ಗ್ಯಾಜೆಟ್

ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

371

ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆ “ಇನ್‌ಮಾರ್‌ಸ್ಯಾಟ್’ ಸಹಾಯದಿಂದ ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡಲಿದೆ. ಸಾಮಾನ್ಯ ಮೊಬೈಲ್ ನೆಟ್‌ವರ್ಕ್ ಇಲ್ಲದ ಜಾಗದಲ್ಲಿ ಸ್ಯಾಟಿಲೈಟ್ ಫೋನ್ ಸೇವೆ ಇರಲಿದೆ. ಇದಕ್ಕಾಗಿ ಇನ್‌ಮಾರ್‌ಸ್ಯಾಟ್ ಒಟ್ಟು 14 ಉಪಗ್ರಹಗಳನ್ನು ಹೊಂದಿದೆ.

ಇಲ್ಲಿ ಓದಿರಿ :- ರೂ 799ಕ್ಕೆ ನೋಕಿಯಾ !!!

ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆ:- 1979ರಲ್ಲಿ ಯುನಿಟೆಡ್ ನೇಷನ್ ನಲ್ಲಿ ಆರಂಭವಾದ ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆಯಲ್ಲಿ ಭಾರತ ಸಂಸ್ಥಾಪಕ ಸದಸ್ಯವನ್ನು ಹೊಂದಿದೆ. ಭಾರತ ಸದ್ಯ ಪುಣೆಯಲ್ಲಿ ಸ್ಯಾಟಿಲೈಟ್ ಫೋನ್ ಸೇವೆಗೆ ಅಗತ್ಯವಿರುವ ಭೂ ವಿನಿಮಯ ಕೇಂದ್ರವನ್ನು ಸ್ಥಾಪಿಸಿದೆ.

ವಿಮಾನದಲ್ಲಿ, ಹಡಗಿನಲ್ಲೂ ಸೇವೆ ಇರಲಿದೆ:- ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದು, ಇದು ವಿಮಾನದಲ್ಲಿ ಪ್ರಯಾಣಿಸುವವರಿಗೆ ಮತ್ತು ಹಡಗಿನಲ್ಲಿ ಪ್ರಯಾಣಿಸುವರಿಗೆ ಸಹಾಯಕಾರಿಯಾಗಲಿದ್ದು, ಎಲ್ಲಿಂದ ಬೇಕಾದರು ಕರೆ ಮಾಡುವ ಮತ್ತು ಸ್ವೀಕರಿಸುವ ಅವಕಾಶ ಇರಲಿದೆ.

ವಾಯ್ಸ್ ಮತ್ತು ಎಸ್‌ಎಂಎಸ್ ಮಾತ್ರ ಸಾಧ್ಯ:-  ಬಿಎಸ್ಎನ್‌ಎಲ್ ಸ್ಯಾಟಿಲೈಟ್ ಫೋನ್ ಸೇವೆಯಲ್ಲಿ ಬಳಕೆದಾರರು ಕೇವಲ ವಾಯ್ಸ್ ಕರೆ ಮತ್ತು ಎಸ್‌ಎಂಎಸ್ ಗಳನ್ನು ಮಾತ್ರವೇ ಮಾಡಲು ಸಾಧ್ಯವಿರಲಿದೆ. ಇದನ್ನು ಬಳಕೆ ಮಾಡಬೇಕಾಗದರೆ ನೆಟ್‌ವರ್ಕ್ ಇಲ್ಲ ಎನ್ನುವ ಮಾತೇ ಇಲ್ಲ.

ಟಿಸಿಎಲ್ ಸೇವೆ ಅಂತ್ಯ:- ಇದುವರೆಗೂ ದೇಶದಲ್ಲಿ ಸ್ಯಾಟಲೈಟ್ ಫೋನ್‌ ಸೇವೆಯನ್ನು ನೀಡುತ್ತಿದ್ದ ಟಾಟಾ ಕಮ್ಯುನಿಕೇಷನ್ಸ್ ಲಿ ಜೂನ್ ಅಂತ್ಯದಿಂದ ತನ್ನ ಸೇವೆಯನ್ನು ನಿಲ್ಲಿಸಲಿದ್ದು, ಅದನ್ನು ಬಿಎಸ್ಎನ್ಎಲ್ ಮುಂದುವರೆಸಿಕೊಂಡು ಹೋಗಲಿದೆ ಎನ್ನಲಾಗಿದೆ.

ಮೊಬೈಲ್ ನಂತೆಯೇ ಇರಲಿದೆ:- ಬಿಎಸ್ಎನ್‌ಎಲ್ ಸ್ಯಾಟಿಲೈಟ್ ಫೋನ್ ಬಳಕೆಗೆ ಮೊಬೈಲ್‌ ಫೋನ್‌ ಮಾದರಿಯ ಉಪಕರಣ ದೊರೆಯಲಿದೆ. ಇದಕ್ಕಾಗಿ ದೊಡ್ಡ ಗ್ರಾತದ ಉಪಕರಣ ಬಳಕೆಯ ಅವಶ್ಯಕತೆ ಇರುವುದಿಲ್ಲ.

ಶೀಘ್ರವೇ ಜನ ಸಾಮಾನ್ಯರಿಗೂ ಈ ಸೇವೆ:- ಸದ್ಯ ಭಾರತದಲ್ಲಿ ಸ್ಯಾಟಿಲೈಟ್ ಫೋನ್ ಸೇವೆಯನ್ನು ಪೊಲೀಸ್‌ ವ್ಯವಸ್ಥೆ, ರೈಲ್ವೆ ಇಲಾಖೆ, ಗಡಿ ಭದ್ರತಾ ಪಡೆ ಮತ್ತು ಹಡಗುಗಳಲ್ಲಿ ಮಾತ್ರವೇ ಬಳಸುವ ಅವಕಾಶವನ್ನು ಮಾಡಿಕೊಡಲಾಗಿತ್ತು. ಆದರೆ ಮುಂದೇ ಜನರಿಗೆ ಈ ಸೇವೆ ವಿಸ್ತರಿಸುವ ಯೋಜನೆಯನ್ನು ರೂಪಿಸಲಾಗಿದೆ.

ಆದರೆ ದುಬಾರಿ ಬೆಲೆ:- ಸ್ಯಾಟಿಲೈಟ್ ಫೋನ್ ಪೋನ್‌ನಲ್ಲಿ ಒಂದು ಕರೆ ಮಾಡಬೇಕಾಗಿದರೆ ಪ್ರತಿ ನಿಮಿಷಕ್ಕೆ ರೂ.35 ರಿಂದ ರೂ. 45 ಪಾವತಿಸಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • ಸೌಂದರ್ಯ

    ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

    ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.