ಜ್ಯೋತಿಷ್ಯ

ಇಂದು ಸೋಮವಾರ,12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

397

ಇಂದು ಸೋಮವಾರ,  12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ವೃಷಭ:-

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ಮಿಥುನ:

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಕಟಕ :-

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

 ಸಿಂಹ:

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ಕನ್ಯಾ :-

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ತುಲಾ:

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ವೃಶ್ಚಿಕ :-

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಧನಸ್ಸು:

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು.  ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಮಕರ :-

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಕುಂಭ:-

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಮೀನ:-

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ.  ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ.  ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

    ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಂಬೆ ರಸಕ್ಕೆಅರಿಶಿನ ಬೆರೆಸಿ ಕುಡಿಯುವುದರಿಂದ ಆಗುವ 9 ಅದ್ಬುತ ಲಾಭಗಳು..!

    ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…

  • govt

    ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸದ 32 ಕಂಪನಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್,..!!

    ಮುಂಬೈ ಮೂಲದ 32 ಕಂಪನಿಗಳ ನಿರ್ವಾಹಕ ನಿರ್ದೇಶಕರಿಗೆ ಬಂಧನದಭೀತಿ ಎದುರಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸದ ಈ 32 ಕಂಪನಿಗಳ ಉನ್ನತಾಧಿಕಾರಿಗಳಿಗೆ ಸುಪ್ರೀಂ ಕೋರ್ಟ್  ಜಾಮೀನು ರಹಿತ ವಾರಂಟ್ ಸೂಚಿಸಿದೆ . ಮೂರು ವರ್ಷಗಳ ಹಿಂದೆ ನೀಡಿದ ಆದೇಶವನ್ನು ಇವರು ಪಾಲಿಸಿಲ್ಲ ಎಂಬುದು ಇದಕ್ಕೆ ಮುಖ್ಯ ಕಾರಣವಾಗಿದೆ . ಮುಂಬೈ ಮೂಲದ ಕಂಪನಿಗಳಾದ ಅಕ್ಷರ್ ಮರ್ಸಾಂಟೈಲ್, ಬೀಟಾ ಟ್ರೇಡಿಂಗ್, ಅನ್​ಶುಲ್ ಮೆರ್ಸಾಂಟೈಲ್, ಎವರ್​ಫ್ರೇಮ್ ಟ್ರೇಡಿಂಗ್, ಹೈಝೋನ್ ಟ್ರೇಡಿಂಗ್, ಇನಾರ್ಬಿಟ್ ಟ್ರೇಡಿಂಗ್, ಲಕ್ಷ್ ಮರ್ಸಾಂಟೈಲ್, ಮ್ಯಾಜಿನೋಟ್ ಟ್ರೇಡಿಂಗ್, ಮಾಂಟ್ರಿಯಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…