ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್ನ್ನು ನೀವು ಈಗಾಗಲೆ ಇನ್ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.
1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)
ಗೂಗಲ್ ಪ್ಲೇಸ್ಟೋರ್ನಲ್ಲಿ ಇರುವ ಈ ಆಪ್ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್ನಲ್ಲಿದ್ದರೆ ಕೂಡಲೆ ಅನ್ಇನ್ಸ್ಟಾಲ್ ಮಾಡಿ.
2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್ನಲ್ಲಿರುವ ಈ ಆಪ್ನಲ್ಲಿ ಮಾಲ್ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.
3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್ನ್ನು 50 ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.
5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್ಇನ್ಸ್ಟಾಲ್ ಮಾಡಿಬಿಡಿ.
6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್ನ್ನು 50 ಸಾವಿರ ಮಂದಿ ಈಗಾಗಲೆ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್ನಲ್ಲೂ ಸಹ ಮಾಲ್ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್ನಿಂದ ಕೂಡಲೆ ತೆಗೆದುಬಿಡಿ.
7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.
8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.
10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.
11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ, ಇಷ್ಟು ದಿನ ಸ್ಯಾಂಡಲ್ವುಡ್ನಲ್ಲಿ ಮಿಂಚಿದವರು. ಈಗ ಅವರು ಮಾಲಿವುಡ್ಗೆ ಕಾಲಿಡುತ್ತಿದ್ದಾರೆ. ಹಾಗಂತ ಅವರು ಯಾವುದೇ ಮಲಯಾಳಂ ಸಿನಿಮಾ ಮಾಡುತ್ತಿದ್ದಾರೆ ಅಂತ ಅಲ್ಲ , ಅವರು ಯಾವ ಸಿನಿಮಾ ಮಾಡಲು ಒಪ್ಪಿಕೊಂಡಿಲ್ಲ . ಅಸಲಿ ವಿಚಾರ ಏನೆಂದರೆ, ‘ಕುರಕ್ಷೇತ್ರ’ ಸಿನಿಮಾ ಮಲಯಾಳಂನಲ್ಲಿ ನಾಳೆ ತೆರೆಕಾಣುತ್ತಿರುವ ಕಾರಣಕ್ಕಾಗಿ ಈ ಸಮಾಚಾರ ಹುಟ್ಟುಹಾಕಿದೆ. ದರ್ಶನ್, ಹಿರಿಯ ನಟ ಅಂಬರೀಶ್, ನಟ ನಿಖಿಲ್ ಕುಮಾರಸ್ವಾಮಿ, ರವಿಚಂದ್ರನ್ ಸೇರಿ ಅನೇಕರು ಈ…
ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…