ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ
3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.
4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.
5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.
6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.
7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.
8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.
9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.
10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.
11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.
12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.
13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.
14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.
15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.
ಕೃಪೆ:-upscgk
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…