಹ್ಮದೇವರಲ್ಲಿ ಪ್ರಾರ್ಥಿಸಲಾಗಿ,ಸೃಷ್ಟಿ ಕರ್ತ ಬ್ರಹ್ಮನು ದೈತ್ಯ ಮಹಾ ಶನಿಗೆ ಯಾವುದೇ ದೇವತೆಗಳಿಂದ ಸಾವಿಲ್ಲ. ಶಿವ ಮತ್ತು ವಿಷ್ಣು ದೇವರ ಅಂಶದಿಂದ ಜನಿಸಿದ ಮಹಾ ಶಕ್ತಿಯಿಂದ ಮಾತ್ರ ಕೊಲ್ಲಲು ಸಾಧ್ಯ ಎಂದು ತಿಳಿಸುತ್ತಾರೆ.

ನಂತರ ಇಂದ್ರ ಮತ್ತು ಶಚಿ ದೇವಿಯು ಗೋದಾವರಿ ನದಿ ತೀರಕ್ಕೆ ಬಂದು  ಹರಿ ಮತ್ತು ಹರರನ್ನು ಕುರಿತು ತಪಸ್ಸು ಮಾಡುತ್ತಾರೆ. ಅವರ ತಪಸ್ಸಿನ ಫಲವಾಗಿ ಈಶ್ವರ ಮತ್ತ ನಾರಾಯಣರು ಪ್ರತ್ಯಕ್ಷರಾಗಿ ವರ ಕೇಳುವಂತೆ ಇಂದ್ರ ಮತ್ತು ಶಚಿದೇವಿಗೆ ಹೇಳುತ್ತಾರೆ.

ಇಂದ್ರ ಮತ್ತು ಶಚಿದೇವಿಯು ಹರಿ ಮತ್ತು ಹರರಲ್ಲಿ ದೈತ್ಯ ಮಹಾ ಶನಿಯನ್ನು ಕೊಂದು ಲೋಕವನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಾರೆ.

 ಈ ಚಿತ್ರ ಹರಿ ಮತ್ತು ಹರ ಅಂಶದ ವೃಶ ಕಪಿ ಅವತಾರದ ರೂಪ 

ಅವರ ಈ ಬೇಡಿಕೆಗೆ ತಥಾಸ್ತು ಎಂದ ಶಿವ ಮತ್ತು ನಾರಾಯಣರಿಂದ ಜ್ಯೋತಿಗಳು ಪ್ರಕಟಗೊಂಡು ಎರಡು ಜ್ಯೋತಿಗಳು ಸಂಗಮವಾಗಿರುವ ನದಿಯಲ್ಲಿ ಸೇರುತ್ತವೆ. ಆಗ ಹರೀ ಹರರ ಅಂಶಗಳಿಂದ ಒಂದು ಮಹಾ ಶಕ್ತಿಯ ಉದ್ಭವವಾಗುತ್ತದೆ. ಆ ಮಹಾಶಕ್ತಿಯು ಸ್ವತಹ ಹನುಮಂತನ ರೂಪದಂತಯೇ ಇದ್ದು ಅರ್ಧ ಶಿವನ ರೂಪ ಮತ್ತರ್ಧ ನಾರಾಯಣ ರೂಪ ಆಗಿರುತ್ತದೆ. ಈ ಅವತಾರವೇ ವೃಶ ಕಪಿ ಅವತಾರ.

ಇಂದ್ರ ಮತ್ತು ಶಚಿದೇವಿಯು ವೃಶ ಕಪಿ ದೇವರಲ್ಲಿ ಪ್ರಾರ್ಥಿಸಿ ದೈತ್ಯ ಮಹಾ ಶನಿಯಿಂದ ಈ ಲೋಕಕ್ಕೆ ಮುಕ್ತಿ ದೊರಕಿಸುಕೊಡುವಂತೆ ಕೇಳಿಕೊಳ್ಳುತ್ತಾರೆ.

ವೃಶ ಕಪಿ ಅವತಾರ

ಇವರ ಪ್ರಾರ್ಥನೆಗೆ ಪ್ರಸನ್ನನಾದ ವೃಶ ಕಪಿಯು ಒಂದೇ ಕ್ಷಣಕ್ಕೆ ಪಾತಾಳ ಲೋಕಕ್ಕೆ ಜಿಗಿದು ದೈತ್ಯ ಮಹಾ ಶನಿ ಮತ್ತು ಅವನ ಸೈನ್ಯವನ್ನು ಸಂಹಾರ ಮಾಡುತ್ತಾನೆ.ಹಾಗಾಗಿ ಈ ನದಿಗೆ ವೃಶ ಕಪಿ ತೀರ್ಥ ಎಂಬ ಹೆಸರು ಬಂದಿದೆ ಎಂದು ಹಾಗೂ ಅದು ಹನುಮಂತನ ಮೊದಲ ಅವತಾರವೆಂದು ಶ್ರೀರಾಮನು ತನ್ನ ಪರಮ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ.

ಜೈ ಶ್ರೀ ರಾಮ್…

ಜೈ ಹನುಮಾನ್…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • ಸಿನಿಮಾ

    6 ವರ್ಷದ ಮಗನಿದ್ದರೂ ಎರಡನೇ ಮದುವೆ ಆಗುತ್ತಿರುವ ರಜನೀಕಾಂತ್ ಮಗಳು.!ಹುಡುಗ ಯಾರು ಗೊತ್ತಾ..?

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…

  • ಮನರಂಜನೆ

    BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?

    ಬಿಗ್‌ ಬಾಸ್‌ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್‌ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್‌ ಪಡೆದು ನಾಮಿನೇಶನ್‌ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್‌ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್‌ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್‌ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್‌ ಬಾಸ್‌ ಮನೆಗೆ ಪ್ರವೇಶಿಸಿದ ಬಳಿಕ ಶೈನ್‌ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…