ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.
ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.
ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.
ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.
ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಏಪ್ರಿಲ್, 2019) ಜೀವನದಲ್ಲಿ ಒತ್ತಡದ ಮನೋಭಾವವನ್ನು ತಪ್ಪಿಸಿ ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ….
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಸಾಮಾನ್ಯವಾಗಿ ಬಾಳೆಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಅಂದರೆ ಬಾಳೆಹಣ್ಣಿನ ಸಿಪ್ಪೆಯನ್ನು ಯಾರಾದರೂ ತಿನ್ನುತ್ತಾರಾ? ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಕಸದ ಬುಟ್ಟಿ ಸೇರುವ ಈ ಸಿಪ್ಪೆಯಿಂದಲೂ ಅನೇಕ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಬಾಳೆ ಹಣ್ಣಿನ ಸಿಪ್ಪೆಯು ಅನೇಕ ರೀತಿಯ ಆರೋಗ್ಯಕರ ಅಂಶಗಳನ್ನು ಹೊಂದಿದೆ. ಈ ಹಣ್ಣಿನ ಸಿಪ್ಪೆಯಲ್ಲೂ ವಿಟಮಿನ್ ಬಿ6 ಅಧಿಕ ಪ್ರಮಾಣದಲ್ಲಿರುತ್ತದೆ. ಹಾಗೆಯೇ ನಾರಿನಂಶ, ಮೆಗ್ನೀಷಿಯಂ, ಪೊಟಾಷಿಯಂ ಕೂಡ ಇದರಲ್ಲಿ ಅಡಗಿರುತ್ತವೆ. ಇಂತಹ ಹಲವು ಪೋಷಕಾಂಶಗಳನ್ನು ಬಾಳೆ ಸಿಪ್ಪೆಯಿಂದ ಪಡೆಯಬಹುದಾಗಿದೆ….
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…