ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.
2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ
3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.
4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.
5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.
6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.
7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.
8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.
9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.
10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.
11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.
12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.
13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.
14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.
15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.
ಕೃಪೆ:-upscgk
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…