News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

373

ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-

ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.

ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-

ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.

ಇದು ರಹಸ್ಯವಾಗಿದೆ:-

ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.

ನೋಡುವಾಗ ಕಾಣಿಸುವುದಿಲ್ಲ:-

ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.

ವಿವಿಧ ಸಿದ್ಧಾಂತಗಳು:-

ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.

ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-

ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಸಿನಿಮಾ

    ಕನ್ನಡಕ್ಕೆ ಡಬ್ ಆಗ್ತಿವೆ ಸಾಲು ಸಾಲು ಪರಭಾಷಾ ಚಿತ್ರಗಳು..!

    ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…

  • ಗ್ಯಾಜೆಟ್

    ಮೊಬೈಲ್ ನಿರ್ಮಾಣ ಕಂಪೆನಿಗಳಲ್ಲಿ ನಡುಕ ಹುಟ್ಟಿಸಿದ ನೂತನ ಈ ಜಿಯೋ ಫೋನ್ ಬೆಲೆ!ಈ ಲೇಖನಿ ಓದಿ ಶಾಕ್ ಆಗ್ತೀರಾ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…