ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ
3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.
4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.
5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.
6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.
7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.
8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.
9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.
10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.
11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.
12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.
13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.
14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.
15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.
ಕೃಪೆ:-upscgk
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್ಬಿಐ ಜು.1ರಿಂದ ಅನ್ವಯವಾಗುವಂತೆ ಎನ್ಇಎಫ್ಟಿ ಮತ್ತು ಆರ್ಟಿಜಿಎಸ್ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್ನಲ್ಲಿ ಆರ್ಟಿಜಿಎಸ್ ಮತ್ತು ಎನ್ಇಎಫ್ಟಿ ಮೂಲಕ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…