News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational, ಜ್ಯೋತಿಷ್ಯ

ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

380

ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ.

ವೃಷಭ:-

ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮನೆಯವರೊಂದಿಗೆ ಉತ್ತಮ ಸಂಬಂಧ. ವಿದ್ಯಾರ್ಥಿಗಳಿಗೆ ಆಗಾಗ ಆಲಸ್ಯ ಇರುತ್ತದೆ. ವಾಹನ ಖರೀದಿಗೆ ಸಕಾಲವಲ್ಲ. ಶುಭಮಂಗಲ ಕಾರ್ಯಗಳಿಗೆ ವಿಳಂಬವಾಗುತ್ತದೆ.

 

 

ಮಿಥುನ:

ಕಾರ್ಯಕ್ಷೇತ್ರದಲ್ಲಿ ಸ್ನೇಹ, ವಿಶ್ವಾಸಗಳು ಮೂಡಿ ಮುನ್ನಡೆಗೆ ನಾಂದಿಯಾಗಲಿದೆ. ನೂತನ ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಸಿಗದು. ಯೋಗ್ಯ ವಯಸ್ಕರು ಉತ್ತಮ ಸಂಬಂಧಿಗಳ ಪ್ರಸ್ತಾವಕ್ಕೆ ಕಂಕಣಬಲವನ್ನು ಹೊಂದಲಿದ್ದಾರೆ. ಸರಕಾರಿ ಅಧಿಕಾರಿಗಳಿಗೆ ಮುಂಭಡ್ತಿ ಇರುತ್ತದೆ. ಗುರಿ ಸಾಧನೆಗೆ ಹೊಸ ಹಾದಿ ಕ್ರಮಿಸಬೇಕು. ನಿರಾಶರಾಗದೆ ಮುನ್ನುಗ್ಗುವುದರಿಂದ ಕಾರ್ಯ ಸಾಧನೆ.

 

ಕಟಕ :-

ಆರ್ಥಿಕವಾಗಿ ಲಾಭವಾದರೂ ವಂಚನೆಗೆ ಗುರಿಯಾಗಲಿದ್ದೀರಿ. ಕಲಾವಿದರಿಗೆ ಹೆಚ್ಚಿನ ಸ್ಥಾನಮಾನಗಳು ಲಭ್ಯವಾಗಲಿದೆ. ಕೃಷಿಕರಿಗೆ ಉತ್ತಮ ಆದಾಯ. ಆಸ್ತಿ ಖರೀದಿಯ ಸಾಧ್ಯತೆ. ದೈನಂದಿನ ಕೆಲಸ ಕಾರ್ಯಗಳನ್ನು ವಿಶ್ವಾಸದಿಂದ ಮಾಡಿ. ಆಗಾಗ ಸಂಚಾರದಿಂದ ದೇಹಾಯಾಸಕ್ಕೆ ಕಾರಣವಾಗಲಿದೆ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ನಡೆಸಬೇಕಾಗುತ್ತದೆ. ದಿನಾಂತ್ಯ ಶುಭ.

 

 ಸಿಂಹ:

ಹಿತೈಷಿಗಳ ಭೇಟಿ ಸಾಧ್ಯತೆ. ವ್ಯವಹಾರದಲ್ಲಿ ಲಾಭ. ಸಿದ್ಧಿಯಾಗಲಿದೆ. ಶ್ರೀದೇವತಾದರ್ಶನ ಭಾಗ್ಯದಿಂದ ಶಾಂತಿ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಬಹುದಿನಗಳ ಬಳಿಕ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆಗಾಗ ಧನವ್ಯಯವಾದರೂ ಕಾರ್ಯ ಸ್ನೇಹಿತರು ಮತ್ತು ಕೌಟುಂಬಿಕ ಸದಸ್ಯರಿಂದ ಉತ್ತಮ ನೆರವು. ದಿನದ ಮಟ್ಟಿಗೆ ಪ್ರಯಾಣ ಬೇಡ. ಸ್ತ್ರೀಯರ ಇಷ್ಟಾರ್ಥಗಳು ನೆರವೇರಲಿವೆ.

ಕನ್ಯಾ :-

ವೃದ್ಧಿಯಾಗಲಿದೆ. ಹಣಕಾಸಿನ ಬಗ್ಗೆ ಹಿಡಿತ ಇರಲಿ. ಅನಾವಶ್ಯಕವಾಗಿ ದುಂದುವೆಚ್ಚಗಳಾಗಬಹುದು. ಬಾಧ್ಯತೆಗಳ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವಿರಿ. ಸಂಶೋಧನೆಗೆ ಪ್ರೋತ್ಸಾಹ ಸಾಧ್ಯತೆ. ವೈವಾಹಿಕ ವ್ಯವಹಾರಗಳಿಗೆ ಚಾಲನೆ ದೊರಕಲಿದೆ. ಕಾರ್ಮಿಕ ವರ್ಗದವರ ಮನೋಕಾಮನೆ ನೆರವೇರುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಆದಾಯ

 

ತುಲಾ:

ವಾಹನ ವಹಿವಾಟುಗಳಲ್ಲಿ ನಿರೀಕ್ಷೆಯಂತೆ ಲಾಭ. ಔದ್ಯೋಗಿಕ ವಿಷಯಗಳಲ್ಲಿ ಅನುಕೂಲ. ಸಂಚಾರದಲ್ಲಿ ದೇಹಾಯಾಸ ತಂದೀತು. ಯೋಗ್ಯ ವಯಸ್ಕರು ಕಂಕಣಬಲಕ್ಕೆ ಪೂರಕವಾದಾರು. ಹೂಡಿಕೆಗಳು ಆದಾಯವನ್ನು ಹೆಚ್ಚಿಸಲಿವೆ. ವೃತ್ತಿರಂಗದಲ್ಲಿ ಕಾರ್ಯಒತ್ತಡಗಳಿರುತ್ತವೆ. ದಿನಾಂತ್ಯ ಶುಭವಿದೆ. ವಿವಾಹ ಸಂಬಂಧಿ ಮಾತುಕತೆಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಸಾಮಾಜಿಕ ಬದುಕಿನಲ್ಲಿ ಉಲ್ಲಾಸ.

ವೃಶ್ಚಿಕ :-

ಕುಟುಂಬದ ಜಟಿಲ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸುವಿರಿ. ನಿರುದ್ಯೋಗಿಗಳು ಬಂದ ಅವಕಾಶಗಳನ್ನು ಸದುಪಯೋಗಿಸಬೇಕು. ಅನಗತ್ಯವಾದ ವಿವಾದಗಳಿಂದ ಕಿರಿಕಿರಿ ತಂದೀತು. ಮನೆಯಲ್ಲಿ ಚೋರ ಭೀತಿ ತಂದೀತು. ದೇಹಾರೋಗ್ಯದ ಬಗ್ಗೆ ಗಮನ ವಿರಬೇಕು. ಅಧಿಕ ಧನಾಗಮನದಿಂದ ಮನೋಲ್ಲಾಸ. ಬಂಧುಗಳ ಸತ್ಕಾರಕ್ಕಾಗಿ ಅಪಾರ ವೆಚ್ಚ ಭರಿಸಬೇಕಾದೀತು.

 

ಧನಸ್ಸು:

ಉದ್ಯೋಗದಲ್ಲಿ ಸ್ಥಾನ ಅಥವಾ ಹುದ್ದೆಯಲ್ಲಿ ಬದಲಾವಣೆ ಕುರಿತು ಚರ್ಚಿಸಿಲಿದ್ದೀರಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ ವಿರುತ್ತದೆ. ಶ್ರೀದೇವರ ಅನುಗ್ರಹದಿಂದ ಮನಸ್ಸಿಗೆ ಶಾಂತಿ ಸಮಾಧಾನ ವಿರುತ್ತದೆ. ಹಿರಿಯ ಅಧಿಕಾರಿಗಳಿಗೆ ಮುಂಭಡ್ತಿ ಹಾಗೂ ಶ್ರೀದೇವರ ದರ್ಶನ ಭಾಗ್ಯವಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶದ ಸುದ್ದಿ ಕೇಳಿಬರಲಿದೆ. ಅವಕಾಶಗಳ ಸದುಪಯೋಗ ಪಡಿಸಿಕೊಳ್ಳಿ.

ಮಕರ :-

ಬಂಡವಾಳ ಕರಗಲಿದೆ ಜಾಗ್ರತೆ ವಹಿಸಿರಿ. ದೂರದೂರಿಗೆ ಪ್ರಯಾಣ. ಸಾಮಾಜಿಕ ಗೌರವಕ್ಕೆ ಪಾತ್ರರಾಗಲಿದ್ದೀರಿ. ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ಮನಸ್ಸಿಗೆ ನೆಮ್ಮದಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ ನಿರೀಕ್ಷಿತ ಕೆಲಸಕಾರ್ಯಗಳು ಎಣಿಸಿದಂತೆ ನಡೆಯಲಾರವು. ವಿದ್ಯಾರ್ಥಿಗಳು ಅಧಿಕ ಪ್ರಯತ್ನಬಲದಿಂದ ಮುಂದುವರಿಯಬೇಕಾಗುತ್ತದೆ. ದಿನಾಂತ್ಯ ಶುಭವಿದೆ.

 

ಕುಂಭ:-

ಮನಸ್ಸಿನಂತೆ ಒಂದೊಂದೇ ಕಾರ್ಯಗಳು ನಡೆಯಲಿವೆ. ಸಾಮಾಜಿಕ ಕಾರ್ಯ ಚಟುವಟಿಕೆ, ಮನರಂಜನೆ, ಸಪತ್ನಿಕರಾಗಿ ಭೋಜನ ಕೂಟಗಳಲ್ಲಿ ಭಾಗವಹಿಸಲಿದ್ದೀರಿ. ದೈವರಕ್ಷೆ ಇರುವುದರಿಂದ ಯಶಸ್ಸನ್ನು ಕಂಡುಕೊಳ್ಳಲಿದ್ದೀರಿ. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ವೃತ್ತಿರಂಗದಲ್ಲಿ ಹೊಂದಿಕೊಂಡು ಹೋಗುವ ದಿನಗಳಿವು. ಧೈರ್ಯದಿಂದ ಮುಂದುವರಿಯಿರಿ.

 

ಮೀನ:-

ಪರಿಶ್ರಮದಿಂದ ದುಡಿಮೆ. ನಿತ್ಯದ ಕೆಲಸಗಳಿಂದ ತುಸು ವಿಶ್ರಾಂತಿಯ ಅಗತ್ಯ. ಸಾಂಸಾರಿಕವಾಗಿ ಸಂತಸದ ದಿನ. ಎಣಿಸಿದ ಕೆಲಸಕಾರ್ಯಗಳು ಹಂತ ಹಂತವಾಗಿ ನಡೆಯಲಿವೆ. ಹೊಸ ಕೆಲಸಕಾರ್ಯಗಳು ವಿಳಂಬವಾದಾವು. ಅಧ್ಯಾಪಕರಿಗೆ ಸ್ಥಾನ ಬದಲಾವಣೆ ತೋರಿ ಬಂದೀತು. ಪ್ರೀತಿಪಾತ್ರರು ಹಾಗೂ ಗೆಳೆಯರ ಜತೆ ಸಂತಸದ ಸಮಯ ಕಳೆಯಲಿದ್ದೀರಿ. ಹಿತೈಷಿಗಳ ಆಗಮನ ಸಂತಸ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಉಬ್ಬಸ ಸಮಸ್ಯೆಗೆ ಮನೆ ಮದ್ದು

    ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ. ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ಸುದ್ದಿ

    ಶಾಸಕರ ರಾಜಿನಾಮೆ : ಸಂವಿಧಾನ ತಿದ್ದುಪಡಿ ಮಾಡಿ ಎಂದು ರವಿಗೌಡ ಪ್ರಧಾನ ಮಂತ್ರಿಗೆ ಬರೆದ ಪತ್ರ …ಏನೆಂದು ತಿಳಿಯಿರಿ ?

    ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ  ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…

  • ಸಿನಿಮಾ

    ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

    ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ವ್ಯಕ್ತಿ ವಿಶೇಷಣ

    ಈ 10 ಗುಣಗಳು ನಿಮ್ಮಲ್ಲಿದ್ರೆ ಜನರು ನಿಮ್ಮನು ಅಪರೂಪದ ವ್ಯಕ್ತಿ ಎಂದು ಕಾಣುತ್ತಾರೆ ..!ತಿಳಿಯಲು ಈ ಲೇಖನ ಓದಿ…

    ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
    ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.