News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಗ್ಯಾಜೆಟ್

ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

833

ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್‌ನ್ನು ನೀವು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್‌ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.

1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)

ಗೂಗಲ್ ಪ್ಲೇಸ್ಟೋರ್‌ನಲ್ಲಿ ಇರುವ ಈ ಆಪ್‌‍ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್‌ನಲ್ಲಿದ್ದರೆ ಕೂಡಲೆ ಅನ್‌ಇನ್‌ಸ್ಟಾಲ್ ಮಾಡಿ.

2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್‌ನಲ್ಲಿರುವ ಈ ಆಪ್‌ನಲ್ಲಿ ಮಾಲ್‌ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್‌ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.

3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್‌ನ್ನು 50 ಸಾವಿರ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.

5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್‌ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್‌ಇನ್‌ಸ್ಟಾಲ್ ಮಾಡಿಬಿಡಿ.

6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್‌ನ್ನು 50 ಸಾವಿರ ಮಂದಿ ಈಗಾಗಲೆ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್‌ನಲ್ಲೂ ಸಹ ಮಾಲ್‌ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್‌ನಿಂದ ಕೂಡಲೆ ತೆಗೆದುಬಿಡಿ.

7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.

8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್‌ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.

10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್‍ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.

11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಸುದ್ದಿ

    ಚಳಿಗಾಲದಲ್ಲಿಯೂ ಸಹ ನೀವು ಬೆಚ್ಚಗಿನ ವಾತಾವರಣದಲ್ಲಿರಲು ಬಯಸುವಿರಾ, ಹಾಗಾದರೆ ನೀವು ಇಲ್ಲಿಗೆ ಒಮ್ಮೆ ಭೇಟಿ ನೀಡಿ…

    ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ  ಆರಂಭವಾಗಿದೆ. ಚಳಿಯಿ೦ದ ಕೂಡಿದ  ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…