ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಮುಂಬೈನಲ್ಲಿನ ಚೀನಾ ದೂತವಾಸ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಲಿಯು ಯೂಫಾ ಅವರು ಈ ರೀತಿಯ ಎಚ್ಚರಿಕೆ ನೀಡಿದ್ದು. ಭಾರತಿಯ ಸೈನಿಕರು ಅತಿಕ್ರಮವಾಗಿ ಪ್ರವೇಶ ಮಾಡಿದ್ದು, ಚೀನೀ ಯೋಧರು ಇದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ದರಿದ್ದಾರೆ.
ಹೀಗಾಗಿ ಭಾರತವೇ ಸ್ವಯಂ ಪ್ರೇರಿತವಾಗಿ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.ಅಂತರಾಷ್ಟ್ರೀಯ ಕಾನೂನನ್ನು ನಾನು ಅರ್ಥ ಮಾಡಿಕೊಂಡಂತೆ, ಬೇರೆ ದೇಶದ ಭೂಭಾಗವನ್ನು ಯಾವ ದೇಶದವರೆ ಪ್ರವೇಶಿಸಿದರೂ ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಅಂತರಾಷ್ಟ್ರೀಯ ಕಾನೂನಿನ ಪ್ರಕಾರ, ಸಮವಸ್ತ್ರದಲ್ಲಿರುವ ಒಂದು ದೇಶದ ಯೋಧರು ಮತ್ತೊಂದು ದೇಶದ ಗಡಿಯೊಳಗೆ ಕಾಲಿಟ್ಟರೇ ಸಹಜವಾಗಿಯೇ ಅವರು ಶತ್ರುಗಳಾಗಿಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗಡಿಯೊಳಕ್ಕೆ ಕಾಲಿಟ್ಟ ಯೋಧರು ಸ್ವಯಂಪ್ರೇರಿತವಾಗಿ ವಾಪಸ್ ಹೋಗಬೇಕು. ಇಲ್ಲದಿದ್ದರೆ, ಅವರನ್ನು ಬಂಧಿಸಬಹುದು. ಒಂದು ವೇಳೆ ಗಡಿ ವಿವಾದ ತೀವ್ರಗೊಂಡಿದ್ದೇ ಆದರೆ, ಅವರನ್ನು ಹತ್ಯೆ ಮಾಡಲೂ ಬಹುದು ಎಂದು ತಿಳಿಸಿದ್ದಾರೆ. ಲಿಯು ಯೂಫಾ ಅವರು ಚೀನಾ ಸರ್ಕಾರಿ ಸ್ವಾಮ್ಯದ ಆಂಗ್ಲ ವಾಹಿನಿ ಸಿಸಿಟೀವಿ ತಿಳಿಸಿದ್ದಾರೆ.
ಡೋಕ್ಲಾಮ್ ಪ್ರದೇಶ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ. ಹೀಗಾಗಿ ತನ್ನ ಗಡಿಯೊಳಕ್ಕೆ ಭಾರತೀಯ ಯೋಧರು ಕಾಲಿಟ್ಟಿದ್ದಾರೆ ಎಂಬ ಅಭಿಪ್ರಾಯ ಆ ದೇಶದವರಲ್ಲಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಚೀನಾದ ಮಾಜಿ ರಾಯಭಾರಿ ಈ ರೀತಿ ಹೇಳಿದ್ದಾರೆ.
ಸಿಕ್ಕಿಂನ ಡೋಕ್ಲಾಮ್ ಪ್ರದೇಶದಲ್ಲಿರುವ ವಿವಾದಿತ ಪ್ರದೇಶ ತ್ರಿರಾಷ್ಟ್ರ (ಭಾರತ-ಚೀನಾ-ಭೂತಾನ್)ಕ್ಕೆ ಸಂಬಂಧಿಸಿದ್ದು, ಆದರೆ, ಚೀನಾ ತ್ರಿರಾಷ್ಟ್ರ ಗಡಿ ಸಂಧಿ ಸ್ಥಳದ ಯಾಥಾಸ್ಥಿತಿಯನ್ನು ಮಾರ್ಪಾಡು ಮಾಡಲು ಯತ್ನಿಸುತ್ತಿದೆ. ಆದರೆ ಭಾರತದ ಪ್ರಕಾರ, ಡೋಕ್ಲಾಮ್ ಪ್ರದೇಶ ಮೂರು ದೇಶಗಳ ಸಂಗಮದಲ್ಲಿ ಸೇರಲಿದ್ದು ಆ ಕಾರಣದಿಂದ ಅದರ ಹಕ್ಕು ಭಾರತದ ಮಿತ್ರ ದೇಶ ಭೂತಾನ್’ದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.
ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.