ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.
ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್ ಪವರ್ ಹೊಂದಿರುವ ಜಿಎಸ್ಎಲ್ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್, ಚೀನಾ ಹಾಗೂ ಜಪಾನ್ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್, ತನ್ನೊಂದಿಗೆ ಜಿಸ್ಯಾಟ್ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.
ಜಿಎಸ್ಎಲ್ವಿ ಮಾರ್ಕ್ 3 ರಾಕೆಟ್ ಮಹತ್ವ :-
ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್ಎಲ್ವಿ ಹಾಗೂ ಜಿಎಸ್ಎಲ್ವಿ ಮಾರ್ಕ್-2 ರಾಕೆಟ್ಗಳು 2 ಟನ್ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್ಎಲ್ವಿ ಮಾರ್ಕ್ 3ಗೆ ಇದೆ. ಈ ರಾಕೆಟ್ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.
ಜಿಎಸ್ಎಲ್ವಿ ವಿಶೇಷತೆ:-
ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್ ಎಂಜಿನ್ ಮೂಲಕ ಪೂರ್ಣಪ್ರಮಾಣದ ರಾಕೆಟ್ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.
ಜಿಎಸ್ಎಲ್ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್ ಕೂಡ ಹೌದು. ಎತ್ತರ 43 ಮೀಟರ್. (ಪಿಎಸ್ಎಲ್ವಿ ರಾಕೆಟ್ 44.4 ಮೀಟರ್ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್, ಕೆಳ ಭೂ ಕಕ್ಷೆಗೆ 8 ಟನ್ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.
ಜಿಸ್ಯಾಟ್ 19 ವಿಶೇಷತೆ:-ಜಿಸ್ಯಾಟ್-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್- 19 ಸಮ. ಜಿಸ್ಯಾಟ್ 19ರಲ್ಲಿ ಟ್ರಾನ್ಸ್ಫಾಂಡರ್ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.