ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…