ರಾಜಕೀಯ

ಇವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ.ಇವರ ಬಗ್ಗೆ ನಿಮ್ಗೆ ತಿಳಿಯದ ಎಷ್ಟೋ ಸತ್ಯಗಳಿವೆ..!ತಿಳಿಯಲು ಈ ಲೇಖನ ಓದಿ…

952

ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

ಜೆಡಿಎಸ್ ಅಧ್ಯಕ್ಷ  ಮಣ್ಣಿನ ಮಗ ಹೆಚ್.ಡಿ.ದೇವೇಗೌಡರು 11-12-1994ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಮುಖ್ಯಮಂತ್ರಿಯಾಗಿ ಇಂದಿಗೆ 23 ವರ್ಷಗಳಾಗಿವೆ. ರಾಜಕೀಯದಲ್ಲಿ ದೇವೇಗೌಡರ ಬಗ್ಗೆ ತಿಳಿಯಬೇಕಾದ್ದು ತುಂಬಾ ಇದೆ.

“ಮಣ್ಣಿನ ಮಗ ಹೆಚ್.ಡಿ.ದೇವೇಗೌಡರ” ಬಗ್ಗೆ ಮೊಗೆದಷ್ಟು ಮುಗಿಯದ ಇತಿಹಾಸದ ಪುಟ..!

1.ಎಂದಿಗೂ ಸಹ ದುಷ್ಚಟಗಳ ದಾಸರಾಗಲಿಲ್ಲ………ವೈಯಕ್ತಿಕವಾಗಿಯೂ ಜೀವನದಲ್ಲಿ ಎಲ್ಲೂ ಸಹ ಒಂದೇ ಒಂದು ಕಪ್ಪುಚುಕ್ಕೆ ಮೂಡಿಸಿಕೊಂಡವರಲ್ಲ………ವೈಯಕ್ತಿಕ ಜೀವನ ಎಂದು ಒಂದು ಕ್ಷಣವೂ ಬಿಡುವು ಮಾಡಿಕೊಂಡು ಜೀವನದಲ್ಲಿ ಮನೆಯಲ್ಲಿ ಸುಮ್ಮನೆ ಕುಳಿತವರಲ್ಲ “ಅಪ್ಪಟ ರೈತರ ಮಗ ದೇವೇಗೌಡರು”…………

2. 24/7 ರಾಜಕಾರಣಿ ಯಾರಾದರೂ ಈ ಭೂಮಿ ಮೇಲಿದ್ದರೆ ನಾಯಕರ ತಯಾರು ಮಾಡುವ ಕಾರ್ಖಾನೆಯಾಗಿ ಎಲ್ಲ ಜನಾಂಗದವರನ್ನು ಮೇಲೆ ತಂದು ಅಧಿಕಾರ ನೀಡಿ ಆದರ್ಶ ಮೆರೆದ ಮಾಜಿ ಪ್ರಧಾನಿಯೊಬ್ಬರು ಸಕ್ರಿಯವಾಗಿ ಕಾರ್ಯಚಟುವಟಿಕೆಯಲ್ಲಿ ನಿರತರಾಗಿದ್ದರೆ ಅದು “ಮಣ್ಣಿನ ಮಗ ದೇವೇಗೌಡರು”……………..

3.ಶುದ್ದಹಸ್ತರಾಗಿ ಭ್ರಷ್ಟಾಚಾರದ ಲವಲೇಶವನ್ನೂ ತಮಗೆ ತಾಗಿಸಿಕೊಳ್ಳದೆ ರಾಜಕೀಯಕ್ಕೆ ಕಾಲಿಟ್ಟ ದಿನದಿಂದಲೂ ಸ್ವಚ್ಛವಾಗಿ ಜನಸೇವೆ ಮಾಡಿ ಜಾತಿ ಧರ್ಮ ಸೀಮೆ ಕುಲ ಭಾಷೆ ಪ್ರಾಂತ್ಯ ಎಂದು ಭೇಧ ಭಾವ ಮಾಡದೆ ಪ್ರಪಂಚಕ್ಕೆ ಮಾದರಿಯಾದ “ಶ್ರಮಜೀವಿ ದೇವೇಗೌಡರು”………….

4.ವಿಧಾನಸೌಧದ ದಾಖಲೆಗಳು ಹೇಳುವಂತೆ ಜನರಿಂದ ನೇರವಾಗಿ ಆರಿಸಿ ಬಂದು ಮುಖ್ಯಮಂತ್ರಿಯಾಗಿ ಪ್ರಮಾಣಿಕವಾಗಿ ಪಾರದರ್ಶಕ ಆಡಳಿತ ನೀಡಿ ಎಲ್ಲ ಜನಾಂಗಗಳನ್ನು ಸಮನಾಗಿ ಕಂಡು ಸಮಾಜ ಕಲ್ಯಾಣಕ್ಕಾಗಿ ಅತ್ಯವಶ್ಯಕವಾದ ಮೀಸಲಾತಿಗಳ ತಂದು ಜನಸೇವೆ ಮಾಡಿದ ಏಕೈಕ “ಮುಖ್ಯಮಂತ್ರಿ ದೇವೇಗೌಡರು”……………

5.ಸೋತಾಗಲೆಲ್ಲ ಧೃತಿಗೆಡದೆ ಮತ್ತೆ ಮತ್ತೆ ಕಳೆದುಕೊಂಡಲ್ಲೆ ಹುಡುಕಬೇಕು ಎನ್ನುವ ಹಾಗೆ ಮತ್ತೆ ಮತ್ತೆ ಮೇಲೆದ್ದು ಬಂದು ಪಾರುಪತ್ಯ ಸಾಧಿಸಿದ ಸಾಮಾನ್ಯರಲ್ಲಿ ಅಸಾಮಾನ್ಯ ಜನನಾಯಕರಿದ್ದರೆ ಪ್ರಧಾನಿಯಾಗಿ ಕನ್ನಡಮ್ಮನ ಬಾವುಟ ಕೆಂಪುಕೋಟೆಯ ಮೇಲೆ ಹಾರಿಸಿದ ಏಕೈಕ “ಕನ್ನಡಿಗ ದೇವೇಗೌಡರು”………………….

6.ತಮ್ಮ ಇಳಿವಯಸ್ಸಿನಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸಿ ತಪಸ್ಸಿನಂತೆ ಯೋಗಾಭ್ಯಾಸ ಕಲಿತು ಪ್ರವೀಣ ಪರಿಣಿತರಾಗಿದ್ದರೆ ಯುವಕರು ನಾಚುವಂತೆ ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವ ಜನಸಾಮಾನ್ಯರ ವಿಚಾರದಲ್ಲಿ ರೈತರ ವಿಷಯದಲ್ಲಿ ಅನ್ಯಾಯವಾದಾಗ ಮನೆಯಲ್ಲಿ ಕೂರದೆ ಬೀದಿಗಿಳಿದು ಹೋರಾಟ ಮಾಡಿ ನ್ಯಾಯ ಕೊಡಿಸುವ “ದಣಿವರೆಯದ ಧಣಿ ದೇವೇಗೌಡರು”……………..

7.ಕರ್ನಾಟಕದ ಪ್ರತಿ ಹಳ್ಳಿಹಳ್ಳಿಯ ಹೋಬಳಿಗಳ ತಾಲ್ಲೂಕು ಜಿಲ್ಲೆ ಪ್ರಾಂತ್ಯ ಸಹಿತ ರಾಜಕೀಯ ಅಂಕಿಅಂಶಗಳ ಜನಸಂಖ್ಯೆ ತಿಳಿದುಕೊಂಡು ಅದಕ್ಕೆ ಅನುಗುಣವಾಗಿ ರಾಜಕೀಯ ಚಿಂತನೆಗಳನ್ನು ಮಾಡುವ ಕಾರ್ಯಕ್ರಮ ರೂಪಿಸಿ ಏಳಿಗೆಗೆ ಕಾರಣವಾಗುವ ಮಾನವ “ಗಣಕಯಂತ್ರ ದೇವೇಗೌಡರು”………………..

8.ಸುದೀರ್ಘ 55 ವರ್ಷಗಳು ನಿರಂತರವಾಗಿ ಜನರೊಂದಿಗೆ ಒಡನಾಟ ಇಟ್ಟುಕೊಂಡು ಅಧಿಕಾರ ಇರಲಿ ಇಲ್ಲದಿರಲಿ ಸುಮ್ಮನಿರದೆ ಕಷ್ಟಗಳ ಕೇಳಿಸಿಕೊಳ್ಳುವ ಪ್ರಯತ್ನ ಪಟ್ಟು ಬಿಡದೆ ಕೈಲಾಗುವಷ್ಟು ಕಷ್ಟ ಪರಿಹರಿಸಿ ಪರಿಹಾರ ಕೊಡಿಸಿ ಕಣ್ಣೀರು ಒರೆಸಿಯೆ ತೀರುವ “ಜನಸಾಮಾನ್ಯರ ಒಡನಾಡಿ ದೇವೇಗೌಡರು”…………..

9.ಈ ಕ್ಷಣಕ್ಕೂ ಸಹ ಯಾರೇ ಭೇಟಿ ಮಾಡಲು ಬಂದರೂ ತುಂಬಾ ಸುಲಭವಾಗಿ ಲಭ್ಯರಾಗಿ ಬರಮಾಡಿಕೊಂಡು ತದೇಕಚಿತ್ತದಿಂದ ಗಮನಿಸಿ ಸೌಜನ್ಯದಿಂದ ಮಾತನಾಡಿಸಿ ತಾಳ್ಮೆಯಿಂದ ಎಲ್ಲವನ್ನೂ ಆಲಿಸುವ ತಮ್ಮ ಅತ್ಯಮೂಲ್ಯವಾದ ಸಮಯವನ್ನು ಜನರಿಗಾಗಿ ಮಾತ್ರ ಮೀಸಲಿಡುವ “ಮುತ್ಸದಿ ದೇವೇಗೌಡರು”…………….

10.ಎದುರಾಳಿಗಳು ವಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ಕೊಡದೆ ಕೆಸರೆರಚಾಟಕ್ಕಿಳಿಯದೆ ಛಲದಿಂದ ಹಠ ಬಿಡದೆ ಹಿಡಿದ ಕೆಲಸ ಸಾಧಿಸಿ ತೋರಿಸಿ ತಮ್ಮ ಶ್ರಮದಿಂದ ಕೆಲಸ ಯಶಸ್ವಿಗೊಳಿಸಿ ಟೀಕಾಕಾರರ ಬಾಯಿ ಮುಚ್ಚಿಸುವ “ಅಭಿವೃದ್ಧಿ ಹರಿಕಾರ ದೇವೇಗೌಡರು”………………

ಇಷ್ಟೆಲ್ಲಾ ಸಾಧನೆಗಳು ಕೇವಲ ತೃಣಮಾತ್ರವಷ್ಟೆ……. “ದೇವೇಗೌಡರು ಒಂದು ಅಪೂರ್ವ ಗ್ರಂಥ”………..”ಮೊಗೆಯುತ್ತ ಹೋದಷ್ಟು ಮತ್ತೆ ಮತ್ತೆ ಉಕ್ಕುವ ಕುತೂಹಲಕ್ಕೆ ಕಾರಣವಾಗುವ ಮುಗಿಯದ ನೀರಿನ ಸೆಲೆಯಂತೆ”………….
“ಇಂದಿಗೆ ಸರಿಯಾಗಿ ದೇವೇಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ 23 ವರ್ಷಗಳು 11/12/1994″…………….ಈ ಶುಭ ಸಂದರ್ಭದಲ್ಲಿ “ಹಳ್ಳಿ ಹುಡುಗರು”ಕಡೆಯಿಂದ  ಕಿರುಪರಿಚಯ ನೀಡುವ ಒಂದು ಸಣ್ಣ ಪ್ರಯತ್ನ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಹಣ

    ಸ್ಲಮ್ ಮಕ್ಕಳಿಗೆ ಆದ ಅವಮಾನ…! ತಿಳಿಯಲು ಈ ಲೇಖನ ಓದಿ…

    ಮೆರಿನಾ ಗಾರ್ಡನ್‌ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್‌ಗೆ ಸ್ಲಮ್‌ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್‌ ಕಂಪ್ಲೇಂಟ್‌ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • ಸುದ್ದಿ

    ರಕ್ಷಿತ್ ಶೆಟ್ಟಿ ಅಭಿನಯದ ‘ಅವನೇ ಶ್ರೀಮನ್ನಾರಾಯಣ’ ಟ್ರೈಲರ್ ಗೆ ಸ್ಟಾರ್ ನಟರ ಅಭಿಪ್ರಾಯವೇನು ಗೊತ್ತಾ,.!

    ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….