ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಗೊತ್ತಿರುವ ಹಾಗೆ ಶ್ರೀ ರಾಮ ಭಕ್ತ ಹನುಮಂತನ ಜನ್ಮ ವೃತ್ತಾಂತ, ಹನುಮಂತ ದೇವರು, ಭಗವಾನ್ ಶಿವನ ಅಂಶದ ಅವತಾರ ಇವೆಲ್ಲವೂ ನಮಗೆ ಗೊತ್ತಿದೆ. ಆದರೆ ಗೊತ್ತಿಲ್ಲದ ವಿಷಯ ಏನೆಂದರೆ ಹನುಮಂತನ ಈ ಅವತಾರಕ್ಕೆ ಮುಂಚೆ, ಎಷ್ಟೋ ಯುಗಗಳ ಹಿಂದಯೇ ಹನುಮಂತನ ಮತ್ತೊಂದು ಅವತಾರವಾಗಿತ್ತು. ಆ ಅವತಾರವೇ ವೃಶ ಕಪಿ ಅವತಾರ.
ಈ ಅವತಾರದ ಬಗ್ಗೆ ಸ್ವತಹ ಶ್ರೀ ರಾಮನೇ ತನ್ನ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ. ಕಾರಣ ಶ್ರೀರಾಮನ ಅವತಾರದ ಸಮಯ ಭೂಲೋಕದಲ್ಲಿ ಮುಗಿದು, ತಮ್ಮ ವೈಕುಂಟ ಧಾಮಕ್ಕೆ ತೆರಳುವ ಸಮಯ ಸನಿಹಿತವಾಗಿರುತ್ತದೆ. ಇದನ್ನು ತನ್ನ ಪರಮ ಭಕ್ತ ಹನುಮಂತನಿಗೆ ಹೇಗೆ ತಿಳಿಸುವ ಯೋಚನೆಯಲ್ಲಿ ಶ್ರೀ ರಾಮನು ಹನುಮಂತನ ಅಸ್ಥಿತ್ವದ ಬಗ್ಗೆ ತಿಳಿಸಲು, ಹನುಮಂತನನ್ನು ಗೋದಾವರಿ ನದಿ ತೀರಕ್ಕೆ ಕರೆದುಕೊಂಡು ಹೋಗುತ್ತಾನೆ.
ಆ ಸ್ಥಳಕ್ಕೆ ತಲುಪಿದ ನಂತರ ಹನುಮಂತನಿಗೆ ಒಂದು ವಿಚಿತ್ರವಾದ ಅಭಾಸವಾಗುತ್ತದೆ. ಅದೇನಂದರೆ ಈ ಜಾಗಕ್ಕೆ ಮುಂಚೆ ಬಂದು ಹೋಗಿರುವ ಹಾಗೆ ಹಾಗೂ ಪದೇ ಪದೇ ತನ್ನಂತಯೇ ಇರುವ ಒಂದು ಚಿತ್ರ ತನ್ನ ಮುಂದೆ ಹಾದು ಹೋಗುತ್ತಿರುತ್ತದೆ. ಇದರಿಂದ ವಿಚಲಿತನಾದ ಹನುಮಂತನು ಇದರ ಬಗ್ಗೆ ರಾಮನಲ್ಲಿ ಕೇಳಲಾಗಿ, ಆಗ ಶ್ರೀ ರಾಮನು ಹನುಮಂತನಿಗೆ ನಿನಗೆ ಆಗುತ್ತಿರುವ ಅನುಭವವು ನಿಜವಾಗಿದೆ. ಇದರ ಇಂದೇ ಒಂದು ಕಥೆ ಇದೆ. ಅದೇ ವೃಶ ಕಪಿ ಮಹಾ ಶಕ್ತಿಯ ಅವತಾರದ ಕಥೆ.
ಅನೇಕ ಯುಗಗಳ ಹಿಂದೆ ದೈತ್ಯ ಹಿರನ್ಯಕನೆಂಬ ರಾಜನಿದ್ದು ಅವನಿಗೆ ಮಹಾ ಶನಿ ಎಂಬ ಮಗನಿರುತ್ತಾನೆ. ಅವನು ಸ್ವತಹ ತಪಸ್ವಿಯಾಗಿದ್ದರೂ ದೈತ್ಯನಾಗಿರುತ್ತಾನೆ. ತನ್ನ ಮಹಾ ಶಕ್ತಿಯಿಂದ ಮಾನವ ದಾನವರನ್ನು ಸೋಲಿಸಿ ಪಾತಾಳ ಲೋಕದ ರಾಜನಾಗಿರುತ್ತಾನೆ.
ಇಷ್ಟಕ್ಕೆ ತೃಪ್ತನಾಗದ ಮಹಾ ಶನಿಯು ದೇವಲೋಕದ ದಾಳಿ ಮಾಡಲು ಸ್ವರ್ಗದ ಕಡೆ ಒಬ್ಬನೇಹೋಗುತ್ತಾನೆ.
ಇದನ್ನು ತಡೆದ ದೇವತೆಗಳನ್ನು ಸೋಲಿಸಿ ಇಂದ್ರನನ್ನು ತನ್ನ ಜಡೆಗಳಿಂದ ಬಂದಿಸಿ, ಪಾತಾಳ ಲೋಕದ ಕಾಲ ಕೋಟಿ ಎಂಬಲ್ಲಿ ಬಂದಿಸಿ ಇಡುತ್ತಾನೆ.
ನಂತರ ಕೆಲವು ಶರುತ್ತಗಳ ಮೇಲೆ ಬಿಡುಗಡೆ ಮಾಡುತ್ತಾನೆ. ಇಂದ್ರನನ್ನು ಬಿಡುಗಡೆ ಮಾಡಿದ್ರೂ, ಸಹ ಇಂದ್ರ ಮತ್ತು ಸ್ವರ್ಗಗಳು ದೈತ್ಯ ಮಹಾ ಶನಿಯ ಹಿಡಿತದಲ್ಲೇ ಇರುತ್ತದೆ. ಹೀಗಾಗಿ ಇಂದ್ರನಿಗೆ ಬಿಡುಗಡೆಯಾದ್ರು ಸ್ವತಂತ್ರವಿರುವುದಿಲ್ಲ.
ಹೀಗಾಗಿ ಇದರ ಬಗ್ಗೆ ಯೋಚಿಸಿದ ಇಂದ್ರನ ಪತ್ನಿ ಶಚಿ ದೇವಿಯು ಬ್ರಹ್ಮದೇವರಲ್ಲಿ ಪ್ರಾರ್ಥಿಸಲಾಗಿ,ಸೃಷ್ಟಿ ಕರ್ತ ಬ್ರಹ್ಮನು ದೈತ್ಯ ಮಹಾ ಶನಿಗೆ ಯಾವುದೇ ದೇವತೆಗಳಿಂದ ಸಾವಿಲ್ಲ. ಶಿವ ಮತ್ತು ವಿಷ್ಣು ದೇವರ ಅಂಶದಿಂದ ಜನಿಸಿದ ಮಹಾ ಶಕ್ತಿಯಿಂದ ಮಾತ್ರ ಕೊಲ್ಲಲು ಸಾಧ್ಯ ಎಂದು ತಿಳಿಸುತ್ತಾರೆ.
ನಂತರ ಇಂದ್ರ ಮತ್ತು ಶಚಿ ದೇವಿಯು ಗೋದಾವರಿ ನದಿ ತೀರಕ್ಕೆ ಬಂದು ಹರಿ ಮತ್ತು ಹರರನ್ನು ಕುರಿತು ತಪಸ್ಸು ಮಾಡುತ್ತಾರೆ. ಅವರ ತಪಸ್ಸಿನ ಫಲವಾಗಿ ಈಶ್ವರ ಮತ್ತ ನಾರಾಯಣರು ಪ್ರತ್ಯಕ್ಷರಾಗಿ ವರ ಕೇಳುವಂತೆ ಇಂದ್ರ ಮತ್ತು ಶಚಿದೇವಿಗೆ ಹೇಳುತ್ತಾರೆ.
ಇಂದ್ರ ಮತ್ತು ಶಚಿದೇವಿಯು ಹರಿ ಮತ್ತು ಹರರಲ್ಲಿ ದೈತ್ಯ ಮಹಾ ಶನಿಯನ್ನು ಕೊಂದು ಲೋಕವನ್ನು ಕಾಪಾಡುವಂತೆ ಕೇಳಿಕೊಳ್ಳುತ್ತಾರೆ.
ಈ ಚಿತ್ರ ಹರಿ ಮತ್ತು ಹರ ಅಂಶದ ವೃಶ ಕಪಿ ಅವತಾರದ ರೂಪ
ಅವರ ಈ ಬೇಡಿಕೆಗೆ ತಥಾಸ್ತು ಎಂದ ಶಿವ ಮತ್ತು ನಾರಾಯಣರಿಂದ ಜ್ಯೋತಿಗಳು ಪ್ರಕಟಗೊಂಡು ಎರಡು ಜ್ಯೋತಿಗಳು ಸಂಗಮವಾಗಿರುವ ನದಿಯಲ್ಲಿ ಸೇರುತ್ತವೆ. ಆಗ ಹರೀ ಹರರ ಅಂಶಗಳಿಂದ ಒಂದು ಮಹಾ ಶಕ್ತಿಯ ಉದ್ಭವವಾಗುತ್ತದೆ. ಆ ಮಹಾಶಕ್ತಿಯು ಸ್ವತಹ ಹನುಮಂತನ ರೂಪದಂತಯೇ ಇದ್ದು ಅರ್ಧ ಶಿವನ ರೂಪ ಮತ್ತರ್ಧ ನಾರಾಯಣ ರೂಪ ಆಗಿರುತ್ತದೆ. ಈ ಅವತಾರವೇ ವೃಶ ಕಪಿ ಅವತಾರ.
ಇಂದ್ರ ಮತ್ತು ಶಚಿದೇವಿಯು ವೃಶ ಕಪಿ ದೇವರಲ್ಲಿ ಪ್ರಾರ್ಥಿಸಿ ದೈತ್ಯ ಮಹಾ ಶನಿಯಿಂದ ಈ ಲೋಕಕ್ಕೆ ಮುಕ್ತಿ ದೊರಕಿಸುಕೊಡುವಂತೆ ಕೇಳಿಕೊಳ್ಳುತ್ತಾರೆ.
ವೃಶ ಕಪಿ ಅವತಾರ
ಇವರ ಪ್ರಾರ್ಥನೆಗೆ ಪ್ರಸನ್ನನಾದ ವೃಶ ಕಪಿಯು ಒಂದೇ ಕ್ಷಣಕ್ಕೆ ಪಾತಾಳ ಲೋಕಕ್ಕೆ ಜಿಗಿದು ದೈತ್ಯ ಮಹಾ ಶನಿ ಮತ್ತು ಅವನ ಸೈನ್ಯವನ್ನು ಸಂಹಾರ ಮಾಡುತ್ತಾನೆ.ಹಾಗಾಗಿ ಈ ನದಿಗೆ ವೃಶ ಕಪಿ ತೀರ್ಥ ಎಂಬ ಹೆಸರು ಬಂದಿದೆ ಎಂದು ಹಾಗೂ ಅದು ಹನುಮಂತನ ಮೊದಲ ಅವತಾರವೆಂದು ಶ್ರೀರಾಮನು ತನ್ನ ಪರಮ ಭಕ್ತ ಆಂಜನೇಯನಿಗೆ ತಿಳಿಸುತ್ತಾನೆ.
ಜೈ ಶ್ರೀ ರಾಮ್…
ಜೈ ಹನುಮಾನ್…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…
ಚಾರ್ಲಿ ಚಾಪ್ಲಿನ್ ಹೆಸರು ಕೇಳದವರಿಲ್ಲ. ಹಾಸ್ಯ ಲೋಕದ ಈ ಸಾಮ್ರಾಟ 1913ರಂದು ಡಿಸೆಂಬರ್ 16ರಂದು ವಾರಕ್ಕೆ 150 ಡಾಲರ್ಗಳಿಗೆ ಸಿನಿಮಾ ವೃತ್ತಿ ಆರಂಭಿಸಿದರು. ಈ ಜಗದ್ವಿಖ್ಯಾತ ಕಾಮಿಡಿ ಸೂಪರ್ಸ್ಟಾರ್ ಬಗ್ಗೆ ಚುಟುಕು ಸುದ್ದಿ. ಇಂಗ್ಲಿಷ್ ಹಾಸ್ಯ ನಟ, ಸಿನಿಮಾ ನಿರ್ಮಾಪಕ ಮತ್ತು ಸಂಯೋಜಕ ಸರ್ ಚಾರ್ಲೆಸ್ ಸ್ಪೆನ್ಸರ್ ಚಾರ್ಲಿ ಚ್ಲಾಪಿನ್ ಜನಿಸಿದ್ದು 16ನೇ ಏಪ್ರಿಲ್ 1889ರಲ್ಲಿ.
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ದೇಶದಲ್ಲಿ ಸಿಗರೇಟ್ ಸೇದುವವರ ಸಂಖ್ಯೆ ಕಮ್ಮಿ ಇಲ್ಲ, ಕೇವಲ ಹುಡುಗರು ಮಾತ್ರವಲ್ಲದೆ ಹುಡುಗಿಯರು ಕೂಡ ಸಿಗರೇಟ್ ಸೇದುತ್ತಾರೆ, ಇನ್ನು ಹಿಂದಿನ ಕಾಲದಲ್ಲಿ ಕೇವಲ ವಯಸ್ಸಾದವರು ಮಾತ್ರ ಸಿಗರ್ಟ್ ಸೇದುತ್ತಿದ್ದರು ಆದರೆ ಈಗ ಶಾಲೆಗೆ ಹೋಗುವ ಮಕ್ಕಳು ಕೂಡ ಸಿಗರೇಟ್ ಗಳನ್ನ ಸೇದುತ್ತಿದ್ದಾರೆ ಮತ್ತು ಅದನ್ನ ಚಟವನ್ನಾಗಿ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಿನಕ್ಕೆ ಸುಮಾರು 31 ಲಕ್ಷ ಸಿಗರೇಟ್ ಸೇದುತ್ತಿದ್ದಾರೆ ಜನರು, ಇನ್ನು ಜನರು ಸಿಗರೇಟ್ ಸೇದಿದ ಮೇಲೆ ಅದರ ತುದಿಯನ್ನ ಎಸೆಯುತ್ತಾರೆ ಮತ್ತು ಇನ್ನು ಕೆಲವರು ಅದನ್ನ…