News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

2556

ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

ಇರುವೆ ಬಗೆಗಿನ ಈ 15 ವಿಷಯಗಳು ತಿಳಿದ್ರೆ, ನಮ್ಗೆ ರೋಮಾಂಚನವಾಗ್ದೆ ಇರಲ್ಲ…

  1. ಇರುವೆಗಳು ತಮ್ಮ ಕಟ್ಟುನಿಟ್ಟಾದ ಮತ್ತು ಶಿಸ್ತುಬದ್ಧ ಕುಟುಂಬ ಜೀವನಕ್ಕೆ ಹೆಸರಾಗಿವೆ.


source

2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ

3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.

4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.


source

5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.

6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.

7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.

8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.

9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.

10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.


source

11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.

12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್‌ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.

13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.


source

14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.

15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.

ಕೃಪೆ:-upscgk

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ಸುದ್ದಿ

    ದೇವಸ್ಥಾನದ ಬಳಿ ಭಿಕ್ಷೆ ಬೇಡಿದರೆ ಇಷ್ಟೊಂದು ಹಣ ಇರುತ್ತಾ.?ಬಿಕ್ಷುಕಿ ಬಳಿ ಬ್ಯಾಂಕ್ ಅಕೌಂಟ್, ಕ್ರೆಡಿಟ್ ಕಾರ್ಡ್…!

    ಮಿಳುನಾಡಿನಲ್ಲಿ ನಡೆದ ಘಟನೆ ಬಗ್ಗೆ ಕೇಳಿದರೆ ಎಂಥವರೂ ಶಾಕ್ ಆಗುತ್ತಾರೆ. ಭಿಕ್ಷೆ ಬೇಡುವವರನ್ನು ಕಂಡರೆ ಸಾಮಾನ್ಯವಾಗಿ ಜನರು ಮುಖ ಕಿವುಚುತ್ತಾರೆ. ಕೈಯಲ್ಲಿರುವ ಎರಡು ಮೂರು ರೂಪಾಯಿ ಕೊಟ್ಟು ಮುಂದೆ ಹೋಗುತ್ತಾರೆ. ಹೀಗೆ ಪಡೆದ ಭಿಕ್ಷೆಯ ಹಣವೇ ಇಲ್ಲೊಬ್ಬಮಹಿಳೆಯನ್ನು ಲಕ್ಷಾಧೀಶೆಯನ್ನಾಗಿ ಮಾಡಿದೆ. ಪಾಂಡಿಚೇರಿಯ ದೇವಾಲಯವೊಂದರ ಹೊರಗಡೆ ಭಿಕ್ಷೆ ಬೇಡುತ್ತಿರುವ ವೃದ್ಧೆಯ ಕೈಯಲ್ಲಿ 12 ಸಾವಿರ ರೂ. ಹಾಗೂ ಆಕೆಯ ಬ್ಯಾಂಕ್ ಅಕೌಂಟಿನಲ್ಲಿ ಸುಮಾರು 2 ಲಕ್ಷ ಹಣ ಇರುವುದು ಗುರುವಾರ ಬೆಳಕಿಗೆ ಬಂದಿದೆ. ವೃದ್ಧೆಯನ್ನು ಪಾರ್ವತಮ್ಮ(70)ಎಂದು ಗುರುತಿಸಲಾಗಿದೆ. ಪ್ರತಿ…