ವ್ಯಕ್ತಿ ವಿಶೇಷಣ

ಈಗ 5 ರೂಪಾಯಿಗೆ ವೈದ್ಯಕೀಯ ಸೇವೆ ಸಿಗುತ್ತೆ …!ತಿಳಿಯಲು ಇದನ್ನು ಓದಿ..

138

ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ನಡುವೆ ಕೊನೆಗೆ ಹೈಕೋರ್ಟ್ ಮಧ್ಯಪ್ರವೇಶಿಸಿ ಖಡಕ್ ವಾರ್ನಿಂಗ್ ನೀಡಿದ ಪರಿಣಾಮ ಖಾಸಗಿ ಆಸ್ಪತ್ರೆಗಳ ವೈದ್ಯರು ಇಂದಿನಿಂದ ಎಂದಿನಂತೆ ಕೆಲಸ ಮಾಡಲು ಮುಂದಾಗಿದ್ದಾರೆ.

ಈ ನಡುವೆ ಖಾಸಗಿ ವೈದ್ಯರು ಮಸೂದೆಯನ್ನು ವಿರೋಧಿಸಿ ಮುಷ್ಕರ ನಡೆಸುತ್ತಿದ್ದ ವೇಳೆಯಲ್ಲಿ ಅತ್ತ ಸಕ್ಕರೆ ನಾಡು ಮಂಡ್ಯದ ವೈದ್ಯರೊಬ್ಬರು ತಮ್ಮ ಕರ್ತವ್ಯವನ್ನು ನಿರ್ವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಅವರ ಹೆಸರು ಡಾ ಶಂಕರೇಗೌಡ. ನವೆಂಬರ್ 3ರಂದು ಖಾಸಗಿ ಆಸ್ಪತ್ರೆಗಳ ಮುಷ್ಕರಕ್ಕೆ ನೀಡಿದ್ದ ಕರೆಗೂ ಬೆಂಬಲ ನೀಡದೇ ಕರ್ತವ್ಯ ನಿರ್ವಹಿಸಿದ್ದರು.

ಕೆ.ಪಿ.ಎಂ.ಈ ಕಾಯ್ದೆ ವಿರೋಧಿಸಿ ಖಾಸಗಿ ವೈದ್ಯರು ನಡೆಸುತ್ತಿದ್ದ ಮುಷ್ಕರಕ್ಕೆ ಯಾವುದೇ ಬೆಂಬಲ ನೀಡದೆ ತಮ್ಮ ಪಾಡಿಗೆ ತಮ್ಮ ಕೆಲಸವನ್ನು ಮಾಡುತ್ತ, ರೋಗಿಗಳ ಸೇವೆಯಲ್ಲಿ ತಮ್ಮನು ತೊಡಗಿಸಿಕೊಂಡಿದ್ದರು. ಡಾ.ಶಂಕರೇಗೌಡ. ಚರ್ಮ ರೋಗದ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದವರು.


ಶಿವಳ್ಳಿ ಗ್ರಾಮದವರಾದ ಇವರು ಬೆಳಿಗ್ಗೆ ತಮ್ಮ ಗ್ರಾಮದಲ್ಲಿ ಮತ್ತು ಮಧ್ಯಾಹ್ನ ಮಂಡ್ಯದ ತಮ್ಮ ಚಿಕಿತ್ಸಾಲಯದಲ್ಲಿ ರೋಗಿಗಳಿಗೆ ಕೇವಲ 5 ರೂ ಪಡೆದು ಚಿಕಿತ್ಸೆ ನೀಡುತ್ತಾರೆ. ಎಷ್ಟೋ ಬಾರಿ 5 ರೂ ಗಳನ್ನು ಸಹ ಪಡೆಯುವುದಿಲ್ಲ. ಮೂಲತಃ ಕೃಷಿಕ ಕುಟುಂಬಕ್ಕೆ ಸೇರಿದ ಶಂಕರೇ ಗೌಡರು ತಮ್ಮ 6 ಎಕರೆ ಭೂಮಿಯಲ್ಲಿ ಕೃಷಿ ಕೆಲಸದಲ್ಲೂ ತೊಡಗಿದ್ದಾರೆ , ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಕೆಲಸಗಾರರಿಗೆ ಉಚಿತವಾಗಿ ಚಿಕಿತ್ಸೆ ನೀಡುತ್ತಾರೆ.

ತಮ್ಮ ವೃತ್ತಿ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುವ ಶಂಕರೇ ಗೌಡರು ನಾನು ಹಣ ಮಾಡುವುದಕ್ಕೆ ಈ ವೃತ್ತಿಯನ್ನು ಆಯ್ದುಕೊಂಡಿಲ್ಲ, ಜನರ ಸೇವೆಯೇ ನನ್ನ ಉದ್ದೇಶ ಅಂತ ಹೇಳುತ್ತಾರೆ. ಇದೇ ವೇಳೆ ಸರ್ಕಾರ ಜಾರಿಗೆ ತರಲು ಹೊರಟಿರುವ ಕಾಯ್ದೆ ಬಗ್ಗೆ ಕೂಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕಾಯಿದೆ ಬಹಳ ಕಾಲದ ಹಿಂದೆ ಜಾರಿಗೆ ಬರಬೇಕಾಗಿತ್ತು, ಆದರೆ ತಡವಾಗಿ ಈ ಕಾಯ್ದೆ ಜಾರಿಗೆ ಬರಲು ಸಿದ್ದವಾಗಿರುವುದು ಖುಷಿಯ ವಿಚಾರ ಅಂತ ಹೇಳುತ್ತಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಆರೋಗ್ಯ

    ನಿಮ್ಮ ಮನೆಯಲ್ಲಿಯೇ ಇದೆ, ಹಲ್ಲು ನೋವಿಗೆ ಮದ್ದು..!ತಿಳಿಯಲು ಈ ಲೇಖನ ಓದಿ…

    ಹಲ್ಲು ನೋವು ಅಂತ ಕೇಳಿದ ಕೂಡಲೇ ನಮಗೆ ಅದು ಭಯ ಬೀಳಿಸುತ್ತದೆ.ಹಲ್ಲು ನೋವು ಬಂದಾಗ ಜನರು ಅವುಗಳನ್ನು ಪರಿಹರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಾರೆ. ಇದರಿಂದ ಅವರ ನೋವು ಕಡಿಮೆಯಾಗುವ ಬದಲು ಮತ್ತಷ್ಟು ಹೆಚ್ಚಾಗುತ್ತದೆ. ಹಲ್ಲು ಹಾಗೂ ವಸಡುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದಿದ್ದರೆ ನಾನಾ ಸಮಸ್ಯೆಗಳನ್ನು ಎದುರಿಸಲೇಬೇಕಾಗುತ್ತೆ. ಸಾಮಾನ್ಯವಾಗಿ ಕಾಡುವ ಹಲ್ಲು ನೋವು ಹಾಗೂ ವಸಡುಗಳ ರಕ್ತಸ್ರಾವದ ಕೆಲವು ಸಮಸ್ಯೆಗಳು ಕಾಣಿಸಿಕೊಂಡಾಗ ನಿಮ್ಮ ಅಡುಗೆ ಮನೆಯಲ್ಲಿಯೇ ಇರುವ ಹಲವಾರು ಮದ್ದುಗಳಿಂದ ನಿಮ್ಮ ಹಲ್ಲು ನೋವಿಗೆ ಅಗತ್ಯವಾದ…

  • ಸಿನಿಮಾ

    ಸುಮಲತಾ ಪರ ನಿಂತ ಡಿಬಾಸ್ ಮತ್ತು ಯಶ್..ರಾಕಿಂಗ್ ಸ್ಟಾರ್ ಹೇಳಿದ್ದೇನು ಗೊತ್ತಾ?

    ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…

  • ಉಪಯುಕ್ತ ಮಾಹಿತಿ

    ಕಾರಿನ ಕೀ ಕಳೆದುಹೋಯಿತಾ..? ಹಾಗಾದ್ರೆ ಇಲ್ಲಿದೆ ಡೋರ್ ಲಾಕ್ ಓಪನ್ ಮಾಡುಲು ಸುಲುಭವಾದ ಟಿಪ್ಸ್ ಗಳು ..!ತಿಳಿಯಲು ಇದನ್ನು ಓದಿ ..

    ನಿತ್ಯ ವಾಹನಗಳನ್ನು ಬಳಸುವವರು ಯಾರಾದರೂ ಅದರ ಕೀಗಳನ್ನು ಭದ್ರವಾಗಿ ಇಟ್ಟುಕೊಳ್ಳಬೇಕು. ಒಂದು ವೇಳೆ ಅವನ್ನು ಕಳೆದುಕೊಂಡರೆ ಕಷ್ಟಗಳು ತಪ್ಪಿದ್ದಲ್ಲ.. ಆಗ ಅನುಭವಿಸುವ ಕಿರಿಕಿರಿ ಮಾತಿನಲ್ಲಿ ಹೇಳಲು ಸಾಧ್ಯವಿಲ್ಲ. ಇನ್ನು ಮುಖ್ಯವಾಗಿ ಕಾರಿನ ಮಾಲೀಕರು ಒಮ್ಮೊಮ್ಮೆ ಕಾರಿನಲ್ಲೇ ಕೀ ಮರೆತುಬಿಡುತ್ತಾರೆ.

  • ವಿಚಿತ್ರ ಆದರೂ ಸತ್ಯ

    ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

    ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.