ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ಮುಂಬೈನಲ್ಲಿನ ಚೀನಾ ದೂತವಾಸ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಲಿಯು ಯೂಫಾ ಅವರು ಈ ರೀತಿಯ ಎಚ್ಚರಿಕೆ ನೀಡಿದ್ದು. ಭಾರತಿಯ ಸೈನಿಕರು ಅತಿಕ್ರಮವಾಗಿ ಪ್ರವೇಶ ಮಾಡಿದ್ದು, ಚೀನೀ ಯೋಧರು ಇದನ್ನು ಸಮರ್ಥವಾಗಿ ನಿಭಾಯಿಸಲು ಸಿದ್ದರಿದ್ದಾರೆ.
ಹೀಗಾಗಿ ಭಾರತವೇ ಸ್ವಯಂ ಪ್ರೇರಿತವಾಗಿ ತನ್ನ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು.ಅಂತರಾಷ್ಟ್ರೀಯ ಕಾನೂನನ್ನು ನಾನು ಅರ್ಥ ಮಾಡಿಕೊಂಡಂತೆ, ಬೇರೆ ದೇಶದ ಭೂಭಾಗವನ್ನು ಯಾವ ದೇಶದವರೆ ಪ್ರವೇಶಿಸಿದರೂ ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.
ಅಂತರಾಷ್ಟ್ರೀಯ ಕಾನೂನಿನ ಪ್ರಕಾರ, ಸಮವಸ್ತ್ರದಲ್ಲಿರುವ ಒಂದು ದೇಶದ ಯೋಧರು ಮತ್ತೊಂದು ದೇಶದ ಗಡಿಯೊಳಗೆ ಕಾಲಿಟ್ಟರೇ ಸಹಜವಾಗಿಯೇ ಅವರು ಶತ್ರುಗಳಾಗಿಬಿಡುತ್ತಾರೆ. ಅಂತಹ ಸಂದರ್ಭದಲ್ಲಿ ಅವರು ಮೂರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಗಡಿಯೊಳಕ್ಕೆ ಕಾಲಿಟ್ಟ ಯೋಧರು ಸ್ವಯಂಪ್ರೇರಿತವಾಗಿ ವಾಪಸ್ ಹೋಗಬೇಕು. ಇಲ್ಲದಿದ್ದರೆ, ಅವರನ್ನು ಬಂಧಿಸಬಹುದು. ಒಂದು ವೇಳೆ ಗಡಿ ವಿವಾದ ತೀವ್ರಗೊಂಡಿದ್ದೇ ಆದರೆ, ಅವರನ್ನು ಹತ್ಯೆ ಮಾಡಲೂ ಬಹುದು ಎಂದು ತಿಳಿಸಿದ್ದಾರೆ. ಲಿಯು ಯೂಫಾ ಅವರು ಚೀನಾ ಸರ್ಕಾರಿ ಸ್ವಾಮ್ಯದ ಆಂಗ್ಲ ವಾಹಿನಿ ಸಿಸಿಟೀವಿ ತಿಳಿಸಿದ್ದಾರೆ.
ಡೋಕ್ಲಾಮ್ ಪ್ರದೇಶ ತನಗೆ ಸೇರಿದ್ದು ಎಂದು ಚೀನಾ ವಾದಿಸುತ್ತಿದೆ. ಹೀಗಾಗಿ ತನ್ನ ಗಡಿಯೊಳಕ್ಕೆ ಭಾರತೀಯ ಯೋಧರು ಕಾಲಿಟ್ಟಿದ್ದಾರೆ ಎಂಬ ಅಭಿಪ್ರಾಯ ಆ ದೇಶದವರಲ್ಲಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಚೀನಾದ ಮಾಜಿ ರಾಯಭಾರಿ ಈ ರೀತಿ ಹೇಳಿದ್ದಾರೆ.
ಸಿಕ್ಕಿಂನ ಡೋಕ್ಲಾಮ್ ಪ್ರದೇಶದಲ್ಲಿರುವ ವಿವಾದಿತ ಪ್ರದೇಶ ತ್ರಿರಾಷ್ಟ್ರ (ಭಾರತ-ಚೀನಾ-ಭೂತಾನ್)ಕ್ಕೆ ಸಂಬಂಧಿಸಿದ್ದು, ಆದರೆ, ಚೀನಾ ತ್ರಿರಾಷ್ಟ್ರ ಗಡಿ ಸಂಧಿ ಸ್ಥಳದ ಯಾಥಾಸ್ಥಿತಿಯನ್ನು ಮಾರ್ಪಾಡು ಮಾಡಲು ಯತ್ನಿಸುತ್ತಿದೆ. ಆದರೆ ಭಾರತದ ಪ್ರಕಾರ, ಡೋಕ್ಲಾಮ್ ಪ್ರದೇಶ ಮೂರು ದೇಶಗಳ ಸಂಗಮದಲ್ಲಿ ಸೇರಲಿದ್ದು ಆ ಕಾರಣದಿಂದ ಅದರ ಹಕ್ಕು ಭಾರತದ ಮಿತ್ರ ದೇಶ ಭೂತಾನ್’ದ್ದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ ಹಾಗೂ ರೆಸ್ಟೋರೆಂಟ್ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್ನವರೇ ತಿಳಿಸಬೇಕು ಹೇಳಿದೆ.
ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.