ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.
ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?
ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.
ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!
ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.
ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.
ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…