News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

837

ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್‌ನ್ನು ನೀವು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್‌ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.

1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)

ಗೂಗಲ್ ಪ್ಲೇಸ್ಟೋರ್‌ನಲ್ಲಿ ಇರುವ ಈ ಆಪ್‌‍ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್‌ನಲ್ಲಿದ್ದರೆ ಕೂಡಲೆ ಅನ್‌ಇನ್‌ಸ್ಟಾಲ್ ಮಾಡಿ.

2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್‌ನಲ್ಲಿರುವ ಈ ಆಪ್‌ನಲ್ಲಿ ಮಾಲ್‌ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್‌ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.

3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್‌ನ್ನು 50 ಸಾವಿರ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.

5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್‌ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್‌ಇನ್‌ಸ್ಟಾಲ್ ಮಾಡಿಬಿಡಿ.

6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್‌ನ್ನು 50 ಸಾವಿರ ಮಂದಿ ಈಗಾಗಲೆ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್‌ನಲ್ಲೂ ಸಹ ಮಾಲ್‌ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್‌ನಿಂದ ಕೂಡಲೆ ತೆಗೆದುಬಿಡಿ.

7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.

8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್‌ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.

10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್‍ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.

11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • inspirational

    ಕೊರೊನಾ 3ನೇ ಅಲೆ ಎದುರಿಸುವುದಕ್ಕೆ ರಾಜ್ಯ ಸರ್ಕಾರ ಸಿದ್ಧತೆ; ಆಸ್ಪತ್ರೆಗಳಲ್ಲೇ ಆಕ್ಸಿಜನ್ ಪ್ಲಾಂಟ್ ತೆರೆಯಲು ಚರ್ಚೆ

    ಮೂರನೇ ಅಲೆಯಲ್ಲಿ ಕೊರೊನಾ ಮಕ್ಕಳನ್ನೆ ಟಾರ್ಗೆಟ್ ಮಾಡುತ್ತದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್ ಅಥವಾ ನವೆಂಬರ್ ತಿಂಗಳಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ತಜ್ಞರ ಮಾಹಿತಿ ಕೇಳಿ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಮಯೂನ್.ಎನ್ Published On – 25 May 2021 ಸಾಂದರ್ಭಿಕ ಚಿತ್ರ ಬೆಂಗಳೂರು: ಕೊರೊನಾ ಸೋಂಕು ಇಡೀ ವಿಶ್ವವನ್ನೆ ಕಂಗಾಲಾಗಿಸಿದೆ. ಈಗಾಗಲೇ ಅದೆಷ್ಟೋ ಬಡ ಜೀವಿಗಳನ್ನು ಬಲಿ ಪಡೆದಿದೆ. ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಕೊರೊನಾ ಆರ್ಭಟ ಕಡಿಮೆಯಾಗುತ್ತಿದೆ. ಇನ್ನು ಮುಂದೆ ಎಲ್ಲವೂ ಮೊದಲಿನಂತೆ…

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಯನ್ನು ನೆನೆಯುತ್ತಾ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…