News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

744

ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.

ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?

ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.

ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!

ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.

ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.

ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • inspirational

    ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

    ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…

  • ಆರೋಗ್ಯ

    ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

    ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.