ಆಧ್ಯಾತ್ಮ, ದೇವರು, ದೇವರು-ಧರ್ಮ

ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

1512

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು…

ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ…

ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ
ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ.

ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ ವೇಷ ತಳೆದು ರಾಮ ಲಕ್ಷ್ಮಣರನ್ನು ಅಪಹರಿಸಿ ಪಾತಾಳಲೋಕಕ್ಕೆ ಕರೆದೊಯ್ಯುತ್ತಾನೆ.

ಹನುಮಂತನು ಅವರನ್ನು ಹುಡುಕಿಕೊಂಡು ಪಾತಾಳಲೋಕಕ್ಕೆ ಹೋದನು.ಅಲ್ಲಿ ಅವನಿಗೆ ಐದು ದಿಕ್ಕುಗಳಲ್ಲಿ ಇಟ್ಟಿರುವ ಐದು ದೀಪಗಳು ಗೋಚರಿಸಿದವು.ಅಹಿರಾವಣನ ಪ್ರಾಣವು ಆ ಐದು ದೀಪಗಳಲ್ಲಿ ಇದ್ದು ಐದು ದೀಪಗಳನ್ನು ಒಂದೇ ಸಾರಿ ಆರಿಸಿದಾಗ ಮಾತ್ರ ಅವನ‌ಪ್ರಾಣ ಹೋಗುವುದೆಂದು ತಿಳಿಯಿತು.

ಅಹಿರಾವಣನ್ನು ಸಂಹರಿಸಲು ಪಂಚಮುಖಿ ಅವತಾರ ತಾಳಿದನು .ಐದು ಮುಖಗಳಲ್ಲಿ ಉಳಿದ ನಾಲ್ಕು ಮುಖಗಳು ಯಾವುವೆಂದರೆ.ಹಯಗ್ರೀವ, ನರಸಿಂಹ. ಗರುಡ ಹಾಗೂ ವರಾಹ. ತನ್ನ ಐದು ಮುಖಗಳಿಂದ ಒಟ್ಟಿಗೆ ಐದು ದಿಕ್ಕುಗಳಿಗೂ ಗಾಳಿಯನ್ನು ಊದಿ ಅಲ್ಲಿದ್ದ ಐದು ದೀಪಗಳನ್ನು ಒಟ್ಟಿಗೆ ಆರಿಸಿದನು, ಅಹಿರಾವಣನ ಸಂಹಾರ ಮಾಡಿದನು.

ಕಂಬರಾಮಾಯಣದಲ್ಲಿ ಸುಂದರವಾಗಿ ಹೇಳಲಾಗಿದೆ, ಪಂಚಭೂತಗಳಲ್ಲಿ ಒಬ್ಬನಾದ ವಾಯುವಿನ ಪುತ್ರ ಹನುಮಂತ,ಪಂಚಭೂತಗಳಲ್ಲಿ ಒಂದಾದ ಭೂಮಿಯ ಮಗಳು ಸೀತೆಯನ್ನು ಭೇಟಿಯಾಗಲು, ಪಂಚಭೂತಗಳಲ್ಲಿ ಒಂದಾದ ಆಕಾಶದ ಮೂಲಕ ಪಂಚಭೂತಗಳಲ್ಲಿ ಒಂದಾದ ಸಮುದ್ರವನ್ನು,ದಾಟಿ ಪಂಚಭೂತಗಳಲ್ಲಿ ಒಂದಾದ ಅಗ್ನಿಯ ಮೂಲಕ ಲಂಕೆಯ ದಹನ ಮಾಡಿದನು.

ಇಲ್ಲಿ ಓದಿ:62ಅಡಿ ಉದ್ದದ ಹನುಮಂತನ ಬೃಹತ್ ಏಕಾಶಿಲಾವಿಗ್ರಹ ಬಂದಿದ್ದು ಎಲ್ಲಿಂದ.?ಶಿಲ್ಪಿ ಯಾರು.?ಆ ಶಿಲೆ ಸಿಕ್ಕಿದ್ದು ಹೇಗೆ.!ಇಲ್ಲಿದೆ ಸಂಪೂರ್ಣ ಮಾಹಿತಿ…

ಈ ಪಂಚಮುಖಿ ಆಂಜನೇಯನ ಐದು ಮುಖಗಳು ಮತ್ತು ಅವುಗಳ ವಿಶೇಷತೆ ಏನು ಅನ್ನೋದನ್ನ ಮುಂದೆ ನೋಡಿ…

ಹನುಮಂತ:

ಇವನ ಮುಖವು ಪೂರ್ವದೆಡೆಗೆ ಇರುತ್ತದೆ. ಮನಸ್ಸಿನಲ್ಲಿ ಸಾತ್ತ್ವಿಕತೆ ಮತ್ತು ಪವಿತ್ರತೆಯನ್ನು ನಿರ್ಮಿಸುವುದರೊಂದಿಗೆ ಯಶಸ್ಸನ್ನು ನೀಡುವುದೇ ಈ ಮುಖದ ಕಾರ್ಯವಾಗಿದೆ.

ನರಸಿಂಹ:

ಈ ಮುಖವು ದಕ್ಷಿಣದತ್ತ ಇದ್ದು ನಿರ್ಭಯತೆ ಮತ್ತು ಸಂಕಟಗಳನ್ನು ಎದುರಿಸುವ ಪ್ರಬಲ ಶಕ್ತಿಯನ್ನು ಸೂಚಿಸುತ್ತದೆ. ಭೂತಪ್ರೇತ ಸಂಬಂಧಬಾಧೆ ಮತ್ತು ಶತ್ರು ಇವುಗಳ ನಿವಾರಣೆ ಮಾಡುವುದು, ಈ ಮುಖದ ಕಾರ್ಯವಾಗಿದೆ.

ಗರುಡ:

ಇದು ಪಶ್ಚಿಮದಿಕ್ಕಿಗಿದ್ದು ಜಾದುಮಾಟ, ಮಂತ್ರ-ತಂತ್ರ, ಪಿಶಾಚಬಾಧೆ, ಭೂತಬಾಧೆ, ವಿಷಬಾಧೆ ಇವುಗಳಿಂದ ಸಂರಕ್ಷಣೆ ಮಾಡುತ್ತದೆ. ಕೋಟಿ ಸೂರ್ಯಗಳ ತೇಜದಂತೆ ಈ ಮುಖದ ತೇಜವಿದೆ.

ಇಲ್ಲಿ ಓದಿ:ಶನಿ ದೇವರ ಕಾಟದಿಂದ ಪಾರಾಗಲು ಅಂಜನೇಯ ಸ್ವಾಮಿಯನ್ನು ಪೂಜಿಸುವುದು ಹೇಗೆ..?

ವರಾಹ:

ಇದು ಉತ್ತರದಿಕ್ಕಿನಲ್ಲಿದ್ದು ಇದರ ಕಾರ್ಯವು ಮುಖ್ಯವಾಗಿ ಪ್ರಗತಿ, ಧನಸಂಪತ್ತು ಮತ್ತು ಸುಖೋಪಭೋಗವನ್ನು ನೀಡುವುದು, ಪುತ್ರಪೌತ್ರಾದಿಗಳ ವೃದ್ಧಿ ಮಾಡುವುದಿರುತ್ತದೆ. ಲಕ್ಷ್ಮಣನಿಗೆ ಶಕ್ತಿ ಬೇಕಾಗಿದ್ದಾಗ ಈ ಮುಖವು ಅವನಿಗೆ ಜೀವನದಾನ ನೀಡಿತು ಮತ್ತು ಲಂಕೆಯನ್ನು ದಹಿಸಿತ್ತು.

ಹಯಗ್ರೀವ:

ಈ ಮುಖವು ಆಕಾಶದೆಡೆಗೆ ಇರುತ್ತದೆ. ಸ್ವಲ್ಪಮಟ್ಟಿಗೆ ಡೊಂಕಾದ ಅವಸ್ಥೆಯಲ್ಲಿರುವ ಈ ಮುಖವು ಹನುಮಾನನ ಮುಖದ ಮೇಲಿನ ಬದಿಗೆ ತೋರಿಸಲಾಗಿದೆ. ಈ ಮುಖದ ಸಂಬಂಧವು ಜ್ಞಾನ ಮತ್ತು ಸಂತತಿ ಈ ಎರಡು ಸಂಗತಿಗಳೊಂದಿಗೆ ಬರುತ್ತದೆ.

ಐದು ದೀಪಗಳಲ್ಲಿ ಐದನೇ ಅಸುರಾಸುರ ರಾಕ್ಷಸ, ಪಂಚಮುಖಿ ಮಾರುತಿಯ ಪಾದದ ಕೆಳಗಡೆಯಲ್ಲಿರುವ ರಾಕ್ಷಸನಾಗಿದ್ದಾನೆ. ಪಂಚಮುಖಿ ಮಾರುತಿಯು ಒಂದರ್ಥದಲ್ಲಿ ಮಾನವೀ ಜೀವನದ ಎಲ್ಲ ಅಂಗಗಳ ವಿಕಾಸ ಮಾಡಿಸಿ ತರುವುದಕ್ಕಾಗಿ ಮಹತ್ವ ಪೂರ್ಣ ಸಾಧನವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…

  • ಸಿನಿಮಾ, ಸುದ್ದಿ

    ಮಗು ಮುಖ ನೋಡುವ ಮುನ್ನವೇ ಎಲ್ಲರನ್ನು ಅಗಲಿದ ಚಿರಂಜೀವಿ ಸರ್ಜಾ! ನಿಜಕ್ಕೂ ಶಾಕ್

    ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…

  • ಸಿನಿಮಾ

    ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸ್ಸಿದ ಭಾರತೀಯಾ ಸಿನಿಮಾ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಬಾಲಿವುಡ್‌ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್‌ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್‌ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಸಿನಿಮಾ

    “ಆಂಧ್ರ”ದಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” !!!

    ನಟ “ಸುದೀಪ್‌”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್‌. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್‌ರವರು ಟ್ವಿಟ್ಟರ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…