News

ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
ಸುದ್ದಿ

ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

2537

ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

ಇರುವೆ ಬಗೆಗಿನ ಈ 15 ವಿಷಯಗಳು ತಿಳಿದ್ರೆ, ನಮ್ಗೆ ರೋಮಾಂಚನವಾಗ್ದೆ ಇರಲ್ಲ…

  1. ಇರುವೆಗಳು ತಮ್ಮ ಕಟ್ಟುನಿಟ್ಟಾದ ಮತ್ತು ಶಿಸ್ತುಬದ್ಧ ಕುಟುಂಬ ಜೀವನಕ್ಕೆ ಹೆಸರಾಗಿವೆ.


source

2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ

3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.

4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.


source

5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.

6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.

7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.

8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.

9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.

10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.


source

11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.

12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್‌ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.

13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.


source

14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.

15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.

ಕೃಪೆ:-upscgk

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೆಂಡತಿಯ ಹತ್ತಿರ 20 ಸಾವಿರ ಸಾಲ ಪಡೆದ ಪತಿ, 28.45 ಕೋ.ರೂ ಗೆದ್ದ…!

    ತೆಲಂಗಾಣ: ಅದೃಷ್ಟ ಯಾವತ್ತೂ ಬೇಕಾದರೂ ಖುಲಾಯಿಸಬಹುದು ಎಂಬ ಮಾತಿದೆ. ಉದ್ಯೋಗ ಹುಡುಕಿಕೊಂಡು ಹೈದರಾಬಾದ್ನ ವ್ಯಕ್ತಿಯೊಬ್ಬ ದುಬೈ ವಿಮಾನ ಹತ್ತಿದ್ದರು. ಆದರೆ ಉದ್ಯೋಗ “ಅದೃಷ್ಟವಶಾತ್’ ಕೈ ಕೊಟ್ಟಿತ್ತು. ಹಾಗಂತ ಅವನು ಬರೀ ಕೈಯಲ್ಲಿ ಬಂದಿಲ್ಲ. ಬರುವಾಗ ಅದೂ ಹೆಂಡತಿ ಕೈಯಿಂದ ಸಾಲ ಪಡೆದು, ಅದೃಷ್ಟ ಚೀಟಿ “ರಾಫೆಲ್’ ಅನ್ನು ಖರೀದಿಸಿದ್ದರು. ಆದರೆ ಅವರ ಅದೃಷ್ಟ ‘ರಾಫೆಲ್ ಚೀಟಿಯಲ್ಲೇ ಭದ್ರವಾಗಿತ್ತು. ಹೌದು ತೆಲಂಗಾಣದ ನಿಜಾಮಬಾದ್‌ನ ಜಾಕ್ರನ್ಪಳ್ಳಿಗ್ರಾಮಕ್ಕೆ ಸೇರಿದ ವಿಲಾಸ್‌ ರಿಕ್ಕಳ ಎಂಬವರು ಈ ಅದೃಷ್ಟದ ನಾಯಕ. ಮೂಲತಃ ಕೃಷಿ ಕುಟುಂಬ. ಕೆಲವು…

  • KOLAR NEWS PAPER

    ಕೆಎಂಎಫ್ ನಂದಿನಿ ಅಮುಲ್ ಜತೆ ವಿಲೀನದ ಪ್ರಸ್ತಾಪಕ್ಕೆ ಖಂಡನೆ

    ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಗ್ಯಾಜೆಟ್

    ನಿಮ್ಮ ಆಂಡ್ರಾಯ್ಡ್ ಮೊಬೈಲ್ ನ ಈ 8 ಸೀಕ್ರೆಟ್ ಆಪ್ಷನ್ಸ್ ಗಳು ನಿಮ್ಗೆ ಗೊತ್ತಿಲ್ಲಾ!ಗೊತ್ತಾಗ್ಬೇಕಂದ್ರೆ ಈ ಲೇಖನಿ ಓದಿ…

    ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.

  • ಸುದ್ದಿ

    ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

    ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…

  • inspirational, ಸುದ್ದಿ

    ಗಾಂಧಿಜಿ ಪ್ರತಿಮೆಯ ಮುಂದೆ ಧರಣಿಗೆ ಕುಳಿತ ಕಾಂಗ್ರೆಸ್ ಶಾಸಕರು….!

    ಕರ್ನಾಟಕದ ಕಾಂಗ್ರೆಸ್ ನಾಯಕರು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನೀತಿ ಖಂಡಿಸಿ ಧರಣಿ ಆರಂಭಿಸಿದ್ದಾರೆ. ರಾಜೀನಾಮೆ ನೀಡಿರುವ ಕಾಂಗ್ರೆಸ್‌ನ 8 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಲಾಗಿದೆ. ಮಂಗಳವಾರ ವಿಧಾನಸೌಧ, ವಿಕಾಸಸೌಧ ನಡುವಿ ಗಾಂಧಿ ಪ್ರತಿಮೆ ಮುಂದೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಕರ್ನಾಟಕದ ಮೈತ್ರಿ ಸರ್ಕಾರವನ್ನು ಉರುಳಿಸಲು ‌ಮೋದಿ ಸಂಚು ಮಾಡಿದ್ದಾರೆ. ಮೋದಿ, ಅಮಿತ್ ಶಾ ನೇರವಾಗಿ ಆಪರೇಷನ್ ಕಮಲ ನಡೆಸಿದ್ದಾರೆ….