ಗ್ಯಾಜೆಟ್

ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

373

ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆ “ಇನ್‌ಮಾರ್‌ಸ್ಯಾಟ್’ ಸಹಾಯದಿಂದ ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡಲಿದೆ. ಸಾಮಾನ್ಯ ಮೊಬೈಲ್ ನೆಟ್‌ವರ್ಕ್ ಇಲ್ಲದ ಜಾಗದಲ್ಲಿ ಸ್ಯಾಟಿಲೈಟ್ ಫೋನ್ ಸೇವೆ ಇರಲಿದೆ. ಇದಕ್ಕಾಗಿ ಇನ್‌ಮಾರ್‌ಸ್ಯಾಟ್ ಒಟ್ಟು 14 ಉಪಗ್ರಹಗಳನ್ನು ಹೊಂದಿದೆ.

ಇಲ್ಲಿ ಓದಿರಿ :- ರೂ 799ಕ್ಕೆ ನೋಕಿಯಾ !!!

ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆ:- 1979ರಲ್ಲಿ ಯುನಿಟೆಡ್ ನೇಷನ್ ನಲ್ಲಿ ಆರಂಭವಾದ ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆಯಲ್ಲಿ ಭಾರತ ಸಂಸ್ಥಾಪಕ ಸದಸ್ಯವನ್ನು ಹೊಂದಿದೆ. ಭಾರತ ಸದ್ಯ ಪುಣೆಯಲ್ಲಿ ಸ್ಯಾಟಿಲೈಟ್ ಫೋನ್ ಸೇವೆಗೆ ಅಗತ್ಯವಿರುವ ಭೂ ವಿನಿಮಯ ಕೇಂದ್ರವನ್ನು ಸ್ಥಾಪಿಸಿದೆ.

ವಿಮಾನದಲ್ಲಿ, ಹಡಗಿನಲ್ಲೂ ಸೇವೆ ಇರಲಿದೆ:- ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದು, ಇದು ವಿಮಾನದಲ್ಲಿ ಪ್ರಯಾಣಿಸುವವರಿಗೆ ಮತ್ತು ಹಡಗಿನಲ್ಲಿ ಪ್ರಯಾಣಿಸುವರಿಗೆ ಸಹಾಯಕಾರಿಯಾಗಲಿದ್ದು, ಎಲ್ಲಿಂದ ಬೇಕಾದರು ಕರೆ ಮಾಡುವ ಮತ್ತು ಸ್ವೀಕರಿಸುವ ಅವಕಾಶ ಇರಲಿದೆ.

ವಾಯ್ಸ್ ಮತ್ತು ಎಸ್‌ಎಂಎಸ್ ಮಾತ್ರ ಸಾಧ್ಯ:-  ಬಿಎಸ್ಎನ್‌ಎಲ್ ಸ್ಯಾಟಿಲೈಟ್ ಫೋನ್ ಸೇವೆಯಲ್ಲಿ ಬಳಕೆದಾರರು ಕೇವಲ ವಾಯ್ಸ್ ಕರೆ ಮತ್ತು ಎಸ್‌ಎಂಎಸ್ ಗಳನ್ನು ಮಾತ್ರವೇ ಮಾಡಲು ಸಾಧ್ಯವಿರಲಿದೆ. ಇದನ್ನು ಬಳಕೆ ಮಾಡಬೇಕಾಗದರೆ ನೆಟ್‌ವರ್ಕ್ ಇಲ್ಲ ಎನ್ನುವ ಮಾತೇ ಇಲ್ಲ.

ಟಿಸಿಎಲ್ ಸೇವೆ ಅಂತ್ಯ:- ಇದುವರೆಗೂ ದೇಶದಲ್ಲಿ ಸ್ಯಾಟಲೈಟ್ ಫೋನ್‌ ಸೇವೆಯನ್ನು ನೀಡುತ್ತಿದ್ದ ಟಾಟಾ ಕಮ್ಯುನಿಕೇಷನ್ಸ್ ಲಿ ಜೂನ್ ಅಂತ್ಯದಿಂದ ತನ್ನ ಸೇವೆಯನ್ನು ನಿಲ್ಲಿಸಲಿದ್ದು, ಅದನ್ನು ಬಿಎಸ್ಎನ್ಎಲ್ ಮುಂದುವರೆಸಿಕೊಂಡು ಹೋಗಲಿದೆ ಎನ್ನಲಾಗಿದೆ.

ಮೊಬೈಲ್ ನಂತೆಯೇ ಇರಲಿದೆ:- ಬಿಎಸ್ಎನ್‌ಎಲ್ ಸ್ಯಾಟಿಲೈಟ್ ಫೋನ್ ಬಳಕೆಗೆ ಮೊಬೈಲ್‌ ಫೋನ್‌ ಮಾದರಿಯ ಉಪಕರಣ ದೊರೆಯಲಿದೆ. ಇದಕ್ಕಾಗಿ ದೊಡ್ಡ ಗ್ರಾತದ ಉಪಕರಣ ಬಳಕೆಯ ಅವಶ್ಯಕತೆ ಇರುವುದಿಲ್ಲ.

ಶೀಘ್ರವೇ ಜನ ಸಾಮಾನ್ಯರಿಗೂ ಈ ಸೇವೆ:- ಸದ್ಯ ಭಾರತದಲ್ಲಿ ಸ್ಯಾಟಿಲೈಟ್ ಫೋನ್ ಸೇವೆಯನ್ನು ಪೊಲೀಸ್‌ ವ್ಯವಸ್ಥೆ, ರೈಲ್ವೆ ಇಲಾಖೆ, ಗಡಿ ಭದ್ರತಾ ಪಡೆ ಮತ್ತು ಹಡಗುಗಳಲ್ಲಿ ಮಾತ್ರವೇ ಬಳಸುವ ಅವಕಾಶವನ್ನು ಮಾಡಿಕೊಡಲಾಗಿತ್ತು. ಆದರೆ ಮುಂದೇ ಜನರಿಗೆ ಈ ಸೇವೆ ವಿಸ್ತರಿಸುವ ಯೋಜನೆಯನ್ನು ರೂಪಿಸಲಾಗಿದೆ.

ಆದರೆ ದುಬಾರಿ ಬೆಲೆ:- ಸ್ಯಾಟಿಲೈಟ್ ಫೋನ್ ಪೋನ್‌ನಲ್ಲಿ ಒಂದು ಕರೆ ಮಾಡಬೇಕಾಗಿದರೆ ಪ್ರತಿ ನಿಮಿಷಕ್ಕೆ ರೂ.35 ರಿಂದ ರೂ. 45 ಪಾವತಿಸಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸಿನಿಮಾ

    ಮುಂಬೈನ ರಸ್ತೆ ರಸ್ತೆಗಳಲ್ಲಿ ಕನ್ನಡದ KGF ಹವಾ..!

    ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…