ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಉತ್ತರ ಕನ್ನಡ ಜಿಲ್ಲೆಯ ಯೆಲ್ಲಾಪುರ ಗ್ರಾಮದ ಸಹಕಾರ ಸೊಸೈಟಿ ಶಾದಿಭಾಗ್ಯ ಯೋಜನೆಯಡಿ ಬಂಪರ್ ಬಹುಮಾನ ಘೋಷಿಸಿದೆ.ಆನಗೋಡು ಗ್ರಾಮದ ರೈತನನ್ನು ವಿವಾಹವಾದ ಯಾವುದೇ ಯುವತಿಯ ಅಕೌಂಟ್ ಗೆ 1 ಲಕ್ಷ ರು ಹಣ ಡೆಪಾಸಿಟ್ ಮಾಡಲಾಗುವುದು. ಈ ಆಫರ್ ಆನಗೋಡು ಗ್ರಾಮಸ್ಥರಿಗೆ ಹಾಗೂ ಆನಗೋಡು ಸೇವಾ ಸಹಕಾರಿ ಸಂಘದ ಸದಸ್ಯರಿಗೆ ಮಾತ್ರ ಅನ್ವಯಿಸುತ್ತಿದೆ.ಈ ಯೋಜನೆ 2019ರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಸಹಾಯಕರಾಗಿರುವ ಕುಟುಂಬಗಳಿಗೆ ಧನ ಸಹಾಯವಾಗಲಿದೆ, ಭವಿಷ್ಯದಲ್ಲಿ ಅವರಿಗೆ ಸಹಾಯವಾಗಲಿ ಎಂಬ…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…