ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

ಹಾಗೆಂದು ಎಲ್ಲಾ ತಲೆನೋವುಗಳೂ ಮೈಗ್ರೇನ್ ಅಲ್ಲ. ದೃಷ್ಟಿದೋಷ, ನೆಗಡಿಗೆ ಸಂಬಂಧಿಸಿದ ತೊಂದರೆಗಳು, ಜ್ವರ ಇತ್ಯಾದಿ ಕಾರಣಗಳಿಂದಲೂ ತಲೆನೋವು ಬರುತ್ತದೆ. ಆದರೆ ಅದು ಮೈಗ್ರೇನ್ ಅಲ್ಲ. ಆದರೆ ಮೈಗ್ರೇನ್ ತಲೆನೋವು ಅತ್ಯಂತ ಸಾಮಾನ್ಯವಾದದ್ದು.
ಮೈಗ್ರೇನ್ ಎಂದರೇನು ?
ಕೆಲವು ಕಾರಣಗಳಿಂದ ಒಂದು ವ್ಯಕ್ತಿಯ ತಲೆಯೊಳಗಿನ ರಕ್ತನಾಳಗಳ ಗಾತ್ರದಲ್ಲಿ ಅಸ್ತಿರತೆಯುಂಟಾಗಿ, ಅವು ಮೊದಲು ಸಂಕುಚಿತವಾಗಿ ನಂತರ ವಿಕಸಿತವಾಗುತ್ತದೆ.ಆಗ ರಕ್ತನಾಳಗಳಿಗೆ ಸಂಬಂಧಿಸಿದ ಸೂಕ್ಷ್ಮ ನರಗಳು ಉದ್ರೇಕಗೊಂಡು ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಅದೇ ಮೈಗ್ರೇನ್.

ಕಾರಣಗಳು, ಸಂದರ್ಭ ಮತ್ತು ಅಪಾಯಕಾರಿ ಅಂಶಗಳು:
ಸಾಮಾನ್ಯವಾಗಿ ಮೈಗ್ರೇನ್ ತಲೆನೋವು 10 ರಿಂದ 45 ವಯಸ್ಸಿನ ನಡುವೆ ಕಾಣಿಸಿಕೊಳ್ಳುತ್ತದೆ. ಕೆಲವು ಸಂದರ್ಭಗಳಲ್ಲಿ ಇದು ಜೀವನದ ಅಂತಿಮ ಹಂತಗಳಲ್ಲಿಯೂ ಸಹ ಕಾಣಿಸಿಕೊಳ್ಳಬಹುದು.ಮೈಗ್ರೇನ್ ಪುರುಷರಿಗಿಂತಲೂ ಮಹಿಳೆಯರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಮೈಗ್ರೇನ್ ತಲೆನೋವು ವಂಶಪರಂಪರಾಗತವಾಗಿ ಬರಬಹುದು. ಕೆಲವು ಮಹಿಳೆಯರಲ್ಲಿ , ಎಲ್ಲರಲ್ಲಿಯೂ ಅಲ್ಲ , ಅವರು ಗರ್ಭಿಣಿ ಆಗಿರುವಾಗ ಮೈಗ್ರೇನ್ ಕಾಣಿಸಿಕೊಳ್ಳಬಹುದು.

ಇದಕ್ಕೆ ನಿರ್ಧಿಷ್ಟ ಕಾರಣವನ್ನು ಹೇಳಲಾಗದಿದ್ದರೂ ಈ ಕೆಲವು ಸಾಮಾನ್ಯ ಕಾರಣಗಳನ್ನು ಹೇಳಬಹುದು.
1 ಹೆಚ್ಚು ಕೆಲಸದಿಂದಾಗಿ ಮಾನಸಿಕ ಒತ್ತಡ ಇರುವ ಸಾಫ್ಟ್ವೇರ್ ಎಂಜಿನಿಯರುಗಳಿಗೆ ಇದು ಸಾಮಾನ್ಯ. ಅವರಿಗೆ ದಿನದ ಹೆಚ್ಚುಕಾಲ ಒತ್ತಡದ ಕೆಲಸ ಮತ್ತು ನಿದ್ರೆ ಕಡಿಮೆ, ಅನಿಯಮಿತ ಆಹಾರದ ಸೇವನೆ ಇರುತ್ತದೆ.
2 . ಮಾನಸಿಕ ಒತ್ತಡಗಳಾದ ಕೋಪ,ಚಿಂತೆ, ಖಿನ್ನತೆ,ಗಾಬರಿಗಳಿಂದ ತಲೆನೋವು ಉದ್ರೇಕವಾಗಬಹುದು.
3 .ಆಹಾರ ಸೇವನೆಯಿಂದ ವ್ಯತ್ಯಾಸವಾದ ಹಸಿವೆ, ಮದ್ಯ ಸೇವನೆ, ಕಡಿಮೆ ನೀರು ಕುಡಿಯುವುದರಿನ್ದಲೂ ತಲೆನೋವು ಉದ್ರೇಕವಾಗುತ್ತದೆ.
4 . ನಿದ್ರೆ ಮಾತ್ರೆ ಸೇವನೆ, ಬಿ. ಪಿ., ಹಲ್ಲು ನೋವು, ಕಣ್ಣಿನ ತೊಂದರೆ, ತಂಬಾಕು ಅಥವಾ ಸಿಗರೇಟು ಸೇವನೆ, ಗರ್ಭನಿರೋಧಕ ಮಾತ್ರೆ, ಮೂಗಿನ ಉಸಿರಾಟದ ತೊಂದರೆ, ಸಂಸ್ಕರಿಸದ ಆಹಾರ ಸೇವನೆ, ಅತಿ ಮುಖ್ಯವಾಗಿ ನಿದ್ರಾಹೀನತೆ ಮುಂತಾದುವುಗಳಿಂದ ಸಹ ತಲೆನೋವು ಉದ್ರೇಕಗೊಳ್ಳಬಹುದು.
5 . ಹೆಚ್ಚು ಕಾಲ ಬಿಸಿಲಿನಲ್ಲಿ ಇರುವುದು, ದೀರ್ಘಕಾಲ ಪ್ರಯಾಣ ಮಾಡುವುದು, ಮದುವೆ ಅಥವಾ ಇತರೆ ಗಲಾಟೆ ಇರುವ ಸಮಾರಂಭದಲ್ಲಿ ಹೆಚ್ಚು ಹೊತ್ತು ಭಾಗವಹಿಸುವುದು, ಕೆಲವರಿಗೆ ಹೆಚ್ಚಾಗಿ ಓದುವುದು, ಹೆಚ್ಚು ಕಾಲ ಸಿನೆಮಾ / ಟಿ. ವಿ, ನೋಡುವುದು ಇವುಗಳಿಂದ ತಲೆನೋವು ಉದ್ರೇಕಗೊಳಬಹುದು.
6 . ಕೆಲವು ಸ್ತ್ರೀಯರಿಗೆ ಋತುಚಕ್ರದ ಏರುಪೇರುಗಳಿಂದ ತಲೆನೋವು ಉದ್ರೇಕಗೊಳ್ಳಬಹುದು.

ಮೈಗ್ರೇನ್ ರೋಗಲಕ್ಷಣಗಳು:
ದೃಷ್ಟಿ ಅಸ್ತವ್ಯಸ್ತಗೊಳ್ಳುವುದು, ಅಥವಾ ಕಣ್ಣಿನ ಬದಿಗಳಲ್ಲಿ ಬೆಳಕಿನ ಬಿಂಬಗಳು ಅಥವಾ ಪ್ರಭಾವಳಿ ಸುತ್ತುತ್ತಿರುವಂತೆ ಅನ್ನಿಸುವುದನ್ನು ಮೈಗ್ರೇನ್ ಬರುತ್ತಿದೆ ಎನ್ನುವುದರ ಎಚ್ಚರಿಕೆಯ ಸೂಚನೆ ಎಂಬುದಾಗಿ ಪರಿಗಣಿಸಲಾಗುತ್ತದೆ. ಬೆಳಕಿನ ಬಿಂಬಗಳು ಒಂದು ಅಥವಾ ಎರಡೂ ಕಣ್ಣಿನ ಬದಿಗಳಲ್ಲಿ ಕಾಣಿಸಿಕೊಳ್ಳಬಹುದು ಮತ್ತು ಕೆಳಗೆ ಹೇಳುವ ಒಂದು ಅಥವಾ ಎಲ್ಲ ರೋಗಲಕ್ಷಣಗಳ ಜತೆಗೆ ಕಾಣಿಸಿಕೊಳ್ಳಬಹುದು.
ಕಣ್ಣಿನಲ್ಲಿ ತಾತ್ಕಾಲಿಕವಾಗಿ ಆಂಶಿಕ ಕುರುಡುತನ ಅಥವಾ ಕಣ್ಣಿನ ಎದುರು ಕಪ್ಪು ಚುಕ್ಕೆಗಳು ಗೋಚರಿಸುವುದು,ದೃಷ್ಟಿ ಮಬ್ಟಾಗುವುದು,ಕಣ್ಣು ನೋವು,ಕಣ್ಣಿನ ಸುತ್ತಲೂ ನಕ್ಷತ್ರಗಳು ಅಥವಾ ಅಂಕುಡೊಂಕಾದ ಗೆರೆಗಳು ಗೋಚರಿಸುವುದು
ಕೊಳವೆಯೊಳಗಿನಿಂದ ನೋಡಿದಂತೆ ದೃಶ್ಯಗಳು ಅರೆಬರೆ ಕಾಣಿಸುವುದು (ಟನೆಲ್ಷನ್-ಕಣ್ಣಿನ ಮುಂಭಾಗದ ದೃಶ್ಯಗಳು ಮಾತ್ರವೇ ಗೋಚರಿಸಿ ಬದಿಗಳಲ್ಲಿನ ದೃಶ್ಯ ಕಾಣಿಸದೆಯೇ ಇರುವುದು)
ಮೈಗ್ರೇನ್ ಇರುವ ಎಲ್ಲ ವ್ಯಕ್ತಿಗಳಿಗೂ ಬೆಳಕಿನ ಪುಂಜ ಕಾಣಿಸದೆ ಇರಬಹುದು. ಇಂತಹ ಬೆಳಕಿನ ಪುಂಜ ಕಾಣಿಸಿಕೊಳ್ಳುವವರಲ್ಲಿ ತಲೆನೋವು ಕಾಣಿಸಿಕೊಳ್ಳುವುದಕ್ಕೆ ಸುಮಾರು 10-15 ನಿಮಿಷ ಮೊದಲು ಇದು ಕಾಣಿಸಿಕೊಳ್ಳಬಹುದು. ಹಾಗಿದ್ದರೂ ಸಹ ಅದು ಕೆಲವೇ ನಿಮಿಷಗಳಿಗೆ ಮೊದಲು ಅಥವಾ 24 ಗಂಟೆಗಳಿಗೂ ಮೊದಲು ಕಾಣಿಸಿಕೊಳ್ಳಬಹುದು. ಬೆಳಕಿನ ಪುಂಜ ಕಾಣಿಸಿಕೊಂಡ ಅನಂತರ ಯಾವಾಗಲೂ ತಲೆನೋವು ಬಂದೇ ಬರುತ್ತದೆ ಎಂದು ಹೇಳುವಂತಿಲ್ಲ.
ಮೈಗ್ರೇನ್ ತಲೆನೋವು ಬಹಳ ಸಣ್ಣದಾಗಿ ಇರಬಹುದು ಅಥವಾ ತೀವ್ರ ರೂಪದಲ್ಲಿಯೂ ಬಾಧಿಸಬಹುದು. ನೋವು ಕಣ್ಣಿನ ಹಿಂಭಾಗದಲ್ಲಿ ಅಥವಾ ಕತ್ತು ಮತ್ತು ತಲೆಯ ಹಿಂಭಾಗದಲ್ಲಿ ಕಾಣಿಸಿಕೊಳ್ಳಬಹುದು. ಕೆಲವು ರೋಗಿಗಳಲ್ಲಿ ಪ್ರತಿಯೊಂದು ಬಾರಿಯೂ ತಲೆನೋವು ಒಂದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ತಲೆನೋವು ಸಾಮಾನ್ಯವಾಗಿ ಈ ರೀತಿಯಲ್ಲಿ ಇರಬಹುದು.
ಬಹಳ ಸಣ್ಣದಾಗಿ ಆರಂಭವಾದ ನೋವು ಕೆಲವೇ ನಿಮಿಷಗಳಲ್ಲಿ ಅಥವಾ ಗಂಟೆಗಳಲ್ಲಿ ತೀವ್ರಗೊಳ್ಳಬಹುದು. 6 ರಿಂದ 48 ಗಂಟೆಗಳ ವರೆಗೂ ಇರಬಹುದು.

ಮೈಗ್ರೇನ್ ನ ನಿವಾರಣೆ :-
1 . ಮೈಗ್ರೇನ್ ತಲೆನೋವು ಬಂದಾಗ ಕೆಲವರಿಗೆ ಯಾವುದಾದರೂ ನೋವು ನಿವಾರಕ ಮಾತ್ರೆಯನ್ನು [ Pain killer ] ತೆಗೆದುಕೊಂಡರೆ ಸ್ವಲ್ಪ ಸಮಯದ ನಂತರ ನೋವು ಕಡಿಮೆಯಾಗುತ್ತದೆ.
2 . ಇನ್ನು ಕೆಲವರಿಗೆ ಏನನ್ನೂ ಉಪಯೋಗಿಸದೆ ನಿಷ್ಯಬ್ದವಾದ ಕೊಠಡಿಯಲ್ಲಿ ಕೆಲವು ಕಾಲ ವಿಶ್ರಾಂತಿ ತೆಗೆದುಕೊಳ್ಳುವುದರಿಂದಲೇ ತಲೆನೋವು ಕಡಿಮೆಯಾಗುತ್ತದೆ.
3 . ಇದಲ್ಲದೆ ಜೀವನ ಶೈಲಿಯನ್ನ್ನು ಬದಲಾಯಿಸಿಕೊಳ್ಳುವುದರಿಂದ ಈ ತೆರನ ತಲೆನೋವನ್ನು ನಿಯಂತ್ರಿಸಿಕೊಳ್ಳಬಹುದು.
ಮುನ್ಸೂಚನೆಗಳು:–
ಚಿಕಿತ್ಸೆಗೆ ಪ್ರತಿಯೊಬ್ಬನೂ ಸ್ಪಂದಿಸುವ ರೀತಿ ಹಾಗೂ ಪ್ರಮಾಣ ಭಿನ್ನ-ಭಿನ್ನವಾಗಿರುತ್ತವೆ. ಕೆಲವರಿಗೆ ಸ್ವಲ್ಪಮಟ್ಟಿನ ಚಿಕಿತ್ಸೆಯಿಂದ ಅಥವಾ ಚಿಕಿತ್ಸೆಯೇ ಇಲ್ಲದೆ ತಲೆನೋವು ಕಡಿಮೆ ಆಗಬಹುದು, ಇನ್ನು ಕೆಲವರಿಗೆ ಅನೇಕ ಔಷಧಿಗಳನ್ನು ಉಪಯೋಗಿಸಬೇಕಾಗಿ ಬರಬಹುದು ಅಥವಾ ಆಸ್ಪತ್ರೆಗೂ ಸೇರಬೇಕಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…