ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.

ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ.ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ ಅರ್ಜಿಯನ್ನು ಕೇಳಿ ಪಡೆಯಿರಿ. ಮತ್ತು ಆ ಅರ್ಜಿಯಲ್ಲಿ ನಿಮ್ಮ ಮಾಹಿತಿಯನ್ನು ಸರಿಯಾಗಿ ಭರ್ತಿಮಾಡಿನಂತರ ಅವರು ನಿಮ್ಮ ಬಯೋಮೆಟ್ರಿಕ್(ಬೆರಳಚ್ಚು ಮತ್ತು ಕಣ್ಣಿನ ಪಾಪೆ) ಸ್ಕ್ಯಾನ್ ಮಾಡಿ ಮಾಹಿತಿಗಳನ್ನು ತೆಗೆದುಕೊಳ್ಳುತ್ತಾರೆ. ಮತ್ತು ಪುನಃ ಹೊಸದಾಗಿ ಫೋಟೋ ತೆಗೆದುಕೊಳ್ಳುತ್ತಾರೆ. ಅಲ್ಲಿ ತೆಗೆದುಕೊಂಡ ಫೋಟೋವನ್ನು ತೋರಿಸುವಂತೆ ಕ್ಯಾಮರಾಮನ್ ಬಳಿ ಕೇಳಿ, ಚನ್ನಾಗಿಲ್ಲದಿದ್ದರೆ ಮತ್ತೊಮ್ಮೆ ಬೇರೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಿ.. ಇದು ಕ್ಯಾಮರಾಮ್ಯಾನ್ ನ ವರ್ತನೆಗೆ ಅವಲಂಭಿತವಾಗಿರುತ್ತದೆ.

ವಿವರಗಳನ್ನು ಪಡೆದನಂತರ ಅವನ್ನು ಮುಂದಿನ ಪ್ರಕ್ರಿಯೆಗಳಿಗಾಗಿ ಯುಐಡಿಎಐನ ಡೇಟಾ ಸೆಂಟರ್ ಕಳುಹಿಸಲಾಗುವುದು ಮತ್ತು 2 ವಾರಗಳ ನಂತರ ನೀವು ಅದೇ 12-ಅಂಕಿಯ ವಿಶಿಷ್ಟ ಸಂಖ್ಯೆಯೊಂದಿಗೆ ಆದರೆ ಬೇರೆ ಫೋಟೋವಿರುವ ಆಧಾರ್ ಕಾರ್ಡ್ ನಿಮ್ಮ ವಿಳಾಸಕ್ಕೆ ಅಂಚೆಮೂಲಕ ಬರುತ್ತದೆ. ಅಗತ್ಯವಿದ್ದವರು ಅದರ ಅನ್ನು ಆನ್ಲೈನ್ ನಲ್ಲಿಯೇ ಡೌನ್ಲೋಡ್ ಮಾಡಿಕೊಳ್ಳಬಹುದು.ಆದರೆ ನೀವು ಈ ಸಂಪೂರ್ಣ ಕಾರ್ಯವಿಧಾನಕ್ಕೆ ರೂ. 15 /-ಅನ್ನು ಪಾವತಿಸಬೇಕು ಏಕೆಂದರೆ ಆಧಾರ್ ಕಾರ್ಡ್ ಗೆ ದಾಖಲಾತಿ ಮಾಡಲು ಕೇವಲ ಮೊದಲ ಬಾರಿ ಮಾತ್ರ ಉಚಿತವಾಗಿರುತ್ತದೆ.. ಒಂದಕ್ಕಿಂತ ಹೆಚ್ಚು ಬಾರಿ ತಿದ್ದುಪಡಿ ಮಾಡಿಸಲು ಮುಂದಾದರೆ ಅದಕ್ಕೆ ಶುಲ್ಕ ಪಾವತಿಸಬೇಕಾಗುತ್ತದೆ.

ಸೂಚನೆ:ದುರದೃಷ್ಟವಶಾತ್ ನಿಮ್ಮ ಆಧಾರ್ ಕಾರ್ಡ್ ನ ಫೋಟೋವನ್ನು ಆನ್ ಲೈನ್ ಇಂಟರ್ನೆಟ್ ಮೂಲಕ ಚೇಂಜ್ ಮಾಡುವುದಕ್ಕೆ ಯಾವುದೇ ಅವಾಕಾಶಗಳಿರುವುದಿಲ್ಲ. ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಆಧಾರ್ ಧಾಖಲಾತಿ ಕೇಂದ್ರಕ್ಕೆ ಭೇಟಿ ನೀಡಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…