ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.
ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?
ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.
ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!
ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.
ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.
ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.