ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್ನ್ನು ನೀವು ಈಗಾಗಲೆ ಇನ್ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.
1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)
ಗೂಗಲ್ ಪ್ಲೇಸ್ಟೋರ್ನಲ್ಲಿ ಇರುವ ಈ ಆಪ್ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್ನಲ್ಲಿದ್ದರೆ ಕೂಡಲೆ ಅನ್ಇನ್ಸ್ಟಾಲ್ ಮಾಡಿ.
2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್ನಲ್ಲಿರುವ ಈ ಆಪ್ನಲ್ಲಿ ಮಾಲ್ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.
3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್ನ್ನು 50 ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.
5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್ಇನ್ಸ್ಟಾಲ್ ಮಾಡಿಬಿಡಿ.
6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್ನ್ನು 50 ಸಾವಿರ ಮಂದಿ ಈಗಾಗಲೆ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್ನಲ್ಲೂ ಸಹ ಮಾಲ್ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್ನಿಂದ ಕೂಡಲೆ ತೆಗೆದುಬಿಡಿ.
7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.
8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.
10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.
11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….