ಭವಿಷ್ಯ

ಈ ದಿನದ ನಿಮ್ಮ ಭವಿಷ್ಯ ನೋಡಿ ತಿಳಿಯಿರಿ…

318

ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮ ಕಾರ್ಯಕ್ಷೇತ್ರದಲ್ಲಿ ಮುನ್ನುಗ್ಗುವ ಧೈರ್ಯ ಮಾಡಿ.ಆದಷ್ಟೂ ತಾಳ್ಮೆ ಇರಲಿ. ನಿಮ್ಮ ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ದೊರೆಯುವ ಸಂಭವವಿದ್ದು, ಗುರುವಿನ ಕೃಪೆ ಇದೆ.ರಂಗ ಚಲನ ಚಿತ್ರ ರಂಗದ ಕಲಾವಿದರುಗಳಿಗೆ ಎಲ್ಲಿಲ್ಲದ ಬೇಡಿಕೆ, ಗೌರವಾದರಗಳು ದೊರಕುವ ಸಂಭವವಿದೆ.

ವೃಷಭ:-

ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮಕ್ಕಳ ಉದ್ಯೋಗಕ್ಕಾಗಿ ಶ್ರಮ ವಹಿಸಬೇಕಾದೀತು. ಸಣ್ಣಪುಟ್ಟ ವಿಷಯಗಳಿಗೆ ಸಂಶಯ ತಾಳುತ್ತಾ ಕೂತರೆ ಮಹತ್ತರವಾದ ಕಾರ್ಯ ಮಾಡಲು ಆಗುವುದಿಲ್ಲ.

ಮಿಥುನ:

ನಿಮ್ಮ  ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಉದ್ಯೋಗ ಬದಲಾವಣೆಯ ಸಾಧ್ಯತೆ. ರಾಜಕೀಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ಮಾಡುವಿರಿ.ನಿಮ್ಮ ಮನೆ ದೇವರ ಪ್ರಾರ್ಥನೆ ಮಾಡಿ.

ಕಟಕ :-

ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ.ನಿಮ್ಮ ಮನೆಯಲ್ಲಿ ನಿಮ್ಮ ಮಾತನ್ನು ಆಲಕ್ಷಿಸುವುದು, ನಿಮ್ಗೆ ನೋವು ತರಲಿದೆ.ಆದ್ದರಿಂದ ಆದಷ್ಟೂ ತಾಳ್ಮೆಯಿಂದ ಇರಿ. ಮನೆಯವರ ಆರೋಗ್ಯದಲ್ಲಿ ಉತ್ತಮ ಸುಧಾರಣೆ ಕಾಣಿವಿರಿ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಿ ಉನ್ನತಿಗೆ ಮಾರ್ಗವಾಗಲಿದೆ.

 ಸಿಂಹ:

ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು.ತಾಂತ್ರಿಕ ವಿದ್ಯೆಯಲ್ಲಿ ತೊಡಗಿಕೊಂಡವರಿಗೆ ಯಶಸ್ಸು. ಯಶಸ್ಸು ಸಿಗುವುದೇ ನಿಮಗೆ ಮರೀಚಿಕೆ ಆಗುತ್ತಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾದ ಒಂದು ದಿನ.ಬಿಡುವಿಲ್ಲದ ಕೆಲಸದಿಂದ ದೇಹಾಯಾಸ ಉಂಟಾಗಲಿದೆ. ಸರ್ಕಾರಿ ಕೆಲಸಗಳಿಗೆ ಅಲೆದಾಡುವ ಸಾಧ್ಯತೆ ಕಂಡುಬರುವುದು.

ಕನ್ಯಾ :-

ಕೆಲಸ ಕಾರ್ಯಗಳನ್ನು ಚುರುಕು ಮಾಡಬೇಕಾಗುವುದು. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಮನಸ್ಥಿತಿಯಲ್ಲಿರುತ್ತೀರಿ. ನಿಮ್ಮನ್ನು ಎಲ್ಲರೂ ಆದರಿಸುವರು. ಕುಟುಂಬದ ವಿಷಯಗಳ ಬಗ್ಗೆ ಹಿರಿಯರೊಂದಿಗೆ ಮಾತುಕತೆ ಸಾಧ್ಯತೆ.

ತುಲಾ:

ಪಿತ್ರಾರ್ಜಿತ ಆಸ್ತಿ ದೊರಕುವ ಸಂಭವ ಕಂಡುಬರುವುದು.ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ವೃತ್ತಿ ಜೀವನದಲ್ಲಿ ಹೊಸ ತಿರುವು.

ವೃಶ್ಚಿಕ :-

ಸಾಕಷ್ಟು ಹಣ ಹೂಡಿಕೆಯಲ್ಲಿ ತೊಡಗಿಸಲು ಅತ್ಯಂತ ಪ್ರಶಸ್ತ ಕಾಲ. ಸದ್ಯದ ಗ್ರಹಸ್ಥಿತಿ ಅಷ್ಟೇನೂ ಉತ್ತಮವಿಲ್ಲ. ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ.ಬಾಳಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪಗಳಿಗೆ ಅವಕಾಶ ಬೇಡ.ವ್ಯಾಪಾರ ವಹಿವಾಟಿನಿಂದಾಗಿ ಉತ್ತಮ ಲಾಭದ ಸಾಧ್ಯತೆ.

ಧನಸ್ಸು:

ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಯನ್ನು ರೂಪಿಸಲು ಸಕಾಲ. ಹೂಡಿಕೆ ಮಾಡಲು ಮತ್ತು ಊಹಪೋಹಗಳಿಗೆ ಒಳ್ಳೆಯ ದಿನವಲ್ಲ. ನಿಮ್ಮ ಮನಸ್ಸಿನ ವಿಚಾರವನ್ನು ಸ್ನೇಹಿತರೆದುರು ಹೇಳಿಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ವಸ್ತುಗಳ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ.

ಮಕರ :-

ಅನಿರೀಕ್ಷಿತ ಬೆಳವಣಿಗೆಯಿಂದ ಉದ್ಯೋಗದಲ್ಲಿ ಹೆಚ್ಚಿನ ಅಧಿಕಾರ. ನ್ಯಾಯಾಲಯದಲ್ಲಿನ ವ್ಯವಹಾರಗಳಲ್ಲಿ ಸಕಾರಾತ್ಮಕ ನಿರ್ಣಯ ಹೊರಬೀಳುವುದು. ಕೋಪವನ್ನು ಬಿಟ್ಟುಬಿಡಿ. ಇದರಿಂದ ನಿಮ್ಮ ಕಾರ್ಯಗಳು ಸುಗಮವಾಗಿ ಆಗುವುದು. ಸ್ನೇಹಿತರು ಮತ್ತು ಅಪರಿಚಿತರಿಬ್ಬರ ಬಗೆಗೂ ಎಚ್ಚರದಿಂದಿರಿ.

ಕುಂಭ:-

ಮಕ್ಕಳೊಂದಿಗೆ ಸಂತಸದ ದಿನವಾಗಿರುವುದು. ಬಂಧು ಮಿತ್ರರ ಆಗಮನ ಸಾಧ್ಯತೆಯೂ ಕಂಡುಬರುವುದು. ಒಂದು ಅಚ್ಚರಿಯ ಸಂದೇಶ ನಿಮಗೆ ಸಿಹಿ ಕನಸುಗಳನ್ನು ನೀಡುತ್ತದೆ. ರಿಯಲ್‌ ಎಸ್ಟೇಟ್‌ ಸಂಬಂಧಿಸಿದ ವ್ಯವಹಾರದಲ್ಲಿ ಎಚ್ಚರದಿಂದ ಇರಿ. ಮನರಂಜನೆ ಅಥವಾ ಹೊರನೋಟದ ಸುಧಾರಣೆಗಾಗಿ ಹೆಚ್ಚು ಖರ್ಚು ಮಾಡಬೇಡಿ.

ಮೀನ:-

ಮೇಲಾಧಿಕಾರಿಗಳಿಂದ ಕಿರಿಕಿರಿಯ ಸಾಧ್ಯತೆ ಇದ್ದು, ದಿನದಾಂತ್ಯಕ್ಕೆ ತಿಳಿಗೊಳ್ಳುವುದು. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡುವುದು ಒಳ್ಳೆಯದು. ಮಗನ ನೌಕರಿಯ ಬಗ್ಗೆ ಚಿಂತೆ ಕಾಡುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    (Video)ಕೇವಲ ಒಂದೇ ಗಂಟೆಯಲ್ಲಿ ಯೂಟ್ಯೂಬ್ ನಲ್ಲಿ ಚಿಂದಿಯಾಗಿದೆ ನಟ ಸಾರ್ವಭೌಮ ಚಿತ್ರದ ಟ್ರೈಲರ್!

    ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…

  • ಮನರಂಜನೆ

    ಸಿಕ್ಕ ಸಿಕ್ಕ ಹುಡುಗಿಯರಿಗೆ ಮುತ್ತಿಟ್ಟು ಲಕ್ಷ ಲಕ್ಷ ಹಣ ಸಂಪಾದನೆ ಮಾಡುವ ಸಖತ್ ಆಸಾಮಿ..!

    ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಸುದ್ದಿ

    ತಾಳಿ ಕಟ್ಟುವಾಗ ಪ್ರೇಮಿಯ ಎಂಟ್ರಿಗೆ ಸಿಕ್ತು ಟ್ವಿಸ್ಟ್! ಕೊನೆಗೂ ಒಂದಾದ ಪ್ರೇಮಿಗಳು…

    ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.