News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಗ್ಯಾಜೆಟ್

ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

836

ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್‌ನ್ನು ನೀವು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್‌ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.

1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)

ಗೂಗಲ್ ಪ್ಲೇಸ್ಟೋರ್‌ನಲ್ಲಿ ಇರುವ ಈ ಆಪ್‌‍ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್‌ನಲ್ಲಿದ್ದರೆ ಕೂಡಲೆ ಅನ್‌ಇನ್‌ಸ್ಟಾಲ್ ಮಾಡಿ.

2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್‌ನಲ್ಲಿರುವ ಈ ಆಪ್‌ನಲ್ಲಿ ಮಾಲ್‌ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್‌ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.

3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್‌ನ್ನು 50 ಸಾವಿರ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.

5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್‌ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್‌ಇನ್‌ಸ್ಟಾಲ್ ಮಾಡಿಬಿಡಿ.

6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್‌ನ್ನು 50 ಸಾವಿರ ಮಂದಿ ಈಗಾಗಲೆ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್‌ನಲ್ಲೂ ಸಹ ಮಾಲ್‌ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್‌ನಿಂದ ಕೂಡಲೆ ತೆಗೆದುಬಿಡಿ.

7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.

8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್‌ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.

10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್‍ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.

11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ದಿನಾಲೂ ನಿಂಬೆ ರಸ ಕುಡಿಯೋದ್ರಿಂದ ಏನೆಲ್ಲಾ ಪ್ರಯೋಜನೆಗಳು ಆಗುತ್ತೆ, ಒಮ್ಮೆ ಈ ಲೇಖನ ಓದಿ ನೋಡಿ…

    ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.   *ಬಾಯಿಯ ದುರ್ವಾಸನೆ ನಿವಾರಿಸುತ್ತದೆ  ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ದೇಶ-ವಿದೇಶ

    ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

    ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೊಮೆಟೊ ಕೆಚಪ್‌ನಿಂದ ಮನೆಯಲ್ಲಿ ದಿನಬಳಕೆಗೆ ಉಪಯೋಗಿಸುವ ವಸ್ತುಗಳನ್ನು ಫಳ ಫಳ ಹೊಳೆಯಿಸುವುದು ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ …

    ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.