ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.
ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.
ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.
ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.
ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.
ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್ಬುಕ್ ಪೇಜ್ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!