ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…
ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.
ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.
ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.
2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?
3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?
ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?
4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?
5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?
6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?
7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?
8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?
9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?
ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.
ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಇತ್ತೀಚೆಗಷ್ಟೇ S.S.L.C.ಪಲಿತಾಂಶ ಪ್ರಕಟವಗಿದ್ಧು ಪೇಲ್ ಆದ ವಿದ್ಯಾರ್ಥಿಗಳ ಪೂರಕ ಪರೀಕ್ಷೆ ಜೂನ್ 21 ರಿಂದ 28 ರವರೆಗೆ ನಡೆಯಲಿದೆ . ಮೇ 10 ಪೂರಕ ಪರೀಕ್ಷೆ ಕಟ್ಟಲು ಕೊನೆಯ ದಿನವಾಗಿದೆ. 200 ರೂ. ದಂಡ ಶುಲ್ಕದೊಂದಿಗೆ ಮೇ 15 ರ ವರೆಗೆ ಪೂರಕ ಪರೀಕ್ಷೆ ಕಟ್ಟಬಹುದಾಗಿದೆ.ಪೇಲ್ ಆಗಿರುವಂಥಹ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದವರು ಕೂಡ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಪತ್ರಿಕೆಗಳ ಛಾಯಾ ಪ್ರತಿ ಪಡೆಯಲು ಮೇ 13 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಛಾಯಾಪ್ರತಿಗೆ ಒಂದು…
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…