ರಾಜಕೀಯ

ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

389

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆಯಲ್ಲಿ ಉತ್ತರ ಕರ್ನಾಟಕದ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ಕೊಡಲು ನಿರ್ಧರಿಸಿದ್ದಾರೆನ್ನಲಾಗಿದೆ. ಅದೇ ರೀತಿ ಅರಣ್ಯ ಸಚಿವ ಆರ್.ಶಂಕರ್ ಅವರನ್ನು ಸಂಪುಟದಿಂದ ಕೈಬಿಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಕೈಬಿಟ್ಟು ಸತೀಶ್ ಜಾರಕಿಹೊಳಿ, ಎಂಎಲ್ ಸಿ ಆರ್.ಬಿ.ತಿಮ್ಮಾಪುರ್, ಸಿಎಸ್ ಶಿವಳ್ಳಿ, ಎಂಟಿಬಿ ನಾಗರಾಜ್, ಪಿಟಿ ಪರಮೇಶ್ವರ್ ನಾಯ್ಕ್, ಎಂಬಿ ಪಾಟೀಲ್, ರಹೀಂ ಖಾನ್, ತುಕಾರಾಂ ಸೇರಿದಂತೆ ಎಂಟು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನೂ ಸಮ್ಮಿಶ್ರ ಸರ್ಕಾರ 8 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕಕ್ಕೂ ಮುಂದಾಗಿದೆ. ಮಾಜಿ ಸಿಎಂ ಧರಂ ಸಿಂಗ್ ಪುತ್ರ ಅಜಯ್ ಸಿಂಗ್, ದೆಹಲಿಯಲ್ಲಿ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಲವಿದ್ದಾರೆ, ವಿ. ಮುನಿಯಪ್ಪ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…