ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ.
ಆದರೆ ಆಧಾರ್ ಕಾರ್ಡ್ ಅರ್ಜಿ ತುಂಬುವ ಸಂದರ್ಭದಲ್ಲಿ, ನಮ್ಮ ಹೆಸರು, ವಿಳಾಸ, ಲಿಂಗ, ಹುಟ್ಟಿದ ದಿನ, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ ಮುಂತಾದ ಮಾಹಿತಿಗಳನ್ನು ದಾಖಲಿಸುವಾಗ ಸಹಜವಾಗಿಯೇ ತಪ್ಪುಗಳಾಗಿರುತ್ತವೆ. ಇಂತಹ ತಪ್ಪುಗಳಿಂದಾಗಿ ತುಂಬಾ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಹಾಗಾದ್ರೆ ಇದಕ್ಕೆ ಬೇರೆ ಏನಾದ್ರೂ ಮಾರ್ಗವಿದಯೇ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು.
ಹೌದು, ಇಂತಹ ತಪ್ಪುಗಳನ್ನು ನೀವೇ ಸ್ವತಹ ಅಪ್ಡೇಟ್ ಮಾಡಿಕೊಳ್ಳಬಹುದು.ಹೇಗಂತೀರಾ!ಅದಕ್ಕಾಗಿ ಇಲ್ಲೊಂದು ಮಾರ್ಗದರ್ಶಿ ಇದೆ, ಮುಂದೆ ಓದಿ…
ಆಧಾರ್ ಕಾರ್ಡ್ನಲ್ಲಿ ತಪ್ಪಾಗಿ ದಾಖಲಾಗಿರುವ ನಿಮ್ಮ ಖಾಸಗಿ ದಾಖಲೆಗಳನ್ನು ಸರಿಪಡಿಸಲು ನೀವು ಪ್ರಪ್ರಥಮವಾಗಿ ಯುಐಡಿಎಐ ವೆಬ್ ಸೈಟ್ ಸಂದರ್ಶಿಸಬೇಕು.
ಆಧಾರ್ ಕಾರ್ಡ್ ನಲ್ಲಿ ಬದಲಾವಣೆ ಮಾಡಲು ಅಥವಾ ಅಪ್ಡೇಟ್ ಮಾಡಲು ಯುಐಡಿಎಐ ಆಧಾರ್ ಕಾರ್ಡ್ ಸೆಲ್ಪ್ ಸರ್ವಿಸ್ ಅಪ್ಡೇಟ್ ಪೋರ್ಟಲ್ ಪರಿಚಯಿಸಿದೆ.(https://ssup.uidai. gov.in/web/guest/update). ಈ ಪೋರ್ಟಲ್ ಗೆ ಭೇಟಿ ಕೊಟ್ಟ ನಂತರ ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿ. ತದನಂತರ ನಿಮ್ಮ ಮೊಬೈಲ್ ನಂಬರ್ ಗೆ ಒಟಿಪಿ ಕೋಡ್ ಬರುತ್ತದೆ.ಕೆಲವೊಂದು ಮುಖ್ಯ ಖಾಸಗಿ ವಿವರಗಳನ್ನು ಸರಿಪಡಿಸಲು ಅಗತ್ಯವಿರುವ ದಾಖಲೆಪತ್ರಗಳನ್ನು ಸಲ್ಲಿಸಬೇಕಾಗುವುದು; ಆದರೆ ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ ಮುಂತಾದ ವಿವರಗಳಲ್ಲಿನ ತಪ್ಪುಗಳನ್ನು ಸರಿಪಡಿಸಲು ಯಾವುದೇ ದಾಖಲೆ ಪತ್ರಗಳು ಬೇಕಾಗಿಲ್ಲ.
ಮೇಲಿನ ಚಿತ್ರದಲ್ಲಿ ತೋರಿಸದಂತೆ ನಿಮ್ಮ ಆಯ್ಕೆಯನ್ನು ನೀವು ಕ್ಲಿಕ್ ಮಾಡುವ ಮೂಲಕ ಆಯ್ದುಕೊಳ್ಳಬೇಕು.
ನಿಮ್ಮ ಆಧಾರ್ ನಂಬರ್ ಎಂಟರ್ ಮಾಡಿದಾಕ್ಷಣ ನಿಮಗೆ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಪೋನಿಗೆ ಒನ್ ಟೈಮ್ ಪಾಸ್ವರ್ಡ್ (ಓಟಿಪಿ) ಬರುತ್ತದೆ.
ಟೆಕ್ಸ್ಟ್ ವೆರಿಫಿಕೇಶನ್ ಬಾಕ್ಸ್ನಲ್ಲಿ ನೀವು ನಿಮಗೆ ದೊರಕಿರುವ ಓಟಿಪಿಯನ್ನು ಎಂಟರ್ ಮಾಡಬೇಕು. ಅದಕ್ಕಾಗಿ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ಚಿತ್ರವು ಕಾಣಿಸಿಕೊಳ್ಳುತ್ತದೆ :
ಯುಐಡಿಎಐ ಆನ್ಲೈನ್ ಪೋರ್ಟಲ್ ಮೂಲಕ ಹೆಸರು, ಲಿಂಗ, ಜನ್ಮದಿನಾಂಕ, ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಅಪ್ಡೇಟ್ ಅಥವಾ ಬದಲಾವಣೆ ಮಾಡಬಹುದು.
ಬದಲಾವಣೆಯ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ನೀವು “ಸಬ್ಮಿಟ್’ ಮಾಡಬೇಕಾಗುತ್ತದೆ. ಅದು ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಈ ರೀತಿಯಾಗಿ ಗೋಚರವಾಗುತ್ತದೆ.
ಇದೆಲ್ಲವೂ ಮುಗಿದ ಬಳಿಕ ನಿಮಗೆ ಯುಆರ್ಎನ್ ನಂಬರ್ ಸಿಗುತ್ತದೆ. ಈ ನಂಬರನ್ನು ನೀವು ಜಾಗ್ರತೆಯಾಗಿ ಇರಿಸಿಕೊಂಡು ನೀವು ಮಾಡಿರುವ ಬದಲಾವಣೆ/ತಿದ್ದುಪಡಿಗಳು ಕಾರ್ಯಗತವಾಗುವುದನ್ನು ಆನ್ಲೈನ್ನಲ್ಲೇ ತಿಳಿದುಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಒಂದು ಕಾಲದಲ್ಲಿ ನೃತ್ಯ ಅಂದ್ರೆ ಏನು ಅಂತ ಸ್ಯಾಂಡಲ್ ವುಡ್ ಗೆ ತೋರಿಸಿಕೊಟ್ಟವರು ಅಂದ್ರೆ ನಟ ವಿನೋದ್ ರಾಜ್. ಹೌದು. ತಮ್ಮ ನೃತ್ಯದ ಮೂಲಕ ಇಡೀ ಕರ್ನಾಟಕವನ್ನೇ ಗೆದ್ದಿದ್ದರು. ಇನ್ನು ಅವರು ಕೆಲವು ಸಿನಿಮಾಗಳಲ್ಲಿ ನಟನಾಗಿ ನಟಿಸಿದ್ದು, ಎಲ್ಲರೂ ಅವರ ನಟನೆ ಹಾಗು ನೃತ್ಯಕ್ಕೆ ಫಿದಾ ಆಗಿದ್ದರು. ಆದರೆ ಕಾಲ ಕಳೆದಂತೆ ಅವರಿಗೆ ಚಿತ್ರಗಳ ಅವಕಾಶ ಕಡಿಮೆಯಾಗಿದ್ದರಿಂದ ಅವರು ಚಿತ್ರರಂಗದಿಂದ ದೂರ ಉಳಿಯಬೇಕಾಯಿತು. ಇನ್ನು ಅವರ ಕೊನೆ ಸಿನಿಮಾ 2009ರಲ್ಲಿ ತೆರೆ ಕಂಡ ‘ಯಾರದು’ ಆಗಿದ್ದು, ನಂತರ…
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…