ಜ್ಯೋತಿಷ್ಯ

ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

257

ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು.

ವೃಷಭ:-

ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು ತಾಳ್ಮೆ ಸಮಾಧಾನದಿಂದ ಪರಿಹರಿಸಿಕೊಳ್ಳಬೇಕು. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

 

ಮಿಥುನ:

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ಸಹಧರ್ಮಿಣಿಯ ಸಾರ್ಥಕ ಸಹಯೋಗ ಸುಖವರ್ಧನೆಗೆ ಪ್ರಚೋದನೆ ನೀಡಲಿದೆ. ಹಾಗೆ ಆರ್ಥಿಕವಾಗಿ ಮುನ್ನಡೆ ತೋರಿ ಬಂದರೂ ಖರ್ಚುವೆಚ್ಚಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.

ಕಟಕ :-

ನೌಕರ ವರ್ಗಕ್ಕೆ ಸಂತಸ ಸುದ್ದಿ ಇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯಕ್ಕೆ ಕ್ಷತಿ ಇರಲಾರದು. ಗೃಹ ಬದಲಾವಣೆಯ ಸಾಧ್ಯತೆ ಇರುತ್ತದೆ. ಸ್ವಪಯತ್ನಬಲಕ್ಕೆ ವಿಶ್ವಾಸವಿಟ್ಟು ಮುಂದುವರಿಯಿರಿ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

 

 ಸಿಂಹ:

ಮನೆಯಲ್ಲಿ ದೇವತಾಕಾರ್ಯಗಳ ಚಿಂತನೆ ನಡೆಯಲಿದೆ. ಪ್ರವಾಸಾದಿಗಳಿಂದ ಸಂತಸ ತರುತ್ತದೆ. ಆರ್ಥಿಕ ಹಿಡಿತವಿದ್ದಲ್ಲಿ ಹೆಚ್ಚಿನ ಸಮಸ್ಯೆ ಇರಲಾರದು. ಅವಿವಿರತ ದುಡಿಮೆ ದೇಹಾಯಾಸ ತಂದೀತು. ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ.

ಕನ್ಯಾ :-

ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ. ಗೃಹ ನಿರ್ಮಾಣಕಾರ್ಯಗಳಿಗೆ ಸಕಾಲವಿದು. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ತೋರಿ ಬಂದೀತು. ದಾಂಪತ್ಯ ಜೀವನದಲ್ಲಿ ಸಂತೃಪ್ತಿ ತರುತ್ತದೆ. ಗುರುಹಿರಿಯರ ಸೇವೆ ಶಾಂತಿ ಸಮಾಧಾನ ತರಲಿದೆ.

 

ತುಲಾ:

ವಾದೀತು. ಬಂಧುಮಿತ್ರರ ಸಹಕಾರದಿಂದ ನೆಮ್ಮದಿ ತಂದೀತು. ದೇವರ ಉಪಾಸನೆಯಿಂದ ಮನಸ್ಸಿನ ಮನೋಕಾಮನೆಗಳು ನಡೆಯಲಿವೆ. ಕಾರ್ಯದೊತ್ತಡಗಳಿಂದ ಕಾರ್ಯವಿಳಂಬ ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು.

ವೃಶ್ಚಿಕ :-

ಆರ್ಥಿಕವಾಗಿ ವ್ಯಾಪಾರ ವ್ಯವಹಾರಗಳ ಬಗ್ಗೆ ಜಾಗ್ರತೆ ವಹಿಸಬೇಕು. ಸಾಂಸಾರಿಕವಾಗಿ ಹೆಚ್ಚಿನ ಹೊಂದಾಣಿಕೆಯನ್ನು ಮಾಡಿಕೊಳ್ಳಬೇಕಾದೀತು. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

 

ಧನಸ್ಸು:

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆ ಸಾಧಕವಾಗಲಿದೆ. ಆರ್ಥಿಕ ಸ್ಥಿತಿಯಲ್ಲಿ ಸಮಾಧಾನ ಕಂಡು ಬರುತ್ತದೆ. ಯೋಗ್ಯ ವಯಸ್ಕರು ಕಂಕಣಬಲವನ್ನು ಪಡೆಯಲಿದ್ದಾರೆ. ದಿನಾಂತ್ಯ ಶುಭವಿದೆ.

 

ಮಕರ :-

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಆಗಾಗ ರಾಹು ಕೇತು ಪೀಡೆಯಿಂದ ಮಾನಸಿಕ, ದೈಹಿಕ ಸಮಸ್ಯೆಗಳನ್ನು ಅನುಭವಿಸುವಿರಿ. ಶಕ್ತಿ ಸಾಮರ್ಥ್ಯಗಳಿದ್ದರೂ ಆಗಾಗ ಆಲಸ್ಯ ವಿರುತ್ತದೆ. ದಿನಾಂತ್ಯ ಶುಭವಾರ್ತೆ ಇದೆ.

ಕುಂಭ:-

ಕ್ರೀಡಾಪಟುಗಳಿಗೆ ಹಾಗೂ ರಾಜಕೀಯ ವರ್ಗದವರಿಗೆ ಯಶಸ್ಸು ಹಿಂಬಾಲಿಸಲಿದೆ. ಆರ್ಥಿಕ ಸ್ಥಿತಿ ಉನ್ನತಿ ತರುತ್ತದೆ. ಧರ್ಮಪತ್ನಿಯ ಸಲಹೆಗಳಿಗೆ ಸ್ಪಂದಿಸಬೇಕಾಗುತ್ತದೆ. ಶುಭವಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಮೀನ:-

ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ. ಮಾತಿನಿಂದ ಅನಾವಶ್ಯಕ ಸಮಸ್ಯೆ ತಂದೀತು. ಚತುರತೆಯಿಂದ ಕಾರ್ಯ ಸಾಧಿಸಬೇಕಾಗುತ್ತದೆ. ರಾಹು ಕಿರಿಕಿರಿಯನ್ನು ಹಾಗೆ ಶನಿಯು ಆರ್ಥಿಕ ನಷ್ಟ ತಂದಾನು. ಜಾಗ್ರತೆಯಿಂದ ಇರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ಗ್ಯಾಜೆಟ್

    ಮುಂಬರುವ ದಿನಗಳಲ್ಲಿ ಹೂವಾವೆಯ್ ಇಂಡಿಯಾದಿಂದ 5G ತಂತ್ರಜ್ಞಾನ ಬಳಕೆ..?ತಿಳಿಯಲು ಈ ಲೇಖನ ಓದಿ..

    ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…

  • ಸಾಧನೆ

    ತಂದೆ ಒಂದು ಸಹಿ ಗೋಸ್ಕರ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ನೋಡಿ. ಛಲದಿಂದ ಐಎಎಸ್ ಅಧಿಕಾರಿಯಾದ ಮಗಳು!

    ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…