News

ವಿಸ್ಮಯ ಜಗತ್ತು

ಇವರು ನಮ್ಮ ಇಂಡಿಯನ್ ರಿಯಲ್ ಸ್ಪೈಡರ್ ಮ್ಯಾನ್!ಅಲಿಯಾಸ್ ಕೋತಿ ರಾಜ್.ಇವರ ಸಾಹಸದ ಬಗ್ಗೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ!

974

ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.

ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.

 

ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ  ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.

ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.

ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.

ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.

ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್,  ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್‌ಮ್ಯಾನ್… ಸ್ಪೈಡರ್‌ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.

ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.

ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-

ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..

ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….

 

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ

  • ದೇವರು-ಧರ್ಮ

    ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಆರೋಗ್ಯ

    ಒಂದು ತುಂಡು ಬೆಲ್ಲ ತಿಂದ್ರೆ ಸಾಕು ಈ ಎಲ್ಲಾ ಕಾಯಿಲೆಗಳು ಮಂಗಮಾಯ !

    ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…