ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.
ಆ ಪತ್ರದಲ್ಲಿ ಏನಿತ್ತು ಗೊತ್ತಾ? ಮುಂದೆ ಓದಿ…
ಗೌರವಾನ್ವಿತ ಉಪೇಂದ್ರರವರಿಗೆ,
ನಾನೊಬ್ಬ ಆಟೋ ಚಾಲಕ. ಬಸವನಗುಡಿಯಲ್ಲಿಯೇ ನಾನು ಆಟೋ ಚಾಲಕನಾಗಿರುವವನು. ನಿಮ್ಮ ಮನೆ ನನ್ನ ಆಟೋ ನಿಲ್ದಾಣಕ್ಕೆ ತೀರಾ ದೂರವಿಲ್ಲ. ನಾನೊಬ್ಬ ಕನ್ನಡದ ಅಭಿಮಾನಿ! ಶಂಕರ್ ನಾಗ್ ಹಾಗೂ ನಿಮ್ಮ ಚಿತ್ರವನ್ನು ಆಟೋದ ಹಿಂದೆ ಮುಂದೆ ಹಾಕಿಕೊಂಡಿದ್ದೇನೆ! ಕಾರಣ ನಿಮ್ಮ ಮೇಲಿನ ಅಭಿಮಾನದಿಂದಷ್ಟೇ.
ಒಟ್ಟಾರೆಯಾಗಿ ಹೇಳಬೇಕೆಂದರೆ ನಾನೊಬ್ಬ ನಿಮ್ಮ ಅಪ್ಪಟ ಅಭಿಮಾನಿ! ನಿಮ್ಮ ಸಿನಿಮಾಗಳನ್ನು ಅದೆಷ್ಟೋ ಸಲ ನೋಡಿದ್ದೇನೆ, ಒಂದೇ ಸಲಕ್ಕೆ ಅರ್ಥವಾಗದಿದ್ದರೂ ಎರಡು ಮೂರನೇ ಸಲ ನೋಡಿ ಅರ್ಥ ಮಾಡಿಕೊಂಡಿದ್ದೇನೆ! ಪೂರ್ತಿಯಾಗಿ ಅರ್ಥಾಗದೇ ಹೋದರೂ ಅದೇನೋ ಖುಷಿಯೊಂದು ನನ್ನಲ್ಲಿರುತ್ತದೆ.
ನೀವು ರಾಜಕೀಯವನ್ನು ‘ಪ್ರಜಾಕೀಯ’ ಮಾಡಲು ಹೊರಟಿದ್ದು ಬಹಳ ಸಂತೋಷವಾಗಿತ್ತು! ಒಬ್ಬ ನಾಯಕ ನಟನಾದ ನೀವು ಹೆಮ್ಮೆಯ ಪ್ರಧಾನಿ ಮೋದಿಯನ್ನು ಬೆಂಬಲಿಸಿದ್ದು ನೋಡಿ ನಮ್ಮ ಕರ್ನಾಟಕಕ್ಕೂ ಒಂದೊಳ್ಳೆಯ ನಾಯಕ ಸಿಗಬಹುದೆಂದು ಅಂದುಕೊಂಡಿದ್ದೆ! ನಿಮ್ಮ ಸುದ್ದಿಗೋಷ್ಠಿ ನೋಡಿದ ಮೇಲೆ ಕೇಳಲೇಬೇಕು ಎಂದೆನಿಸಿದ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ.
2. ನೀವೇ ಹೇಳಿದಂತೆ, ಒಬ್ಬ ಪ್ರಜಾಕಾರಣಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಕಾರ್ಮಿಕನ ಹಾಗೆ ಕೆಲಸ ಮಾಡಬೇಕು ಎಂದಿರಿ. ಹಾಗಿದ್ದರೆ, ನರೇಂದ್ರ ಮೋದಿಯವರು ಬೆಳಗ್ಗಿನ ಜಾವ 4ರಿಂದ ರಾತ್ರಿ 12ರವರೆಗೂ ಬರೋಬ್ಬರಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ನಿಮ್ಮ ದೃಷ್ಟಿಯಲ್ಲಿ ಅವರು ಈ ಯಾವ ‘ಪ್ರಜಾಕಾರಣ’ದ ವರ್ಗಕ್ಕೆ ಸೇರುತ್ತಾರೆ?
3. ನೀವೇ ಹೇಳಿದಂತೆ, ಚುನಾವಣೆಯ ಪ್ರಚಾರಕ್ಕೆ ಫ್ಲೆಕ್ಸು, ಬ್ಯಾನರ್ಗಳನ್ನು ಹಾಕಿದರೆ ಸ್ವಚ್ಛ ಭಾರತದ ಕನಸು ಕನಸಾಗುಳಿದುಬಿಡುತ್ತೆ ಎಂದಿರಿ. ಆದರೆ ನಿಮ್ಮ ಯಾವುದೇ ಸಿನಿಮಾಗಳ ಬಿಡುಗಡೆ ನೋಡಿದರೂ ಪಟಾಕಿ, ಬ್ಯಾನರ್, ಪ್ಲೆಕ್ಸುಗಳಿಲ್ಲದೇ ನಡೆಯುವುದೇ ಇಲ್ಲ! ಆಗೆಲ್ಲಿತ್ತು, ಈ ಸ್ವಚ್ಛ ಭಾರತದ ಪರಿಕಲ್ಪನೆ?
ಹೂವಿನ ಹಾರ ಹಾಕುವುದು ತಪ್ಪು ಎನ್ನುವುದು ನಿಮ್ಮ ಸಿದ್ಧಾಂತವಾದರೆ, ನಿಮ್ಮ ಸಿನಿಮಾ ಬಿಡುಗಡೆಗಳಲ್ಲೇ ನಿಮ್ಮ ಅದೆಷ್ಟೋ ಉದ್ದದ ಪ್ರತಿಕೃತಿಗೆ ಹೂವಿನ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿದ್ದನ್ನು ಸ್ವತಃ ನೋಡಿದ್ದೇನೆ. ಸ್ವತಃ ನಿಮಗೂ ಅಭಿಮಾನಿಗಳು ಹಾರ ಹಾಕಿದ್ದಾರೆ! ಆಗ್ಯಾಕೆ, ನೀವು ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಲಿಲ್ಲ? ಅದೇ ದುಡ್ಡನ್ನು ಇನ್ನೊಬ್ಬರಿಗೆ ದಾನ ಮಾಡಿ ಎಂದು ಘೋಷಿಸಲಿಲ್ಲ?
4. ಒಬ್ಬ ‘ಖಾಕಿ’ ಹಾಕಿಬಿಟ್ಟರೆ ಆತ ಕಾರ್ಮಿಕ ಹೇಗಾಗುತ್ತಾನೆ ಸ್ವಾಮಿ? ನೀವು ಖಾಕಿಗೆ ಬೆಲೆ ಕೊಡುವವರಾಗಿದ್ದಾರೆ ನಿಮ್ಮ ರೆಸಾರ್ಟಿನಲ್ಲಿ ನೀವು ಪ್ರೆಸ್ ಮೀಟ್ ಮಾಡುತ್ತಿರಲಿಲ್ಲ ಅಲ್ಲವೇ? ಕಾರ್ಮಿಕರಿರುವ ಸಾರ್ವಜನಿಕ ಸ್ಥಳಗಳಲ್ಲಿಯೇ ನಡೆಸುತ್ತಿದ್ದೀರಿ ಅಲ್ಲವೇ?
5. ನೀವೇ ಕೆಲವು ವರ್ಷಗಳ ಹಿಂದೆ ಹೇಳಿದಂತೆ, ನೀವು ರಾಜಕೀಯಕ್ಕೆ ಇಳಿಯುವ ಮುನ್ನ ಮೊದಲು ಕುಟುಂಬವನ್ನು ಆರ್ಥಿಕವಾಗಿ ರಕ್ಷಿಸಿರಬೇಕು, ನ್ಯಾಯ ಒದಗಿಸಿರಬೇಕು ಎಂದಿದ್ದಿರಿ. ಹಲವು ವರ್ಷಗಳ ಹಿಂದೆಯೇ ನೀವು ಮೂರು ಕೋಟಿಯ ಮನೆ ಕಟ್ಟಿಸಿ, ಬೇಕಾದಷ್ಟು ಆಸ್ತಿ ಮಾಡಿ ನಿಮ್ಮ ಕುಟುಂಬವನ್ನು ತುಂಬಾ ಚೆನ್ನಾಗಿಯೇ ನೋಡಿಕೊಂಡಿರಿ ಮತ್ತು ನ್ಯಾಯ ಒದಗಿಸಿದಿರಿ. ಹಾಗಾದರೆ, ಬರುವ ಪ್ರತಿಯೊಬ್ಬ ಕಾರ್ಯಕರ್ತನೂ (ಅಥವಾ ಪ್ರಜಾಕೀಯದ ಪ್ರಾಯಕರ್ತನೋ?) ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸಿ ಪ್ರಾಯ ಮುಗಿದ ನಂತರವೇ ನಿಮ್ಮ ಪಕ್ಷ ಸೇರಿದ್ದಲ್ಲಿ ನಿಮಗೆ ಅಭ್ಯಂತರವಿದೆಯೇ?
6. ಇಷ್ಟು ದಿನವೂ ಸುಮ್ಮನಿದ್ದ ನೀವು ಅಮಿತ್ ಷಾ ಬರುವ ದಿನವೇ ನಿಮ್ಮ ಪ್ರಜಾಕೀಯದ ಪಾದಾರ್ಪಣೆಯನ್ನು ಘೋಷಿಸಿದಿರಿ. ಪರಿಣಾಮ ಅತ್ಯಂತ ಅಗತ್ಯವಾಗಿದ್ದ ಅವರ ಪ್ರವಾಸ ಕಾರ್ಯಕ್ರಮವೊಂದು ಅಂದುಕೊಂಡಷ್ಟು ಯಶಸ್ವಿಯಾಗಲೇ ಇಲ್ಲ. ಈ ಲಾಜಿಕ್ಕುಗಳ ಹಿಂದೆ ನೀವೇ ಇದ್ದದ್ದೋ ಅಥವಾ ಕಾಣದ ಕೈಗಳ ‘ಕೈ’ ಅಡಗಿದೆಯೋ?
7. ಅಚ್ಚರಿಯೆನ್ನಿಸಿದ್ದು ನಿಮ್ಮ ಹಣವಿಲ್ಲದ ಪ್ರಜಾಕೀಯ! ಒಂದು ರುಪಾಯಿ ಹಾಕೊಲ್ಲ, ತೆಗೆಯೊಲ್ಲ ಅಂದಿರಿ. ಆದರೆ, ಚುನಾವಣೆಗೆ ಅದರದೇ ಆದ ಖರ್ಚುಗಳಿದ್ದೇ ಇರುತ್ತದೆ. ಪ್ರಚಾರಕ್ಕೆ, ಪತ್ರಕ್ಕೆ ಇತ್ಯಾದಿ. ಪ್ರಚಾರಕ್ಕೆ ಹಣವೇ ನಾ ನೀಡೋದಿಲ್ಲ ಎಂದಿರಿ. ಮುಂದೆ ಇದಕ್ಕೆ ನೀಡುವ ಹಣ ನಿಮ್ಮ ಕುಟುಂಬದ ಸದೃಢತೆಯದೋ ಅಥವಾ ಯಾರಾದರಿಂದಲೂ ತೆಗೆದುಕೊಳ್ಳುವಿರೋ?
8. ಈ ಹಿಂದೆಯೂ ಕೂಡ ತೆಲುಗಿನ ನಟ ಚಿರಂಜೀವಿ ‘ಪ್ರಜಾರಾಜ್ಯಂ’ ಎಂಬ ಪಕ್ಷ ಸ್ಥಾಪಿಸಿ ನಿಮ್ಮಂತೆಯೇ ತತ್ತ್ವ ಸಿದ್ಧಾಂತಗಳನ್ನು ಮಂಡಿಸಿ, ಎಷ್ಟೋ ಜನರ ತಲೆಕೆಡಿಸಿ, ನಂತರ ತನಗೆ ಸ್ಥಾನ ಸಿಕ್ಕ ನಂತರ ಪರ ಪಕ್ಷಕ್ಕೆ ಹಾರಿ, ಕಾರ್ಯಕರ್ತರನ್ನೆಲ್ಲ ನಡು ನೀರಿನಲ್ಲಿ ಕೈ ಬಿಟ್ಟರು. ನೀವು ಚಿರಂಜೀವಿ, ಕೇಜ್ರಿವಾಲ್ ತರಹ ಮುಂದೆ ಹೀಗೆ ವರ್ತಿಸುವುದಿಲ್ಲವೆಂಬ ಯಾವ ಗ್ಯಾರಂಟಿ?
9. ಪ್ರಜಾಕೀಯ ಕೇವಲ ಪದಗಳ ಆಟವಲ್ಲವಷ್ಟೇ? ರಾಜಕೀಯವನ್ನು ಪ್ರಜಾಕೀಯ ಅಂದ ತಕ್ಷಣ ಚುನಾವಣಾ ವ್ಯವಸ್ಥೆ ಬದಲಾಗದು. ಲೋಕಸಭಾ ಚುನಾವಣೆಯಿಂದ ಗ್ರಾಮಪಂಚಾಯತ್ ವರೆಗೆ ವ್ಯವಸ್ಥೆ ಹಾಗೆಯೇ ಮುಂದುವರಿಯುತ್ತದೆ. ಇದನ್ನು ನೀವು ಹೇಗೆ ಬದಲಾಯಿಸುವಿರಿ?
ನಾನೊಬ್ಬ ಸಾಮಾನ್ಯ ಕಾರ್ಮಿಕ! ನನಗೆ ಈ ಪ್ರಜಾಕೀಯವೆನ್ನುವುದೆಲ್ಲ ತೀರಾ ತಿಳಿಯದ ವಿಷಯಗಳಾದರೂ ಒಂದಷ್ಟು ಸಾಮಾನ್ಯ ಜ್ಞಾನವಂತೂ ಇರುವುದರಿಂದ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ಇದಕ್ಕೆ ನಿಮ್ಮಿಂದ ಉತ್ತರವನ್ನೂ ನಿರೀಕ್ಷಿಸುತ್ತಿದ್ದೇನೆ.
ನಿಮ್ಮ ಉತ್ತರಗಳು ಸಮರ್ಪಕವಾಗಿದ್ದರೆ ನಾನು ನನ್ನೆಲ್ಲ ಕೆಲಸ ಕಾರ್ಯಗಳನ್ನೂ ಬಿಟ್ಟು ನಿಮ್ಮ ‘ಸ್ವಚ್ಛ’ ಪ್ರಜಾಕೀಯದ ಪ್ರಚಾರಕ್ಕೆ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತೇನೆ. ನಿಮ್ಮ ಉತ್ತರಗಳು ನಿಮ್ಮ ಸಿನಿಮಾ ನೋಡಿ ಸಿಕ್ಕಿದ ಖುಷಿಯ ಅರ್ಧವಾದರೂ ಇರಲಿ ಎಂಬ ನಂಬಿಕೆ ಅಷ್ಟೇ. ನಿಮಗೆ ಮೇಲ್ ಕೂಡ ಮಾಡಿದ್ದೇನೆ. ಉತ್ತರ ಮೇಲ್ನಲ್ಲಿ ಕೊಟ್ಟರೂ ಸರಿಯೇ.
ಕೃಪೆ: ಶಂಕರ ಕಾಳೇಗೌಡ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಗುರುವಾರ, 05/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಬಹುದಿನದ ನೀರಿಕ್ಷಿತ ಕನಸು ಕೈಗೂಡುವುದು. ಎಲ್ಲರಂತೆ ನೀವು ಕೂಡಾ ಸಮಾಜ ಮುಖಿಯಾಗಿ ಉ ನ್ನತ ಅಧಿಕಾರವನ್ನು ಹೊಂದುವಿರಿ. ಇದರೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಮೈಗೂಡಿಸಿಕೊಂಡಲ್ಲಿ ಒಳಿತಾಗುವುದು. ವೃಷಭ:- ಇವತ್ತಿನ ಕೆಲಸ ಕಾರ್ಯಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಈ ಬಗ್ಗೆ ಈ ಅನುಭೂತಿ ನಿಮ್ಮ ಮನದಲ್ಲಿರಲಿ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಶತ್ರುವನ್ನು ಕೂಡಾ…