ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ
3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.
4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.
5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.
6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.
7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.
8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.
9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.
10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.
11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.
12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.
13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.
14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.
15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.
ಕೃಪೆ:-upscgk
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಜಾರಿಗೆ ತಂದಾಗಿನಿಂದಲೂ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ದಂಡ ವಿಧಿಸುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೆಲ ದಂಡದ ಮೊತ್ತ 80 ಸಾವಿರ ರೂ. ತಲುಪಿದ್ದು ಇದೆ. ಮೋಟಾರು ವಾಹನ ಕಾಯಿದೆ (ತಿದ್ದುಪಡಿ) 2019, ಜಾರಿಗೆ ಬಂದ ದಿನದಿಂದಲೂ ದೇಶಾದ್ಯಂತ ಸಂಚಾರ ಶಿಸ್ತು ಪಾಲನೆ ಮಾಡದ ಸವಾರರಿಗೆ ಭಾರೀ ಮೊತ್ತದ ದಂಡ ಪೀಕಿಸುತ್ತಿರುವ ಸುದ್ದಿಗಳೇ ಎಲ್ಲೆಲ್ಲೂ. ಇವುಗಳ ನಡುವೆ ಒಡಿಶಾ ರಾಜಧಾನಿ ಭುವನೇಶ್ವರದ…
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.