ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.
ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?
ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.
ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!
ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.
ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.
ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಸ್ಟೈಲ್ಗಾಗಿ ಕಡಿಮೆ ಬೆಲೆಯ ಸನ್ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್ಗ್ಲಾಸ್ ಕಣ್ಣಿಗೆ…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…