News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಇರುವೆ ಬಗೆಗಿನ ಈ 15 ವಿಷಯಗಳು ನಮ್ಮನ್ನ ರೋಮಾಂಚನಗೊಳಿಸುತ್ತೆ..!

2552

ಇರುವೆ ಎಲ್ಲರಿಗೂ ಚಿರಪರಿಚಿತ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಮಕ್ಕಳಿಗೆ ಸಂಭ್ರಮ. ಭೂಮಿಯಲ್ಲಿ ಬರಿಗಣ್ಣಿಗೆ ಕಾಣುವ ಅತ್ಯಂತ ಚಿಕ್ಕ ಜೀವಿಯೆಂದರೆ ಇರುವೆ. ಹಾಗೆಂದ ಮಾತ್ರಕ್ಕೆ ಇದನ್ನು ಅಲ್ಪಜೀವಿಯೆಂದು ಭಾವಿಸುವಂತಿಲ್ಲ. ಭೂ- ನೆಲದಲ್ಲಿ ಸರ್ವಾಂತರ್ಯಾಮಿ ಆಗಿರುವ ಇರುವೆಗಳ ಪ್ರಪಂಚಕ್ಕೆ ಇಣುಕಿದರೆ ಅಚ್ಚರಿಗಳು ಎದುರಾಗುತ್ತವೆ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗೊದ್ದ, ಚೊಂಜಿಗ, ಕಟ್ರ ಎಂದೆಲ್ಲ ಕರೆಯಲ್ಪಟ್ಟಿರುವ ಇರುವೆಗಳು ವಿವಿಧ ಗಾತ್ರ, ಬಣ್ಣಗಳಲ್ಲಿವೆ.

ಇರುವೆ ಬಗೆಗಿನ ಈ 15 ವಿಷಯಗಳು ತಿಳಿದ್ರೆ, ನಮ್ಗೆ ರೋಮಾಂಚನವಾಗ್ದೆ ಇರಲ್ಲ…

  1. ಇರುವೆಗಳು ತಮ್ಮ ಕಟ್ಟುನಿಟ್ಟಾದ ಮತ್ತು ಶಿಸ್ತುಬದ್ಧ ಕುಟುಂಬ ಜೀವನಕ್ಕೆ ಹೆಸರಾಗಿವೆ.


source

2. ಇರುವೆಗಳು ತಮ್ಮ ಶಾರೀರಿಕ ಗುಣಗಳಿಗನುಗುಣವಾಗಿ ಹೆಣ್ಣಿರುವೆಗಳು, ಗಂಡಿರುವೆಗಳು ಮತ್ತು ರಾಣಿ ಇರುವೆಗಳೆಂದು ವಿಭಾಗಿಸಲ್ಪಡುತ್ತವೆ

3. ಇರುವೆಗಳು ವಿಶ್ವದ ಬಹುತೇಕ ಎಲ್ಲಾ ಭೂಪ್ರದೇಶಗಳಲ್ಲೂ ಕಂಡುಬರುತ್ತವೆ.

4. ಒಂದು ಅಂದಾಜಿನ ಪ್ರಕಾರ ಜಗತ್ತಿನ ಎಲ್ಲಾ ಇರುವೆಗಳ ಒಟ್ಟು ತೂಕವು ಭೂಮಿಯ ನೆಲದ ಮೇಲಿನ ಪ್ರಾಣಿಗಳ ಒಟ್ಟಾರೆ ತೂಕದ 15% ದಿಂದ 25% ರಷ್ಟಾಗುವುದು.


source

5. ಇರುವೆಗಳಲ್ಲಿ 12,000 ಕ್ಕೂ ಅಧಿಕ ತಳಿಗಳಿವೆ.

6. ಥೊರಾಕ್ಸ್ ಎಂದು ಕರೆಯಲ್ಪಡುವ ಇರುವೆಯ ಮುಂಡದಲ್ಲಿ ಆರು ಕಾಲುಗಳಿರುತ್ತವೆ. ಪ್ರತಿ ಕಾಲಿನ ತುದಿಯಲ್ಲಿ ಕೊಕ್ಕೆಯಂತೆ ಬಾಗಿರುವ ಉಗುರಿನ ರಚನೆಯಿದ್ದು ಇದು ಇರುವೆಗೆ ಹತ್ತುವಲ್ಲಿ ಮತ್ತು ವಸ್ತುಗಳಿಗೆ ಜೋತುಬೀಳುವುದಕ್ಕೆ ನೆರವಾಗುತ್ತದೆ.

7. ರಾಣಿ ಇರುವೆಯು ೩೦ ವರ್ಷಗಳವರೆಗೆ ಜೀವಿಸಬಲ್ಲುದು. ಕೆಲಸಗಾರ ಇರುವೆಗಳ ಆಯುಷ್ಯ ೧ ರಿಂದ ೩ ವರ್ಷಗಳು. ಆದರೆ ಗಂಡಿರುವೆಗಳು ಕೆಲವೇ ವಾರಗಳವರೆಗೆ ಜೀವಿಸಿರುವುವು.

8. ಇರುವೆಗಳು ಕಚ್ಚುವುದರ ಮೂಲಕ ಮತ್ತು (ಕೆಲ ತಳಿಗಳಲ್ಲಿ) ಕೊಂಡಿಯಿಂದ ಕುಟುಕುವುದರ ಮೂಲಕ ಆಕ್ರಮಣ ಮತ್ತು ಸ್ವರಕ್ಷಣೆ ಎರಡನ್ನೂ ಸಾಧಿಸುತ್ತವೆ.

9. ದಕ್ಷಿಣ ಅಮೆರಿಕಾದ ಬುಲೆಟ್ ಇರುವೆಗಳ ಕುಟುಕು ಸಮಸ್ತ ಕೀಟಜಗತ್ತಿನಲ್ಲಿಯೇ ಅತಿ ತೀಕ್ಷ್ಣವಾದುದು.

10. ಆಸ್ಟ್ರೇಲಿಯಾದ ಜ್ಯಾಕ್ ಜಂಪರ್ ಇರುವೆಗಳ ಕುಟುಕುವಿಕೆಯಿಂದಾಗಿ ಕೆಲ ಮಾನವರು ಸಾವನ್ನಪಿದ್ದರೆ ಮತ್ತು ಪ್ರತಿ ವರ್ಷ ಅನೇಕ ಜನ ಆಸ್ಪತ್ರೆಗೆ ದಾಖಲಾಗುತ್ತಾರೆ.


source

11. ಮಾನವನನ್ನು ಹೊರತುಪಡಿಸಿದರೆ ಇರುವೆಯು ಆಹಾರಕ್ಕಾಗಿ ವ್ಯವಸಾಯದಲ್ಲಿ ತೊಡಗುವ ಏಕೈಕ ಪ್ರಾಣಿಯಾಗಿದೆ.

12. ಎಲ್ಲಾ ತರಹದ ಇರುವೆಗಳೂ ಸಂಘಜೀವಿಗಳಲ್ಲ. ಆಸ್ಟ್ರೇಲಿಯಾದ ಬುಲ್‌ಡಾಗ್ ಇರುವೆಯು ಅತಿ ಪ್ರಾಚೀನ ತಳಿಯಾಗಿದ್ದು ಗಾತ್ರದಲ್ಲಿ ಬಲು ದೊಡ್ಡದು. ಈ ಇರುವೆಯು ಒಂಟಿಯಾಗಿಯೇ ಬೇಟೆಯಾಡುತ್ತದೆ.

13. ಆಫ್ರಿಕಾದ ಸೈಫು ಇರುವೆಯು ಹೊಟ್ಟೆಬಾಕತನಕ್ಕೆ ಹೆಸರಾದುದು. ಇವುಗಳ ಸೈನ್ಯ ಹೊಲ ತೋಟಗಳಿಗೆ ನುಗ್ಗಿ ಅಲ್ಲಿನ ಎಲ್ಲಾ ಕೀಟಗಳನ್ನೂ ಭಕ್ಷಿಸಿ ಬಲು ಬೇಗ ಮುಂದೆ ಹೊರಟುಬಿಡುವುದರಿಂದ ಆಫ್ರಿಕಾದ ಮಸಾಯ್ ಜನಾಂಗದವರು ಇವನ್ನು ಬಲು ಗೌರವದಿಂದ ಕಾಣುವರು.


source

14. ಇರುವೆಗಳ ಜೀವನ ಕ್ರಮ ವಿಸ್ಮಯಕರಆ ಕಾರಣದಿಂದಲೇ ‘ಇರುವೆ ವಿಜ್ಞಾನ’ (ಮರ್ಮೆಕಾಲಜೀ) ಎಂಬೊಂದು ವಿಶಿಷ್ಟ ವಿಜ್ಞಾನ ಶಾಖೆಯೇ ಅಸ್ತಿತ್ವದಲ್ಲಿದೆ.

15. ಇರುವೆಗಳ ಶರೀರ ಶಕ್ತಿ ಅಸಾಮಾನ್ಯ. ಭಾರ ಎಳೆಯುವ, ಎತ್ತುವ ಸಾಮರ್ಥ್ಯ ಅವಕ್ಕೆ ವಿಪರೀತ. ತಮ್ಮ ಶರೀರಕ್ಕಿಂತ ಬಹುದೊಡ್ಡ ಗಾತ್ರದ ತಮ್ಮ ಶರೀರದ ಐವತ್ತು ಪಟ್ಟು ತೂಕದ ವಸ್ತುಗಳನ್ನು ಅವು ಸಲೀಸಾಗಿ, ವೇಗವಾಗಿ ಸಾಗಿಸುತ್ತವೆ. ತಮ್ಮ ದೇಹದ ನೂರಾರು ಮಡಿ ತೂಕದ ವಸ್ತುಗಳನ್ನು ಹೊರಬಲ್ಲ ಪ್ರಭೇದಗಳೂ ಇವೆ.

ಕೃಪೆ:-upscgk

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ