ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…
ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.
ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.
ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.
2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?
3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?
ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?
4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?
5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?
6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?
7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?
8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?
9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?
ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.
ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ದಿನಭವಿಷ್ಯ 7ಡಿಸೆಂಬರ್, 2018 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ ಇಂದು ನೀವು ಒಂದು ಹೃದಯ ಒಡೆಯುವುದನ್ನುತಪ್ಪಿಸುತ್ತೀರಿ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಪ್ರವಾಸಗಳು ಮತ್ತು…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…